Homeಮುಖಪುಟಮೋರ್ಬಿ ಸೇತುವೆ ದುರಂತ: ಜಯಸುಖ್ ಪಟೇಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮೋರ್ಬಿ ಸೇತುವೆ ದುರಂತ: ಜಯಸುಖ್ ಪಟೇಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಅಸಮರ್ಪಕ ನಿರ್ವಹಣೆಯಿಂದ ಕಳೆದ ವರ್ಷ ಸಂಭವಿಸಿದ್ದ ಮೋರ್ಬಿ ಸೇತುವೆ ಕುಸಿತ ಪ್ರಕರಣದ ಪ್ರಮುಖ ಆರೋಪಿ ಒರೆವಾ ಗ್ರೂಪ್ ಎಂಡಿ ಜಯಸುಖ್ ಪಟೇಲ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಗುಜರಾತ್ ಹೈಕೋರ್ಟ್ ಕಾಯ್ದಿರಿಸಿದೆ. ‘ನ್ಯಾಯಾಲಯವು ಜಾಮೀನು ನೀಡುವ ವಿವೇಚನಾಧಿಕಾರವನ್ನು ಚಲಾಯಿಸಬಹುದು’ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೋರ್ಬಿ ಸೇತುವೆ ಕುಸಿದು 135 ಜನರು ಸಾವನ್ನಪ್ಪಿದ್ದರು. ಆರೋಪಿ ಪಟೇಲ್, ನರಹತ್ಯೆ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್ ಮಿತೇಶ್ ಅಮೀನ್ ಅವರು ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಅವರ ಪೀಠದ ಮುಂದೆ ಬುಧವಾರ ಜಾಮೀನಿಗೆ ಮನವಿ ಸಲ್ಲಿಸಿದರು. ‘ಕೆಲವೊಮ್ಮೆ ನಿರ್ದಿಷ್ಟ ಸೆರೆವಾಸ ಅನುಭಿಸಿ, ತನಿಖೆ ಪೂರ್ಣಗೊಂಡ ನಂತರ, ಹೆಚ್ಚುವರಿ ಸಾಕ್ಷಿಗಳ ಅಗತ್ಯವಿಲ್ಲದೆ ಇದ್ದಾಗ, ಅವರು ಉದ್ಯಮಿಯಾಗಿದ್ದು ಓಡಿಹೋಗುವ ಸಾಧ್ಯತೆಯಿಲ್ಲ. ಆದ್ದರಿಂದ, ಯಾವುದೇ ಷರತ್ತುಗಳನ್ನು ಪರಿಗಣಿಸಿ ಜಾಮೀನು ನೀಡುವುದು ನ್ಯಾಯಾಲಯದ ವಿವೇಚನೆಗೆ ಬಿಟ್ಟದ್ದು’ ಎಂಬ ಸುಪ್ರೀಂಕೋರ್ಟಿನ ಸಲಹೆಯನ್ನು ಅವರು ಉಲ್ಲೇಖಿಸಿದ್ದಾರೆ.

ಈ ನಡುವೆ, ‘ಮೊರ್ಬಿ ಸೇತುವೆ ದುರಂತ ಸಂತ್ರಸ್ತರ ಸಂಘ’ದ ಅಡಿಯಲ್ಲಿ ಹಲವಾರು ಸಂತ್ರಸ್ತರ ಪರವಾಗಿ ವಾದ ಮಂಡಿಸಿದ ವಕೀಲ ರಾಹುಲ್ ಶರ್ಮಾ, ಈ ಹಿಂದಿನ ಜಾಮೀನು ಅರ್ಜಿಯನ್ನು ವಿರೋಧಿಸಿದ್ದರು. ಈ ಕೃತ್ಯವು ಸುಲಭವಾಗಿ ನಿರ್ಲಕ್ಷ್ಯ ಮಾಡುವ ಪ್ರಕರಣವಲ್ಲ. ಬದಲಿಗೆ, ಸಮಗ್ರ ನಿರ್ಲಕ್ಷ್ಯ ಎಂದು ಕೋರ್ಟಿಗೆ ಮನವರಿಕೆ ಮಾಡಿದ್ದರು. ‘ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷ್ಯವನ್ನು ನಾಶ ಮಾಡುವ ಅಥವಾ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ’ ಎಂದು ವಾದಿಸಿದ್ದರು.

ಬುಧವಾರ ವಾದ-ಪ್ರತಿವಾದಗಳು ಪೂರ್ಣಗೊಂಡ ನಂತರ, ನ್ಯಾಯಮೂರ್ತಿ ಜೋಶಿ ಅವರು ಜಾಮೀನು ಅರ್ಜಿಯನ್ನು ತೀರ್ಪನ್ನು ಕಾಯ್ದಿರಿಸಿದರು. ಹತ್ತು ಜನ ಆರೋಪಿಗಳು ಮೋರ್ಬಿ ಸೇತುವೆ ದುರಂತದ ಆರೋಪಿಗಳಾಗಿದ್ದಾರೆ. ಅದರಲ್ಲಿ ಆರು ಮಂದಿಗೆ ಈಗಾಗಲೇ ಜಾಮೀನು ನೀಡಲಾಗಿದ್ದು, ಜೈಸುಖ್ ಸೇರಿದಂತೆ ಉಳಿದ ಮೂವರು ಇನ್ನೂ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...