Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...