Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...