Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...