Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...