Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...