Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...