Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...