Homeಮುಖಪುಟಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

ಮೊರ್ಬಿ ಸೇತುವೆ ತಂತಿಗಳು ತುಕ್ಕು ಹಿಡಿದಿದ್ದವು; ಎಸ್‌ಐಟಿ ವರದಿ ಹೇಳಿದ್ದೇನು?

- Advertisement -
- Advertisement -

ಗುಜರಾತ್‌ನ ಮೊರ್ಬಿ ಸೇತುವೆಯ ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದವು. ಹಳೆಯ ಸಸ್ಪೆಂಡರ್‌ಗಳನ್ನು ದುರಸ್ತಿ ವೇಳೆ ಹೊಸದರೊಂದಿಗೆ ಬೆಸುಗೆ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತಿಳಿಸಿದೆ.

ಮೊರ್ಬಿ ಸೇತುವೆ ದುರಂತದ ಕುರಿತು ತನಿಖೆ ನಡೆಸಲು ಗುಜರಾತ್‌ ಸರ್ಕಾರ ನೇಮಿಸಿದ್ದ ಎಸ್‌ಐಟಿ, “ದುರಸ್ತಿಯಲ್ಲಿ ಆಗಿರುವ ಲೋಪದೋಷ”ಗಳನ್ನು ಪಟ್ಟಿ ಮಾಡಿದೆ.

ಮಚ್ಚು ನದಿಯ ಮೇಲಿನ ತೂಗು ಸೇತುವೆಯನ್ನು ಕಳೆದ ಅಕ್ಟೋಬರ್‌ನಲ್ಲಿ ದುರಸ್ತಿ ಮಾಡಲಾಗಿತ್ತು. ಆ ನಂತರ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಳ್ಳಲಾಗಿತ್ತು. ಸೇತುವೆಯನ್ನು ತೆರೆದ ನಾಲ್ಕು ದಿನಗಳ ನಂತರ ದುರಂತ ಘಟಿಸಿ, 141 ಜನರು ಸಾವನ್ನಪ್ಪಿಸಿದ್ದರು.

“ಮೊರ್ಬಿ ಸೇತುವೆ ಘಟನೆಯ ಪ್ರಾಥಮಿಕ ವರದಿ”ಯನ್ನು ಡಿಸೆಂಬರ್ 2022ರಲ್ಲಿ ಎಸ್‌ಐಟಿ ಸಲ್ಲಿಸಿದೆ. ಈ ವರದಿಯನ್ನು ಇತ್ತೀಚೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯೊಂದಿಗೆ ಹಂಚಿಕೊಂಡಿದೆ.

ಐಎಎಸ್ ಅಧಿಕಾರಿ ರಾಜ್‌ಕುಮಾರ್ ಬೇನಿವಾಲ್, ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ರಾಜ್ಯ ರಸ್ತೆ ಮತ್ತು ಕಟ್ಟಡ ಇಲಾಖೆಯ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರು ಈ ಎಸ್‌ಐಟಿಯ ಸದಸ್ಯರಾಗಿದ್ದಾರೆ.

ಒರೆವಾ ಗ್ರೂಪ್ ನಡೆಸಿದ ದುರಸ್ತಿ ಕಾರ್ಯದಲ್ಲಿ ಗಂಭೀರ ಲೋಪಗಳಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಅಕ್ಟೋಬರ್ 30ರ ಸಂಜೆ ಕೇಬಲ್ ಕಟ್‌ ಆಗುವ ಮೊದಲೇ ಒಂದು ಕೇಬಲ್‌ ತುಕ್ಕು ಹಿಡಿದಿತ್ತು. ಅದರ ಅರ್ಧದಷ್ಟು ತಂತಿಗಳು ಈಗಾಗಲೇ ಮುರಿದಿದ್ದವು ಎಂದಿದೆ ವರದಿ.

ಪ್ರತಿಯೊಂದು ಕೇಬಲ್ ಅನ್ನು ಏಳು ಎಳೆಗಳಿಂದ ರಚಿಸಲಾಗಿದೆ, ಪ್ರತಿಯೊಂದೂ ಏಳು ಉಕ್ಕಿನ ತಂತಿಗಳನ್ನು ಒಳಗೊಂಡಿದೆ. ಈ ಕೇಬಲ್ ಅನ್ನು ರೂಪಿಸಲು ನಲವತ್ತೊಂಬತ್ತು ತಂತಿಗಳನ್ನು ಏಳು ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ ಎಂದು ಎಸ್‌ಐಟಿ ವರದಿ ತಿಳಿಸಿದೆ.

“49 ತಂತಿಗಳಲ್ಲಿ (ಆ ಕೇಬಲ್‌ನ) 22 ತಂತಿಗಳು ತುಕ್ಕು ಹಿಡಿದಿರುವುದನ್ನು ಗಮನಿಸಲಾಗಿದೆ. ಘಟನೆಯ ಮೊದಲೇ ಆ ತಂತಿಗಳು ಈಗಾಗಲೇ ಮುರಿದುಹೋಗಿರಬಹುದು. ಉಳಿದ 27 ತಂತಿಗಳು ಇತ್ತೀಚೆಗೆ ಮುರಿದು ಬಿದ್ದಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವೀಕರಣ ಕಾರ್ಯದ ಸಮಯದಲ್ಲಿ, “ಹಳೆಯ ಸಸ್ಪೆಂಡರ್‌ಗಳನ್ನು (ಜನರು ನಡೆದಾಡುವ ಹಾಸಿಗೂ ಮೇಲಿನ ಕೇಬಲ್‌ಗೂ ಸಂಪರ್ಕ ಕಲ್ಪಿಸುವ ಸ್ಟೀಲ್ ರಾಡ್‌ಗಳು) ಹೊಸ ಸಸ್ಪೆಂಡರ್‌ಗಳೊಂದಿಗೆ ಬೆಸುಗೆ ಹಾಕಲಾಗಿದೆ” ಎಂದು ವರದಿ ಹೇಳಿದೆ. ಹಾಗಾಗಿ ಸಸ್ಪೆಂಡರ್‌ಗಳು ಬೇರೆಯ ರೀತಿಯಲ್ಲಿ ವರ್ತಿಸಲಾರಂಭಿಸಿವೆ. ಈ ರೀತಿಯ ಸೇತುವೆಗಳಲ್ಲಿ ಭಾರವನ್ನು ತಡೆಯಬೇಕಾದರೆ ಸಿಂಗಲ್ ರಾಡ್ ಸಸ್ಪೆಂಡರ್‌ಗಳನ್ನು ಬಳಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಮೊರ್ಬಿ ಸ್ಥಳೀಯ ಸಂಸ್ಥೆಯು, ಒರೆವಾ ಗ್ರೂಪ್‌ಗೆ ನೀಡಲಾದ ಒಪ್ಪಂದದ ಕುರಿತು ಎರಡು ಪ್ರತ್ಯೇಕ ನಿರ್ಣಯಗಳನ್ನು ಈ ತಿಂಗಳ ಆರಂಭದಲ್ಲಿ ಅಂಗೀಕರಿಸಿತು. ಒಂದು ನಿರ್ಣಯವನ್ನು ಪೌರಕಾರ್ಮಿಕರ ಪದಾಧಿಕಾರಿಗಳು ಮಂಡಿಸಿದರೆ, ಮತ್ತೊಂದನ್ನು ಕೌನ್ಸಿಲರ್‌ಗಳು ಮಂಡಿಸಿದರು. ಒರೆವಾ ಗ್ರೂಪ್‌ಗೆ ನವೀಕರಣ ಗುತ್ತಿಗೆಯನ್ನು ನೀಡಿರುವ ಒಪ್ಪಂದದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಎರಡೂ ಗುಂಪುಗಳು ಹೇಳಿಕೊಂಡಿವೆ.

ಮೊರ್ಬಿ ಸೇತುವೆಯನ್ನು ದುರಸ್ತಿ ಮಾಡುವ ಗುತ್ತಿಗೆಯನ್ನು ಒರೆವಾ ಗ್ರೂಪ್‌ಗೆ ಸ್ಥಳೀಯ ಪುರಸಭೆಯಿಂದ ಮಾರ್ಚ್ 2022 ರಲ್ಲಿ ನೀಡಲಾಗಿತ್ತು. ಒರೆವಾ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಜಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

ಒರೆವಾ ಗ್ರೂಪ್ ತನ್ನ ಅನುಮತಿಯಿಲ್ಲದೆ ಸೇತುವೆಯನ್ನು ಮತ್ತೆ ತೆರೆದಿದೆ ಎಂದು ನಾಗರಿಕ ಸಂಸ್ಥೆ ಈಗ ಹೇಳಿಕೊಂಡಿದೆ.

ಇದನ್ನೂ ಓದಿರಿ: ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

‌ಇದರ ನಡುವೆ ಸೇತುವೆ ಕುಸಿತ ಮತ್ತು ಅದರಿಂದ ಉಂಟಾದ ಅಪಾರ ಸಾವು ನೋವಿನ ಕುರಿತಾದ ಸ್ವಯಂ ಮೋಟೋ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಗುಜರಾತ್ ಹೈಕೋರ್ಟ್, “ಮೊದಲು ಟೆಂಡರ್ ಕರೆಯದೆ ಒರೆವಾ ಗುಂಪಿಗೆ ಹೇಗೆ ಗುತ್ತಿಗೆ ನೀಡಲಾಯಿತು?” ಎಂದು ಮೊರ್ಬಿ ಪುರಸಭೆಗೆ ಪ್ರಶ್ನಿಸಿದೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನ್ನ ಆರೋಪಪಟ್ಟಿಯನ್ನು ಜನವರಿ ಕೊನೆಯಲ್ಲಿ ಸಲ್ಲಿಸಿದರು. ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮತ್ತು ಇತರ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದುರಸ್ತಿ ಕಾರ್ಯದಲ್ಲಿ ಆಗಿರುವ ಹಲವಾರು ಸಮಸ್ಯೆಗಳನ್ನು ಎಸ್‌ಐಟಿ ಕಂಡುಹಿಡಿದಿತ್ತು. ಸೇತುವೆಯ ಮೇಲಿನ ಚಲನವಲನವನ್ನು ನಿಯಂತ್ರಿಸದ ಕಾರಣ ಮತ್ತು ಸೇತುವೆಯ ನವೀಕರಣದಲ್ಲಿ ಹಲವಾರು ವಿನ್ಯಾಸ ದೋಷಗಳು ಕಂಡುಬಂದಿರುವುದರಿಂದ ಪುರಸಭೆಯನ್ನೂ ಎಸ್‌ಐಟಿ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...