Homeಮುಖಪುಟಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

ಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

- Advertisement -
- Advertisement -

ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರಿಗೆ ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಅವರನ್ನು ಗುರುವಾರ ಮತ್ತೆ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರ ಕುರಿತು ಸುಳ್ಳು ಸುದ್ದಿಯನ್ನು ಹರಡುವ ಮೂಲಕ ‘ಚುನಾವಣೆ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಲಾಗಿದೆ’ ಎಂಬ ಆರೋಪದ ಮೇಲೆ ಮೊರ್ಬಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಗುರುವಾರ ಸಾಕೇತ್‌ ಅವರರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಮೊದಲ ಪ್ರಕರಣದಲ್ಲಿ ಗೋಖಲೆ ಜಾಮೀನು ಪಡೆದ ‘ಕೇವಲ ಒಂದು ಗಂಟೆ’ ನಂತರ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಮಾಡಲಾದ ಆರೋಪಗಳು ಅಹಮದಾಬಾದ್‌ನಲ್ಲಿ ದಾಖಲಾಗಿರುವ ಮೊದಲ ಪ್ರಕರಣದಂತೆಯೇ ಇವೆ. ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಡಿಸೆಂಬರ್ 1ರಂದು ಗೋಖಲೆ ಅವರು ಟ್ವೀಟ್ ಮಾಡಿ, “ಮೋದಿಯವರು ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚಾಗಿದೆ ಎಂಬ ವಿಷಯವನ್ನು ಮಾಹಿತಿ ಹಕ್ಕು ಅರ್ಜಿ ಬಹಿರಂಗಪಡಿಸಿದೆ” ಎಂದು ಆರೋಪಿಸಿ ಸುದ್ದಿ ಕ್ಲಿಪ್ಪಿಂಗ್ ಹಂಚಿಕೊಂಡಿದ್ದರು. ಆದರೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ (ಪಿಐಬಿ) ಫ್ಯಾಕ್ಟ್‌ಚೆಕ್‌ ಖಾತೆಯು ಈ ಆರೋಪವನ್ನು ನಿರಾಕರಿಸಿತ್ತು.

ಈ ಸುದ್ದಿ ಕ್ಲಿಪ್ಪಿಂಗ್ ಸ್ಥಳೀಯ ಪತ್ರಿಕೆ ಗುಜರಾತ್ ಸಮಾಚಾರ್‌ಗೆ ಸಂಬಂಧಿಸಿದೆ. ಆದರೆ ಪತ್ರಿಕೆಯು ಈ ಸುದ್ದಿಯನ್ನು ಪ್ರಕಟಿಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ಗೋಖಲೆ ಅವರನ್ನು ಮೊದಲು ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿ ಗುಜರಾತ್ ಪೊಲೀಸರು ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಅರೆಸ್ಟ್‌ ಮಾಡಲಾಯಿತು. ನಂತರ ಡಿಸೆಂಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯುವುದಕ್ಕಾಗಿ ಮೋದಿಯವರ ಮೋರ್ಬಿ ಭೇಟಿಯ ಬಗ್ಗೆ ಗೋಖಲೆ ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಗುರುವಾರ, ತೃಣಮೂಲ ಕಾಂಗ್ರೆಸ್ ವಕ್ತಾರರಿಗೆ ಅಹಮದಾಬಾದ್ ನ್ಯಾಯಾಲಯವು ಪ್ರಕರಣದಲ್ಲಿ ಜಾಮೀನು ನೀಡಿತು. ಪಕ್ಷದ ಸಂಸದ ಡೆರೆಕ್ ಒ’ಬ್ರಿಯಾನ್ ಗುರುವಾರ ಸಂಜೆ 4.47 ಕ್ಕೆ ಜಾಮೀನಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಾಗ್ಯೂ, ಐದು ಗಂಟೆಗಳ ನಂತರ, ರಾತ್ರಿ 8.45ಕ್ಕೆ ಗೋಖಲೆಯನ್ನು ಮತ್ತೆ ಬಂಧಿಸಲಾಯಿತು ಎಂದು ಒ’ಬ್ರಿಯಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಯಾವುದೇ ಸೂಚನೆ ಅಥವಾ ವಾರಂಟ್ ಇಲ್ಲದೆ ವಕ್ತಾರರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ‘ಅಜ್ಞಾತ ಸ್ಥಳ’ಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ, ಗೋಖಲೆ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ (ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಮೊರ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯೊಬ್ಬರು, ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಿದ್ದಾರೆ. ಗುಜರಾತ್‌ನಲ್ಲಿ ರಾಜ್ಯ ಚುನಾವಣೆಗಳ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಗೋಖಲೆ ಅವರು ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ ಪಕ್ಷವು ಐದು ಸದಸ್ಯರ ನಿಯೋಗವನ್ನು ಮೊರ್ಬಿಗೆ ಕಳುಹಿಸಿದೆ. “ಮೊರ್ಬಿ ದುರಂತಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನೂ ಈವರೆಗೆ ಬಂಧಿಸಿಲ್ಲ. ಆದರೆ ಸತ್ಯ ಹೇಳುವವರಿಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಪಕ್ಷವು ಟ್ವೀಟ್ ಮಾಡಿದೆ. “ನಾವು ಸಾಕೇತ್ ಗೋಖಲೆ ಅವರ ಪರವಾಗಿ ನಿಲ್ಲುತ್ತೇವೆ ಮತ್ತು ನಾವು ನಮ್ಮ ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತೇವೆ” ಎಂದು ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....