Homeಮುಖಪುಟಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಸೇವಾ ಪರಮೋ ಧರ್ಮ- ಸೇವೆಯು ಸ್ವತಃ ಸಂತೋಷ ನೀಡುತ್ತದೆ ಎಂದು ನಮ್ಮ ದೇಶದಲ್ಲಿ ಒಂದು ಮಾತಿದೆ. ಇತರರಿಗೆ ಸೇವೆ ಸಲ್ಲಿಸುವ ಜನರಿಗೆ ಸಾಕಷ್ಟು ವಿಶ್ವಾಸ, ಸಕಾರಾತ್ಮಕತೆ ಮತ್ತು ಚೈತನ್ಯವಿದೆ ಎಂದು ಪ್ರಧಾನಿ ಹೇಳಿದರು.

- Advertisement -
- Advertisement -

ಆರ್ಥಿಕತೆಯ ಬಹುಪಾಲು ಭಾಗವು ತೆರೆದುಕೊಂಡಿದೆ. ಇದರಿಂದ ಎಲ್ಲರೂ ಹೆಚ್ಚು ಜಾಗರೂಕರಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ತಿಳಿಸಿದ್ದಾರೆ.

ದೇಶವನ್ನು ಲಾಕ್‌ಡೌನ್‌ನಿಂದ ತೆರವು ಮಾಡುವ ಹಂತ ಹಂತದ ಯೋಜನೆಯೊಂದಿಗೆ ಕೇಂದ್ರವು ಜೂನ್ 30ರವರೆಗೆ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ವಿಸ್ತರಿಸಿದೆ. ಈ ಮೊದಲು ನಿಷೇಧಿಸಲಾದ ಎಲ್ಲಾ ಚಟುವಟಿಕೆಗಳು ಹಲವು ಹಂತಗಳಲ್ಲಿ ತೆರೆದುಕೊಳ್ಳಲಿವೆ ಎಂದು ಗೃಹ ಸಚಿವಾಲಯ ನಿನ್ನೆ ಘೋಷಿಸಿದ ಹೊಸ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

“ನಾನು ಕೊನೆಯ ಬಾರಿ ಮನ್‌ಕಿಬಾತ್‌ನಲ್ಲಿ ಮಾತನಾಡಿದಾಗ, ಎಲ್ಲಾ ರೀತಿಯ ಪ್ರಯಾಣಯಾನವನ್ನು ಮುಚ್ಚಲಾಗಿತ್ತು. ಆದರೆ ಈಗ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಆದರೆ ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ನಾವು ಅಸಡ್ಡೆ ಮಾಡಬಾರದು. ನಾವು ಈಗ ಹೆಚ್ಚು ಪ್ರಾಮಾಣಿಕವಾಗಿ ಸಾಮಾಜಿಕ ಅಂತರ ಮತ್ತು ಇತರ ನಿಯಮಾವಳಿಗಳನ್ನು ಅನುಸರಿಸಬೇಕಾಗಿದೆ” ಎಂದು ಪ್ರಧಾನಿ ಹೇಳಿದ್ದಾರೆ.

ಈ ಹೋರಾಟದಲ್ಲಿ ಭಾರತವು ಸಾಕಷ್ಟು ಸವಾಲುಗಳನ್ನು ಎದುರಿಸಿದೆ ಎಂದ ಅವರು, ಆದರೂ ಕಡಿಮೆ ಜನಸಂಖ್ಯೆ ಹೊಂದಿರುವ ಇತರ ದೇಶಗಳಿಗೆ ಹೋಲಿಸಿದರೆ ನಾವು ಕರೋನವೈರಸ್ ಅನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಯಿತು. ಸಾಮೂಹಿಕ ಪ್ರಯತ್ನಗಳಿಂದ ಭಾರತವು ಕರೋನವೈರಸ್ ವಿರುದ್ಧದ ಯುದ್ಧವನ್ನು ನಡೆಸುತ್ತಿದೆ. ಜಗತ್ತನ್ನು ನೋಡುವಾಗ, ಭಾರತೀಯರ ಸಾಧನೆ ಎಷ್ಟು ದೊಡ್ಡದಾಗಿದೆ ಎಂದು ನಮಗೆ ತಿಳಿದಿದೆ ”ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

60 ದಿನಗಳ ಲಾಕ್ ಡೌನ್ ಸಮಯದಲ್ಲಿ ಭಾರತವು ಅಗ್ರ 10 ಕರೋನವೈರಸ್ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನವನ್ನು ತಲುಪಿದೆ. ಕಳೆದ 24 ಗಂಟೆಗಳಲ್ಲಿ 8,380 ಹೊಸ ರೋಗಿಗಳ ದಾಖಲೆಯ ಜಿಗಿತದೊಂದಿಗೆ ದೇಶದಲ್ಲಿ ಸುಮಾರು 1.82 ಲಕ್ಷ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಈ ಬಿಕ್ಕಟ್ಟಿನ ಅವಧಿಯಲ್ಲಿ ಜನರಿಗೆ ಸೇವೆ ಸಲ್ಲಿಸಲು ಜನರು ಪ್ರಾರಂಭಿಸಿದ ವಿವಿಧ ಸಂಘ ಸಂಸ್ಥೆಗಳ ಕ್ರಮಗಳನ್ನು ಶ್ಲಾಘಿಸಿದ ಅವರು, ಸೇವಾ ಪರಮೋ ಧರ್ಮ- ಸೇವೆಯು ಸ್ವತಃ ಸಂತೋಷ ನೀಡುತ್ತದೆ ಎಂದು ನಮ್ಮ ದೇಶದಲ್ಲಿ ಒಂದು ಮಾತಿದೆ. ಇತರರಿಗೆ ಸೇವೆ ಸಲ್ಲಿಸುವ ಜನರಿಗೆ ಸಾಕಷ್ಟು ವಿಶ್ವಾಸ, ಸಕಾರಾತ್ಮಕತೆ ಮತ್ತು ಚೈತನ್ಯವಿದೆ ಎಂದು ಪ್ರಧಾನಿ ಹೇಳಿದರು.

ಹಿಂದಿನ ಮನ್‌ ಕಿ ಬಾತ್‌ನಲ್ಲಿ ಸಂಚಿಕೆಯಲ್ಲಿ, ಕೋವಿಡ್ -19 ರ ಕಾರಣದಿಂದಾಗಿ ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಗಮನಹರಿಸಿದ್ದರು ಮತ್ತು ಲಾಕ್ ಡೌನ್ ಸಮಯದಲ್ಲಿ ಬಡವರು, ವಲಸಿಗರು ಮತ್ತು ನಿರ್ಗತಿಕರಿಗೆ ಸಹಾಯ ಮಾಡುವಂತೆ ಜನರನ್ನು ಒತ್ತಾಯಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್ 5.0: ದೇಶದಾದ್ಯಂತ ಜೂನ್ 30 ವರೆಗೆ ವಿಸ್ತರಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...