Homeಮುಖಪುಟಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಸೇವಾ ಪರಮೋ ಧರ್ಮ- ಸೇವೆಯು ಸ್ವತಃ ಸಂತೋಷ ನೀಡುತ್ತದೆ ಎಂದು ನಮ್ಮ ದೇಶದಲ್ಲಿ ಒಂದು ಮಾತಿದೆ. ಇತರರಿಗೆ ಸೇವೆ ಸಲ್ಲಿಸುವ ಜನರಿಗೆ ಸಾಕಷ್ಟು ವಿಶ್ವಾಸ, ಸಕಾರಾತ್ಮಕತೆ ಮತ್ತು ಚೈತನ್ಯವಿದೆ ಎಂದು ಪ್ರಧಾನಿ ಹೇಳಿದರು.

- Advertisement -
- Advertisement -

ಆರ್ಥಿಕತೆಯ ಬಹುಪಾಲು ಭಾಗವು ತೆರೆದುಕೊಂಡಿದೆ. ಇದರಿಂದ ಎಲ್ಲರೂ ಹೆಚ್ಚು ಜಾಗರೂಕರಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ತಿಳಿಸಿದ್ದಾರೆ.

ದೇಶವನ್ನು ಲಾಕ್‌ಡೌನ್‌ನಿಂದ ತೆರವು ಮಾಡುವ ಹಂತ ಹಂತದ ಯೋಜನೆಯೊಂದಿಗೆ ಕೇಂದ್ರವು ಜೂನ್ 30ರವರೆಗೆ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ವಿಸ್ತರಿಸಿದೆ. ಈ ಮೊದಲು ನಿಷೇಧಿಸಲಾದ ಎಲ್ಲಾ ಚಟುವಟಿಕೆಗಳು ಹಲವು ಹಂತಗಳಲ್ಲಿ ತೆರೆದುಕೊಳ್ಳಲಿವೆ ಎಂದು ಗೃಹ ಸಚಿವಾಲಯ ನಿನ್ನೆ ಘೋಷಿಸಿದ ಹೊಸ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

“ನಾನು ಕೊನೆಯ ಬಾರಿ ಮನ್‌ಕಿಬಾತ್‌ನಲ್ಲಿ ಮಾತನಾಡಿದಾಗ, ಎಲ್ಲಾ ರೀತಿಯ ಪ್ರಯಾಣಯಾನವನ್ನು ಮುಚ್ಚಲಾಗಿತ್ತು. ಆದರೆ ಈಗ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಆದರೆ ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ನಾವು ಅಸಡ್ಡೆ ಮಾಡಬಾರದು. ನಾವು ಈಗ ಹೆಚ್ಚು ಪ್ರಾಮಾಣಿಕವಾಗಿ ಸಾಮಾಜಿಕ ಅಂತರ ಮತ್ತು ಇತರ ನಿಯಮಾವಳಿಗಳನ್ನು ಅನುಸರಿಸಬೇಕಾಗಿದೆ” ಎಂದು ಪ್ರಧಾನಿ ಹೇಳಿದ್ದಾರೆ.

ಈ ಹೋರಾಟದಲ್ಲಿ ಭಾರತವು ಸಾಕಷ್ಟು ಸವಾಲುಗಳನ್ನು ಎದುರಿಸಿದೆ ಎಂದ ಅವರು, ಆದರೂ ಕಡಿಮೆ ಜನಸಂಖ್ಯೆ ಹೊಂದಿರುವ ಇತರ ದೇಶಗಳಿಗೆ ಹೋಲಿಸಿದರೆ ನಾವು ಕರೋನವೈರಸ್ ಅನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಯಿತು. ಸಾಮೂಹಿಕ ಪ್ರಯತ್ನಗಳಿಂದ ಭಾರತವು ಕರೋನವೈರಸ್ ವಿರುದ್ಧದ ಯುದ್ಧವನ್ನು ನಡೆಸುತ್ತಿದೆ. ಜಗತ್ತನ್ನು ನೋಡುವಾಗ, ಭಾರತೀಯರ ಸಾಧನೆ ಎಷ್ಟು ದೊಡ್ಡದಾಗಿದೆ ಎಂದು ನಮಗೆ ತಿಳಿದಿದೆ ”ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

60 ದಿನಗಳ ಲಾಕ್ ಡೌನ್ ಸಮಯದಲ್ಲಿ ಭಾರತವು ಅಗ್ರ 10 ಕರೋನವೈರಸ್ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನವನ್ನು ತಲುಪಿದೆ. ಕಳೆದ 24 ಗಂಟೆಗಳಲ್ಲಿ 8,380 ಹೊಸ ರೋಗಿಗಳ ದಾಖಲೆಯ ಜಿಗಿತದೊಂದಿಗೆ ದೇಶದಲ್ಲಿ ಸುಮಾರು 1.82 ಲಕ್ಷ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಈ ಬಿಕ್ಕಟ್ಟಿನ ಅವಧಿಯಲ್ಲಿ ಜನರಿಗೆ ಸೇವೆ ಸಲ್ಲಿಸಲು ಜನರು ಪ್ರಾರಂಭಿಸಿದ ವಿವಿಧ ಸಂಘ ಸಂಸ್ಥೆಗಳ ಕ್ರಮಗಳನ್ನು ಶ್ಲಾಘಿಸಿದ ಅವರು, ಸೇವಾ ಪರಮೋ ಧರ್ಮ- ಸೇವೆಯು ಸ್ವತಃ ಸಂತೋಷ ನೀಡುತ್ತದೆ ಎಂದು ನಮ್ಮ ದೇಶದಲ್ಲಿ ಒಂದು ಮಾತಿದೆ. ಇತರರಿಗೆ ಸೇವೆ ಸಲ್ಲಿಸುವ ಜನರಿಗೆ ಸಾಕಷ್ಟು ವಿಶ್ವಾಸ, ಸಕಾರಾತ್ಮಕತೆ ಮತ್ತು ಚೈತನ್ಯವಿದೆ ಎಂದು ಪ್ರಧಾನಿ ಹೇಳಿದರು.

ಹಿಂದಿನ ಮನ್‌ ಕಿ ಬಾತ್‌ನಲ್ಲಿ ಸಂಚಿಕೆಯಲ್ಲಿ, ಕೋವಿಡ್ -19 ರ ಕಾರಣದಿಂದಾಗಿ ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಗಮನಹರಿಸಿದ್ದರು ಮತ್ತು ಲಾಕ್ ಡೌನ್ ಸಮಯದಲ್ಲಿ ಬಡವರು, ವಲಸಿಗರು ಮತ್ತು ನಿರ್ಗತಿಕರಿಗೆ ಸಹಾಯ ಮಾಡುವಂತೆ ಜನರನ್ನು ಒತ್ತಾಯಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್ 5.0: ದೇಶದಾದ್ಯಂತ ಜೂನ್ 30 ವರೆಗೆ ವಿಸ್ತರಣೆ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...