Homeಮುಖಪುಟಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಸೇವಾ ಪರಮೋ ಧರ್ಮ- ಸೇವೆಯು ಸ್ವತಃ ಸಂತೋಷ ನೀಡುತ್ತದೆ ಎಂದು ನಮ್ಮ ದೇಶದಲ್ಲಿ ಒಂದು ಮಾತಿದೆ. ಇತರರಿಗೆ ಸೇವೆ ಸಲ್ಲಿಸುವ ಜನರಿಗೆ ಸಾಕಷ್ಟು ವಿಶ್ವಾಸ, ಸಕಾರಾತ್ಮಕತೆ ಮತ್ತು ಚೈತನ್ಯವಿದೆ ಎಂದು ಪ್ರಧಾನಿ ಹೇಳಿದರು.

- Advertisement -
- Advertisement -

ಆರ್ಥಿಕತೆಯ ಬಹುಪಾಲು ಭಾಗವು ತೆರೆದುಕೊಂಡಿದೆ. ಇದರಿಂದ ಎಲ್ಲರೂ ಹೆಚ್ಚು ಜಾಗರೂಕರಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ತಿಳಿಸಿದ್ದಾರೆ.

ದೇಶವನ್ನು ಲಾಕ್‌ಡೌನ್‌ನಿಂದ ತೆರವು ಮಾಡುವ ಹಂತ ಹಂತದ ಯೋಜನೆಯೊಂದಿಗೆ ಕೇಂದ್ರವು ಜೂನ್ 30ರವರೆಗೆ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ವಿಸ್ತರಿಸಿದೆ. ಈ ಮೊದಲು ನಿಷೇಧಿಸಲಾದ ಎಲ್ಲಾ ಚಟುವಟಿಕೆಗಳು ಹಲವು ಹಂತಗಳಲ್ಲಿ ತೆರೆದುಕೊಳ್ಳಲಿವೆ ಎಂದು ಗೃಹ ಸಚಿವಾಲಯ ನಿನ್ನೆ ಘೋಷಿಸಿದ ಹೊಸ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

“ನಾನು ಕೊನೆಯ ಬಾರಿ ಮನ್‌ಕಿಬಾತ್‌ನಲ್ಲಿ ಮಾತನಾಡಿದಾಗ, ಎಲ್ಲಾ ರೀತಿಯ ಪ್ರಯಾಣಯಾನವನ್ನು ಮುಚ್ಚಲಾಗಿತ್ತು. ಆದರೆ ಈಗ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಆದರೆ ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ನಾವು ಅಸಡ್ಡೆ ಮಾಡಬಾರದು. ನಾವು ಈಗ ಹೆಚ್ಚು ಪ್ರಾಮಾಣಿಕವಾಗಿ ಸಾಮಾಜಿಕ ಅಂತರ ಮತ್ತು ಇತರ ನಿಯಮಾವಳಿಗಳನ್ನು ಅನುಸರಿಸಬೇಕಾಗಿದೆ” ಎಂದು ಪ್ರಧಾನಿ ಹೇಳಿದ್ದಾರೆ.

ಈ ಹೋರಾಟದಲ್ಲಿ ಭಾರತವು ಸಾಕಷ್ಟು ಸವಾಲುಗಳನ್ನು ಎದುರಿಸಿದೆ ಎಂದ ಅವರು, ಆದರೂ ಕಡಿಮೆ ಜನಸಂಖ್ಯೆ ಹೊಂದಿರುವ ಇತರ ದೇಶಗಳಿಗೆ ಹೋಲಿಸಿದರೆ ನಾವು ಕರೋನವೈರಸ್ ಅನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಯಿತು. ಸಾಮೂಹಿಕ ಪ್ರಯತ್ನಗಳಿಂದ ಭಾರತವು ಕರೋನವೈರಸ್ ವಿರುದ್ಧದ ಯುದ್ಧವನ್ನು ನಡೆಸುತ್ತಿದೆ. ಜಗತ್ತನ್ನು ನೋಡುವಾಗ, ಭಾರತೀಯರ ಸಾಧನೆ ಎಷ್ಟು ದೊಡ್ಡದಾಗಿದೆ ಎಂದು ನಮಗೆ ತಿಳಿದಿದೆ ”ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

60 ದಿನಗಳ ಲಾಕ್ ಡೌನ್ ಸಮಯದಲ್ಲಿ ಭಾರತವು ಅಗ್ರ 10 ಕರೋನವೈರಸ್ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನವನ್ನು ತಲುಪಿದೆ. ಕಳೆದ 24 ಗಂಟೆಗಳಲ್ಲಿ 8,380 ಹೊಸ ರೋಗಿಗಳ ದಾಖಲೆಯ ಜಿಗಿತದೊಂದಿಗೆ ದೇಶದಲ್ಲಿ ಸುಮಾರು 1.82 ಲಕ್ಷ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಈ ಬಿಕ್ಕಟ್ಟಿನ ಅವಧಿಯಲ್ಲಿ ಜನರಿಗೆ ಸೇವೆ ಸಲ್ಲಿಸಲು ಜನರು ಪ್ರಾರಂಭಿಸಿದ ವಿವಿಧ ಸಂಘ ಸಂಸ್ಥೆಗಳ ಕ್ರಮಗಳನ್ನು ಶ್ಲಾಘಿಸಿದ ಅವರು, ಸೇವಾ ಪರಮೋ ಧರ್ಮ- ಸೇವೆಯು ಸ್ವತಃ ಸಂತೋಷ ನೀಡುತ್ತದೆ ಎಂದು ನಮ್ಮ ದೇಶದಲ್ಲಿ ಒಂದು ಮಾತಿದೆ. ಇತರರಿಗೆ ಸೇವೆ ಸಲ್ಲಿಸುವ ಜನರಿಗೆ ಸಾಕಷ್ಟು ವಿಶ್ವಾಸ, ಸಕಾರಾತ್ಮಕತೆ ಮತ್ತು ಚೈತನ್ಯವಿದೆ ಎಂದು ಪ್ರಧಾನಿ ಹೇಳಿದರು.

ಹಿಂದಿನ ಮನ್‌ ಕಿ ಬಾತ್‌ನಲ್ಲಿ ಸಂಚಿಕೆಯಲ್ಲಿ, ಕೋವಿಡ್ -19 ರ ಕಾರಣದಿಂದಾಗಿ ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಗಮನಹರಿಸಿದ್ದರು ಮತ್ತು ಲಾಕ್ ಡೌನ್ ಸಮಯದಲ್ಲಿ ಬಡವರು, ವಲಸಿಗರು ಮತ್ತು ನಿರ್ಗತಿಕರಿಗೆ ಸಹಾಯ ಮಾಡುವಂತೆ ಜನರನ್ನು ಒತ್ತಾಯಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್ 5.0: ದೇಶದಾದ್ಯಂತ ಜೂನ್ 30 ವರೆಗೆ ವಿಸ್ತರಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...