Homeಅಂಕಣಗಳುಬೆಂಗಾವಲೂರು ಎಂಬೋ ದಂಡು ಪ್ರದೇಶದ ಪಾಳೇಗಾರರಲ್ಲಿ ಬಡಪಾಯಿ ಕನ್ನಡಿಗರ ಬಿನ್ನವತ್ತಲೆ

ಬೆಂಗಾವಲೂರು ಎಂಬೋ ದಂಡು ಪ್ರದೇಶದ ಪಾಳೇಗಾರರಲ್ಲಿ ಬಡಪಾಯಿ ಕನ್ನಡಿಗರ ಬಿನ್ನವತ್ತಲೆ

- Advertisement -
- Advertisement -

ಮಾನ್ಯರೇ,

ತಾವು ನಮ್ಮ ವೋಟು ಪಡೆದು ಟಾಟಾ ಬೈ ಬೈ ಹೇಳಿ ನಮ್ಮ ಸುಂಕದ ಹಣದಿಂದ ಖರೀದಿ ಮಾಡಿದ ಪುಷ್ಪಕ ವಿಮಾನ ಹತ್ತಿ ಬೆಂಗಾವಲು ಊರಿಗೆ ಹೋದಮೇಲೆ ನಮ್ಮ ನಿಮ್ಮ ಭೇಟಿ ಇಲ್ಲ. ಒಂದು ಪತ್ರ ಇಲ್ಲ, ಈಮೇಲೂ ಇಲ್ಲ, ಎಸ್‌ಎಂಎಸ್‌ಗೆ ಉತ್ತರ ಇಲ್ಲ. ವಾಟ್ಸ್‌ಅಪ್ ಸಂದೇಶಕ್ಕೆ ಬ್ಲೂ ಟಿಕ್‌ನ ಪರತ್ ಪಾವತಿ ಸಹಿತ ಸಿಗಲಿಲ್ಲ. ವೋಟು ಕೇಳುವ ಮುನ್ನ ನೀವೇ ನಮ್ಮನ್ನು ಹುಡುಕಿಕೊಂಡು ಬಂದಿರಿ. ಆದರೆ ವೋಟು ಎಣಿಕೆ ನಂತರ ನೀವು ಅಂತರ್ದಾನವಾಗಿಬಿಟ್ಟಿರಿ. ನಮ್ಮ ಓಣಿಯಲ್ಲಿ ಪಿಕ್‌ಪಾಕೆಟ್ ಮಾಡಿ ಜೈಲಿಗೆ ಹೋಗಿದ್ದ, ನಿಮ್ಮ ಆಶೀರ್ವಾದದಿಂದ ಹೊರಗೆಬಂದಿದ್ದ ಕಳ್ಳ ಕಿಟ್ಯಾ ಈಗ ಕೆ. ಕೃಷ್ಣ ಕುಮಾರ್ ಆಗಿ ಬಿಟ್ಟಿದ್ದಾನೆ. ಅವನು ಈಗ ತಮ್ಮ ಪಿಎ ಆಗಿದ್ದೇನೆ ಎಂದೂ, ತಮ್ಮ ಸ್ವಯಂ ಘೋಷಿತ ಸಲಹೆಗಾರನಾಗಿಬಿಟ್ಟಿದ್ದಾನೆ ಎಂದೂ ಹೇಳಿಕೊಂಡಿದ್ದಾನೆ. ನನ್ನಂಥ ಬಡಪಾಯಿಗಳ ಪಾಲಿಗೆ ಅವನೇ ಮುಖ್ಯಮಂತ್ರಿಯಾಗಿ ಬಿಟ್ಟಿದ್ದಾನೆ.

ನಮಗೆ ಅವನ ಭೇಟಿಯೇ ದೇವ ದುರ್ಲಭವಾಗಿಬಿಟ್ಟಿದೆ. ಇನ್ನು ನಿಮ್ಮಂಥವರ ಮಾತು ಕೇವಲ ಆಕಾಶವಾಣಿಯಲ್ಲಿ ಕೇಳುತ್ತಿದೆ. ನೀವು ನಮ್ಮನ್ನು ಬಂದು ಭೇಟಿ ಆಗುವುದು ಇನ್ನು ಐದು ವರ್ಷದ ನಂತರ ಇದ್ದೇ ಇದೆ ಅಂತ ನಾವು ಸುಮ್ಮನೆ ಇದ್ದು ಬಿಡುತ್ತೇವೆ. ನೀವು ನಮ್ಮ ಊರನ್ನು ಉದ್ಧಾರ ಮಾಡ್ತೀರಿ ಅಂತ ಆಶ್ವಾಸನೆ ನೀಡಿದ್ದರೂ ಸಹಿತ ಮಾಡಿಲ್ಲ. ನಿಮ್ಮ ಊರಿನ ಮೇಲೆ ನಿಮಗೆ ಎಷ್ಟು ಪ್ರೀತಿ ಎಂದರೆ ನಿಮ್ಮ ಬಾಲ್ಯದಾಗ ನೀವು ಬಿಟ್ಟು ಹೋದಾಗ ಅದು ಹೆಂಗ ಇತ್ತೋ ಹಾಂಗೆ ಇರಬೇಕು ಅಂತ ನೀವು ಏನೂ ಬದಲಾವಣೆ ಮಾಡಿಲ್ಲ ಅಂತ ಜನ ಮಾತಾಡಿಕೊಳ್ಳುತ್ತಿದ್ದಾರೆ. ಇರಲಿ.

ಇದು ಎಲ್ಲಾ ಹೆಂಗ ಐತಿ ಅಂದರ, ಜಗಜಿತ್ ಸಿಂಗ್ ಅವರ ಗಜಲ್‌ನ ಸಾಲಿನ ಹಂಗ ಐತಿ.

“ಈ ವರ್ಷ ಬಹಳ ಮಳೆ ಆಗ್ತದ, ಬೆಳೆ ಬರ್ತದ, ಎಲ್ಲಾ ಛಲೋ ಆಗ್ತೆತಿ,

ಹಿಂಗ ಆಗ್ತದೋ, ಇಲ್ಲೋ, ಗೊತ್ತಿಲ್ಲ,

ಆದರ ಹಿಂಗ ಆಗ್ತದ ಅನ್ನುವ ಕನಸು ಮಾತ್ರ ಭಾರಿ ಛಲೋ ಐತಿ”.

ಇದೆಲ್ಲಾ ಐತಿ. ಇರಲಿ, ಆದರೂ ಉಭಯ ಕುಶಲೋಪರಿ ಸಾಂಪ್ರತ. ಇನ್ನು ನಮ್ಮ ಊರಿನವರ ಕಡೆಯಿಂದ ನಿಮಗೆ ಒಂದು ಮೂಕ ಅರ್ಜಿ.

ಮೆಹರ್‌ಬಾನ್ ಸಾಹೇಬರೇ,

ರಾಜ್ಯ ಸರಕಾರ ನೇಮಿಸಿದ ವಿಜಯ ಭಾಸ್ಕರ ಸಮಿತಿ ಆಡಳಿತ ಸುಧಾರಣೆ ಬಗ್ಗೆ ಕೆಲವು ಶಿಫಾರಸುಗಳನ್ನು ಮಾಡಿದೆ. ಮೊದಲ ಹಂತದಲ್ಲಿ ಕಂದಾಯ, ಆಹಾರ ಹಾಗೂ ರಸ್ತೆ ಸಾರಿಗೆ ಇಲಾಖೆಗಳ ಬಗ್ಗೆ ಸಲಹೆಗಳನ್ನು ನೀಡಿದೆ. ಇವುಗಳಲ್ಲಿ ಕೆಲವು ಜನಪರ ಸಲಹೆಗಳಾಗಿದ್ದು ಅವುಗಳನ್ನು ನಾವು ಸ್ವಾಗತ ಮಾಡುತ್ತೇವೆ. ಇನ್ನು ಕೆಲವು ವಿಷಯಗಳನ್ನು ನಾವು ಸಕಾರಣವಾಗಿ ವಿರೋಧಿಸುತ್ತೇವೆ.

ಅವುಗಳು ಇಂತಿವೆ:

ಸರಕಾರದ 800ಕ್ಕೂ ಹೆಚ್ಚು ಸೇವೆಗಳನ್ನು ಸೇವಾಸಿಂಧು ಎನ್ನುವ ಒಂದೇ ಜಾಲತಾಣ ಹಾಗೂ ತಂತ್ರಾಂಶದ ಮೂಲಕ ನೀಡುವುದು ಸ್ವಾಗತಾರ್ಹ. ಈ ಸೇವೆಗಳನ್ನು ಜನರಿಗೆ ದೊರಕಿಸಲು ನಗರಗಳಲ್ಲಿ ಕರ್ನಾಟಕ-ಒನ್ ಹಾಗೂ ಅಟಲ್‌ಜಿ ಜನಸ್ನೇಹಿ ಕೇಂದ್ರ ಹಾಗೂ ಹಳ್ಳಿಗಳಲ್ಲಿ ಗ್ರಾಮ ಪಂಚಾಯತ್ ಬಾಪೂಜಿ ಸೇವಾ ಕೇಂದ್ರಗಳನ್ನು ಏಕ ಗವಾಕ್ಷಿಗಳಾಗಿ ಬಳಸುವ ಯೋಜನೆ ಸಹಿತ ಸ್ವಾಗತಾರ್ಹ. ಇದರಿಂದ ಜನ ಅನೇಕ ಕಚೇರಿಗಳಿಗೆ ಅನಗತ್ಯವಾಗಿ ಎಡತಾಕುವುದು ತಪ್ಪುತ್ತದೆ.

PC : mandya.nic.in

ಆಹಾರ ಧಾನ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಸಹಿತ ಬಹಳ ಅನುಕೂಲಕರವಾದದು. ಆದರೆ ಇದಕ್ಕಾಗಿ ಜನರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದು ಒಳ್ಳೆಯದಲ್ಲ. ಇದರಿಂದ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಆಗುತ್ತದೆ. ಇದರ ಇನ್ನೊಂದು ಅಪಾಯಕಾರಿ ಸಾಧ್ಯತೆ ಏನು ಎಂದರೆ, ಈ ರೀತಿಯ ನಿಯಮ ಜಾರಿಗೆ ಬಂದರೆ, ಹಳ್ಳಿಗಳಲ್ಲಿ ಮನೆಗೆ ಆಹಾರ ಧಾನ್ಯ ತಂದು ಕೊಡುವ ಏಜೆಂಟ್‌ಗಳು ಹುಟ್ಟಿಕೊಳ್ಳಬಹುದು. ಆಹಾರ ಧಾನ್ಯಗಳನ್ನು ಮನೆಗೆ ಉಚಿತವಾಗಿ ತಲುಪಿಸುವ ವ್ಯವಸ್ಥೆ ಆರಂಭವಾದರೆ ಸರಕಾರಕ್ಕೆ ವಿವಿಧ ಮಟ್ಟದ ಮಧ್ಯವರ್ತಿಗಳ ಲಾಭ ಹಾಗೂ ಅವರ ಕಮಿಷನ್ ಹಣದ ಹಣ ಉಳಿತಾಯವಾಗುತ್ತದೆ. ಇದೆ ಹಣವನ್ನು ಮನೆ ಬಾಗಿಲಿಗೆ ತಲುಪಿಸುವ ಖರ್ಚಿಗೆ ಬಳಸಬಹುದು.

ಜನಸಂಖ್ಯೆ, ರಹವಾಸ, ಬೆಲೆ ಹಾಗೂ ರೈತಾಪಿ ಕುಟುಂಬದ ಪ್ರಮಾಣಪತ್ರಗಳು ಅನವಶ್ಯಕ ಎಂದು ಹೇಳಿ ಅವುಗಳನ್ನು ರದ್ದುಮಾಡಬೇಕು ಎನ್ನುವ ಶಿಫಾರಸು ಮಾಡಲಾಗಿದೆ. ಇದನ್ನು ಇನ್ನೊಮ್ಮೆ ಪರಿಶೀಲಿಸಬೇಕು. ಇದನ್ನು ಕೇವಲ ಆಡಳಿತಾತ್ಮಕ ಅನುಕೂಲಕತೆ ದೃಷ್ಟಿಯಿಂದ ನೋಡದೆ, ನಾಳೆ ಜನರಿಗೆ ಈ ಪ್ರಮಾಣ ಪತ್ರಗಳನ್ನು ನ್ಯಾಯಾಲಯಗಳ ಮುಂದೆ ಹಾಜರು ಪಡಿಸಲಿಕ್ಕೆ ಬರಬೇಕಾಗುವುದೋ ಬೇಡವೋ ಅನ್ನುವುದನ್ನು ನೋಡಿ ನಿರ್ಧಾರ ಮಾಡಬೇಕು. ಹಾಗೆ ರದ್ದುಮಾಡುವುದೇ ಆದಲ್ಲಿ, ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡ ಬಳಿಕವಷ್ಟೇ ರದ್ದುಮಾಡಬೇಕು.

ರಸ್ತೆ ಸಾರಿಗೆ ಅಧಿಕಾರಿಗಳು ಜಫ್ತಿ ಮಾಡಿದ ವಾಹನಗಳನ್ನು ಮಾರಾಟ ಮಾಡಲು ನ್ಯಾಯಾಲಯದ ಅನುಮತಿಗೆ ಕಾಯುವುದು ಬೇಡ ಎನ್ನುವ ಶಿಫಾರಸು ಇದರಲ್ಲಿ ಇದೆ.

ಇದನ್ನು ಜಾರಿಮಾಡುವ ಮುನ್ನ, ರಸ್ತೆ ಸಾರಿಗೆ ಇಲಾಖೆಯ ವಿವಿಧ ವಿಷಯಗಳಿಗೆ ಅನ್ವಯವಾಗುವಂತೆ, ವಿದ್ಯುತ್ ಪ್ರಾಧಿಕಾರ, ವಿಮೆ ಪ್ರಾಧಿಕಾರ, ಆಹಾರ ಪದಾರ್ಥ ಗುಣಮಟ್ಟ ನಿಯಂತ್ರಣ ಪ್ರಾಧಿಕಾರದ
ಮಾದರಿಯಲ್ಲಿ ಸಾರಿಗೆ ಪ್ರಾಧಿಕಾರ ಸ್ಥಾಪಿಸಬೇಕು.

ಈ ಸಮಿತಿಯ ಅತಿ ಮುಖ್ಯ ಶಿಫಾರಸು ಎಂದರೆ ಪ್ರಾದೇಶಿಕ ಆಯುಕ್ತರ ಕಚೆರಿಗಳನ್ನು ರದ್ದು ಮಾಡುವುದು. ಇದನ್ನು ನಾವು ವಿರೋಧಿಸುತ್ತೇವೆ. ಇದು ಅತ್ಯಂತ ಅಪಾಯಕಾರಿ. ಇದು ಭಾರತದ ಸಂವಿಧಾನದ ಮೂಲ ತತ್ವವಾದ ವಿಕೇಂದ್ರೀಕರಣ ವಿರೋಧಿ ಬೆಳವಣಿಗೆ. ಇದು ರಾಜ್ಯದ ಜನರಿಗಾಗಲಿ, ಅಭಿವೃದ್ಧಿ-ಸುಶಾಸನಕ್ಕಾಗಲಿ ಅನುಕೂಲಕರವಾದದ್ದಲ್ಲ. ಕೆಲವು ಜನ ಹಿರಿಯ ಐಎಎಸ್ ಅಧಿಕಾರಿಗಳು ಬೆಂಗಳೂರು ಬಿಟ್ಟುಹೋಗಲು ಮನಸು ಮಾಡುವುದಿಲ್ಲ ಎನ್ನುವ ಕಾರಣಕ್ಕೆ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದು ಮಾಡುವುದು ಸಾಧುವಲ್ಲ.

ರಾಜ್ಯದ 350 ಐಎಎಸ್ ಅಧಿಕಾರಿಗಳಲ್ಲಿ 60 ಜನ ಮಾತ್ರ ಬೆಂಗಾವಲು ಊರು ಬಿಟ್ಟು ಹೊರಗೆ ಇದ್ದಾರೆ. ಅವರಲ್ಲಿ ಮೂರು ಜನ ಪ್ರಾದೇಶಿಕ ಆಯುಕ್ತರು ಮಾತ್ರ ವಿಭಾಗ ಮಟ್ಟದಲ್ಲಿ ಇದ್ದಾರೆ. ಆ ಮೂರು ಹುದ್ದೆಗಳ ಸಲುವಾಗಿ ನೀವು ಆರು ಕೋಟಿ ಕನ್ನಡಿಗರ ಎದುರು ಕಣ್ಕಟ್ಟು ಆಡಬಾರದು ಎಂದು ನಮ್ಮ ಅಂಬೋಣ.

ನಿಜವಾಗಿ ಬೇಕಾಗಿರುವುದು ಏನು ಎಂದರೆ,

ಅ) ರಾಜ್ಯದಲ್ಲಿ ಈಗ ಇರುವ ನಾಲ್ಕು ಕಂದಾಯ ವಿಭಾಗಗಳನ್ನು ಎಂಟು ವಿಭಾಗಗಳನ್ನಾಗಿ ಮಾಡಬೇಕು. ಪ್ರತಿ ವಿಭಾಗಕ್ಕೆ ಈಗ 7-8 ಜಿಲ್ಲೆಗಳು ಬರುತ್ತವೆ. ಪ್ರತಿ ವಿಭಾಗಕ್ಕೆ 3-4 ಜಿಲ್ಲೆಗಳು ಬರುವಂತೆ ಮಾಡಿ ಮರುಹಂಚಿಕೆ ಮಾಡಬೇಕು.

ಆ) ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ಹಿಂದಿನಂತೆ ವಿಭಾಗೀಯ ಅಧಿಕಾರಿಗಳ ಕಚೇರಿಗಳಾಗಿ ಉನ್ನತೀಕರಣ ಮಾಡಬೇಕು. ಅವರಿಗೆ ಜಿಲ್ಲಾಧಿಕಾರಿಗಳ ಮೇಲೆ ಮೇಲು ಉಸ್ತುವಾರಿ ಹಾಗೂ ಜಿಲ್ಲೆ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರ ಹಾಗೂ ಜವಾಬುದಾರಿ ನೀಡಬೇಕು.

ಇ) ಪ್ರಾದೇಶಿಕ ಆಯುಕ್ತರಿಗೆ ಅಭಿವೃದ್ಧಿಯ ಜವಾಬುದಾರಿಯನ್ನು ಸಹಿತ ಕೊಡಬೇಕು. ಅವರಿಗೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ನಗರಪಾಲಿಕೆ-ನಗರಸಭೆಗಳು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳ ಮೇಲೆ ವಿಚಕ್ಷಣೆ ಹಾಗೂ ಮೇಲು ಉಸ್ತುವಾರಿ ನಡೆಸುವ ಅಧಿಕಾರ ನೀಡಬೇಕು.

ಈ) ವಿಭಾಗಾಧಿಕಾರಿ ಮಟ್ಟದಲ್ಲಿ ಕಂದಾಯ ನ್ಯಾಯಾಲಯ ಸ್ಥಾಪಿಸಬೇಕು. ಇದರಿಂದ ಜನ ತಮ್ಮ ಕಂದಾಯ ಪ್ರಕರಣಗಳ ಸಲುವಾಗಿ ಬೆಂಗಳೂರಿಗೆ ಹೋಗುವುದು ತಪ್ಪುತ್ತದೆ.

ಉ) ವಿಭಾಗಾಧಿಕಾರಿಗಳಿಗೆ ಸಾರ್ವಜನಿಕ ಕುಂದುಕೊರತೆಗಳನ್ನು ಸ್ವೀಕರಿಸುವ ಹಾಗೂ ಅವುಗಳನ್ನು ಪರಿಹರಿಸುವ ಅಧಿಕಾರ ಹಾಗೂ ಜವಾಬುದಾರಿ ಕೊಡಬೇಕು. ಜನಸಾಮಾನ್ಯರು ಜಿಲ್ಲಾ ಮಟ್ಟದ ಯಾವುದೇ ಅಧಿಕಾರಿಗಳ ವಿರುದ್ಧ ದೂರು ಕೊಟ್ಟರೆ ಅವುಗಳ ವಿಚಾರಣೆ ವಿಭಾಗ ಮಟ್ಟದಲ್ಲಿ ನಡೆಯಬೇಕು.

ಊ) ವಿಭಾಗಾಧಿಕಾರಿಗಳನ್ನು ಸಕಾಲ ಯೋಜನೆಯ ನಿಯಂತ್ರಣ ಪ್ರಾಧಿಕಾರಿಯನ್ನಾಗಿ ಮಾಡಬೇಕು. ಸಕಾಲ ಯೋಜನೆಯಲ್ಲಿನ ಕೆಲಸಗಳು ಸರಿಯಾದ ಸಮಯಕ್ಕೆ ಆಗದೆ ಹೋದರೆ, ಆ ಕಾಲಹರಣದ ಬಗ್ಗೆ ತನಿಖೆ ನಡೆಸುವ ಅಧಿಕಾರ ಕೊಡಬೇಕು.

ಎ) ಈ ಎಲ್ಲಾ ಜವಾಬುದಾರಿಗಳನ್ನು ಸರಿಯಾಗಿ ನಿರ್ವಹಿಸಲು ವಿಭಾಗಾಧಿಕಾರಿಗಳಿಗೆ ಸೂಕ್ತ ಸಿಬ್ಬಂದಿಗಳನ್ನು ನೀಡಬೇಕು. ಅವರ ಕಚೇರಿಗೆ ಪ್ರಮುಖ ಇಲಾಖೆಗಳ ಜಂಟಿ ನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ಜಿಲ್ಲೆ ಹಾಗೂ ಪ್ರದೇಶ ಮಟ್ಟದ ಯಾವುದೇ ಕೆಲಸಗಳು ಆಯಾ ಜಿಲ್ಲೆ ಹಾಗೂ ಪ್ರದೇಶ ಮಟ್ಟದಲ್ಲಿ ಆಗಬೇಕು. ಇಂತಹ ಎಲ್ಲಾ ಕೆಲಸಗಳಿಗೆ ಜನರು ಬೆಂಗಳೂರಿಗೆ ಅಲೆದಾಡುವ ಅನಿವಾರ್ಯತೆಯನ್ನು ತಪ್ಪಿಸಬೇಕು.

ನಮ್ಮ ಸಲಹೆಗಳನ್ನು ಪರಿಗಣಿಸಬೇಕು, ನೀವು ಮುಂದಿನ ಬಾರಿ ಬರುವಾಗ ಇದನ್ನು ಮರೆಯಬಾರದು ಎಂದು ನಮ್ಮ ಎಲ್ಲಾ ಬಡಪಾಯಿಗಳ ಕೋರಿಕೆ.


ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....