Homeಮುಖಪುಟಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.

- Advertisement -
- Advertisement -

ಇಂದು ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಿದರು. ಹಬ್ಬಗಳ ಹಿನ್ನೆಲೆಯಲ್ಲಿ ಕೊರೊನಾ ಕುರಿತು ಹೆಚ್ಚು ಜಾಗೃತರಾಗಬೇಕೆಂದು ಕರೆ ನೀಡಿದರು. ಆದರೆ ಮೋದಿಯವರ ಮಾತು ಮತ್ತು ನೀತಿಗಳ ಕುರಿತು ಸಿಟ್ಟಿಗೆದ್ದಿರುವ ಸಾಮಾಜಿಕ ಜಾಲತಾಣಿಗರು ಯೂಟ್ಯೂಬ್‌ನಲ್ಲಿ ಮೋದಿ ಭಾಷಣಕ್ಕೆ ಡಿಸ್‌ಲೈಕ್ ಒತ್ತುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಭಾರತೀಯ ಜನತಾ ಪಕ್ಷದ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿಯೂ ಸಹ ಮೋದಿಯವರ ಭಾಷಣ ಬಿತ್ತರವಾಯಿತು. ಮೋದಿಯವರ ಲೈವ್ ಭಾಷಣ ಆರಂಭವಾದೊಡನೆ ಡಿಸ್‌ಲೈಕ್‌ಗಳ ಸಂಖ್ಯೆ ಏರುತ್ತಲೇ ಹೋಯಿತು. ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಮಾತ್ರವಲ್ಲದೇ ಡಿಸ್‌ಲೈಕ್‌ಗಳು ಒಂದೇ ಸಮನೆ ಏರುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಯಿತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!


ಈಗಲೂ ಬಿಜೆಪಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಮೋದಿ ವಿಡಿಯೋಗೆ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ಕಾಣದಂತೆ ತಡೆಹಿಡಿಯಲಾಗಿದೆ. ಅಲ್ಲದೇ ಅದೇ ಭಾಷಣದ ಮೂರು ವಿಡಿಯೋ ತುಣುಕುಗಳನ್ನು ಬಿಜೆಪಿ ಅಪ್‌ಲೋಡ್‌ ಮಾಡಿದ್ದು ಅಲ್ಲಿಯೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಅಧಿಕವಾಗಿರುವುದನ್ನು ನೋಡಬಹುದಾಗಿದೆ.

ಇನ್ನು ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರದ ಭಾಷಣಕ್ಕೆ 6.6 ಸಾವಿರ ಜನ ಡಿಸ್‌ಲೈಕ್ ಮಾಡಿದ್ದಾರೆ. ಮಾಧ್ಯಮಗಳಿಗೆ ಮನವಿ ಸೇರಿ ಚಿಕ್ಕ ಚಿಕ್ಕ ವಿಡಿಯೋಗಳಲ್ಲಿ ಲೈಕ್‌ಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗಿದೆ.

ಒಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದ ವಿಶೇ‍ಷವಾಗಿ ಯುವಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಿದ್ದು, ಉದ್ಯೋಗ ಕುಸಿತ ತಡೆಯಲು ವಿಫಲವಾಗಿದ್ದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಇನ್ನು ಇಂದಿನ ಮೋದಿ ಭಾಷಣಕ್ಕೆ ಹಲವರು ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹಬ್ಬಗಳ ಹಿನ್ನೆಲೆಯಲ್ಲಿ ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿ ಎಂದು ಹೇಳಿಕೊಡಲು ಮೋದಿಯವರೇ ಬೇಕಾಗಿತ್ತೇ? ನಮಗದು ತಿಳಿದಿರಲಿಲ್ಲವೇ? ಅದರ ಬದಲು ಜಿಡಿಪಿ, ಉದ್ಯೋಗ ಕುಸಿತ, ಪ್ರವಾಹ ಪರಿಹಾರ, ಜಿಎಸ್‌ಟಿ ಪರಿಹಾರದ ಬಗ್ಗೆ ಮಾತನಾಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...