Homeಮುಖಪುಟಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.

- Advertisement -
- Advertisement -

ಇಂದು ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಿದರು. ಹಬ್ಬಗಳ ಹಿನ್ನೆಲೆಯಲ್ಲಿ ಕೊರೊನಾ ಕುರಿತು ಹೆಚ್ಚು ಜಾಗೃತರಾಗಬೇಕೆಂದು ಕರೆ ನೀಡಿದರು. ಆದರೆ ಮೋದಿಯವರ ಮಾತು ಮತ್ತು ನೀತಿಗಳ ಕುರಿತು ಸಿಟ್ಟಿಗೆದ್ದಿರುವ ಸಾಮಾಜಿಕ ಜಾಲತಾಣಿಗರು ಯೂಟ್ಯೂಬ್‌ನಲ್ಲಿ ಮೋದಿ ಭಾಷಣಕ್ಕೆ ಡಿಸ್‌ಲೈಕ್ ಒತ್ತುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಭಾರತೀಯ ಜನತಾ ಪಕ್ಷದ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿಯೂ ಸಹ ಮೋದಿಯವರ ಭಾಷಣ ಬಿತ್ತರವಾಯಿತು. ಮೋದಿಯವರ ಲೈವ್ ಭಾಷಣ ಆರಂಭವಾದೊಡನೆ ಡಿಸ್‌ಲೈಕ್‌ಗಳ ಸಂಖ್ಯೆ ಏರುತ್ತಲೇ ಹೋಯಿತು. ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಮಾತ್ರವಲ್ಲದೇ ಡಿಸ್‌ಲೈಕ್‌ಗಳು ಒಂದೇ ಸಮನೆ ಏರುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಯಿತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!


ಈಗಲೂ ಬಿಜೆಪಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಮೋದಿ ವಿಡಿಯೋಗೆ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ಕಾಣದಂತೆ ತಡೆಹಿಡಿಯಲಾಗಿದೆ. ಅಲ್ಲದೇ ಅದೇ ಭಾಷಣದ ಮೂರು ವಿಡಿಯೋ ತುಣುಕುಗಳನ್ನು ಬಿಜೆಪಿ ಅಪ್‌ಲೋಡ್‌ ಮಾಡಿದ್ದು ಅಲ್ಲಿಯೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಅಧಿಕವಾಗಿರುವುದನ್ನು ನೋಡಬಹುದಾಗಿದೆ.

ಇನ್ನು ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರದ ಭಾಷಣಕ್ಕೆ 6.6 ಸಾವಿರ ಜನ ಡಿಸ್‌ಲೈಕ್ ಮಾಡಿದ್ದಾರೆ. ಮಾಧ್ಯಮಗಳಿಗೆ ಮನವಿ ಸೇರಿ ಚಿಕ್ಕ ಚಿಕ್ಕ ವಿಡಿಯೋಗಳಲ್ಲಿ ಲೈಕ್‌ಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗಿದೆ.

ಒಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದ ವಿಶೇ‍ಷವಾಗಿ ಯುವಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಿದ್ದು, ಉದ್ಯೋಗ ಕುಸಿತ ತಡೆಯಲು ವಿಫಲವಾಗಿದ್ದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಇನ್ನು ಇಂದಿನ ಮೋದಿ ಭಾಷಣಕ್ಕೆ ಹಲವರು ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹಬ್ಬಗಳ ಹಿನ್ನೆಲೆಯಲ್ಲಿ ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿ ಎಂದು ಹೇಳಿಕೊಡಲು ಮೋದಿಯವರೇ ಬೇಕಾಗಿತ್ತೇ? ನಮಗದು ತಿಳಿದಿರಲಿಲ್ಲವೇ? ಅದರ ಬದಲು ಜಿಡಿಪಿ, ಉದ್ಯೋಗ ಕುಸಿತ, ಪ್ರವಾಹ ಪರಿಹಾರ, ಜಿಎಸ್‌ಟಿ ಪರಿಹಾರದ ಬಗ್ಗೆ ಮಾತನಾಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...