Homeಮುಖಪುಟನಿಮಗೆ ಹೆಚ್ಚಿನ ಶಕ್ತಿ ಸಿಗಲಿ ಕಾಮ್ರೇಡ್ ಆಯಿಶೆ, ಇಂದು ಸಂಜೆ JNUನಲ್ಲಿ ಭೇಟಿಯಾಗುತ್ತೇನೆ: ಕನ್ಹಯ್ಯ ಕುಮಾರ್‌

ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ಕಾಮ್ರೇಡ್ ಆಯಿಶೆ, ಇಂದು ಸಂಜೆ JNUನಲ್ಲಿ ಭೇಟಿಯಾಗುತ್ತೇನೆ: ಕನ್ಹಯ್ಯ ಕುಮಾರ್‌

ಮೌನವು ಯಾವಾಗಲೂ ದಬ್ಬಾಳಿಕೆಗೆ ಸಹಾಯ ಮಾಡುತ್ತದೆ, ತಡವಾಗುವ ಮುನ್ನ ಮಾತನಾಡಿ. ಹಿಂಸೆಗಿಳಿಯಬೇಡಿ, ಹಾಗಂತ ಮೌನವಾಗಿರಬೇಡಿ...

- Advertisement -
- Advertisement -

ಇಂದು ಸಂಜೆ ನಾಲ್ಕು ಗಂಟೆಗೆ ಜೆಎನ್‌ಯುನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಮತ್ತು ಹೋರಾಟಗಾರ ಕನ್ಹಯ್ಯ ಕುಮಾರ್‌ ಭಾಗವಹಿಸಲಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ಹಾಲಿ ಅಧ್ಯಕ್ಷೆ ಆಯಿಶೆ ಘೋಷ್‌ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ಕಾಮ್ರೇಡ್ ಆಯಿಶೆ. ಈ ಹೇಡಿ ಸರ್ಕಾರವು ಸುಳ್ಳು ಕೇಸುಗಳ ಮೂಲಕ ನಿಮ್ಮನ್ನು ಬಂಧಿಸದಿದ್ದರೆ, ಇಂದು ಸಂಜೆ 4 ಗಂಟೆಗೆ ಸಬರಮತಿ ಟಿ-ಪಾಯಿಂಟ್‌ನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ನಿಮ್ಮನ್ನು ಭೇಟಿಯಾಗುತ್ತೇನೆ. ಒಂದು ವೇಳೆ ಬಂಧಿಸಿದರೆ ನಾವು ಮತ್ತೆ ಹೋರಾಡಲು ಸಿದ್ಧರಿದ್ದೇವೆ. ಎಂದು ಕನ್ಹಯ್ಯ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು ಆಸ್ಪತ್ರೆಯಿಂದ ಬಿಡುಗಡೆಯಾದ ಕೂಡಲೇ ಪತ್ರಿಕಾಗೋಷ್ಠಿ ನಡೆಸಿದ ಆಯಿಶೆ ಘೋಷ್‌ “ನಿಮ್ಮ ಪ್ರತಿಯೊಂದು ಕಬ್ಬಿಣದ ಸರಳುಗಳ ಏಟಿಗೂ ನಾವು ಚರ್ಚೆ ಮತ್ತು ಸಂವಾದದಿಂದ ಉತ್ತರ ಕೊಡುತ್ತೇವೆ. ಈ ಜೆಎನ್‌ಯು ಸಂಸ್ಕೃತಿಯನ್ನು ನೀವು ಹಿಂಸೆಯ ಮೂಲಕ ಕೊನೆಗೊಳಿಸಲು ಸಾಧ್ಯವಿಲ್ಲ. ನಾವು ಜೆಎನ್‌ಯುವಿನ ಪ್ರಜಾತಾಂತ್ರಿಕ ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತೇವೆ” ಎಂದು ಘೋಷಿಸಿದ್ದರು.

ಕನ್ಹಯ್ಯ ಕುಮಾರ್‌ರವರ ಇನ್ನೊಂದು ಟ್ವೀಟ್‌ನಲ್ಲಿ ಜನರು ಮೌನ ಮುರಿದು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಆಗ್ರಹಿಸಿದ್ದರು.

ಮೌನವು ಯಾವಾಗಲೂ ದಬ್ಬಾಳಿಕೆಗೆ ಸಹಾಯ ಮಾಡುತ್ತದೆ, ಎಂದಿಗೂ ತುಳಿತಕ್ಕೊಳಗಾದವರಿಗಲ್ಲ. ತಡವಾಗುವ ಮುನ್ನ ಮಾತನಾಡಿ. ಅವರು ನಿಮ್ಮ ಪ್ರತಿರೋಧದ ಹಕ್ಕನ್ನು ಕಸಿದುಕೊಳ್ಳುವ ಮೊದಲು ವಿರೋಧಿಸಿ. ದೇಶಾದ್ಯಂತ ವಿದ್ಯಾರ್ಥಿಗಳು ಭಾರತದ ಪರಿಕಲ್ಪನೆಯನ್ನು ರಕ್ಷಿಸುವ ಈ ಐತಿಹಾಸಿಕ ಯುದ್ಧದಲ್ಲಿ ಹೋರಾಡುತ್ತಿದ್ದಾರೆ. ಅವರಿಗೆ ಬೆಂಬಲ ಹಸ್ತ ನೀಡಿ..

ಹಿಂಸೆಗಿಳಿಯಬೇಡಿ, ಹಾಗಂತ ಮೌನವಾಗಿರಬೇಡಿ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...