Homeಕರ್ನಾಟಕಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ

ಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ

- Advertisement -
- Advertisement -

ಬಿಲ್ಡರ್‌ಗಳ ಹಿತಾಸಕ್ತಿ ಕಾಪಾಡಲು ಏಕಾಏಕಿ ಅಂತರಾಜ್ಯಗಳಿಗೆ ಹೊರಡಬೇಕಿದ್ದ ಕಾರ್ಮಿಕರ ರೈಲು ಸೇವೆಗಳನ್ನು ತಡೆಹಿಡಿದ್ದಿದ್ದ ಕರ್ನಾಟಕ ಸರ್ಕಾರ ಕಾರ್ಮಿಕರ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ನಾಳೆಯಿಂದ ಮತ್ತೆ ರೈಲು ಸೇವೆ ಆರಂಭಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಅಧಿಕಾರಗಳಿಗೆ ಈ ಸೂಚನೆ ನೀಡಿದ್ದು ಶುಕ್ರವಾರದಿಂದ ಮೇ 15ರವರೆಗೆ ಒಂದು ವಾರಗಳ ಕಾಲ ಪ್ರತಿದಿನ ರೈಲುಗಳು ಹೊರಡಲಿವೆ. ಜಾರ್ಖಂಡ್‌, ಉತ್ತರ ಪ್ರದೇಶ, ಮಣಿಪುರ, ತ್ರಿಪುರ, ಪಶ್ಚಿಮ  ಬಂಗಾಳ, ಒಡಿಸ್ಸಾ, ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ಪ್ರತಿದಿನ ಎರಡು ವಿಶೇಷ ರೈಲುಗಳು ಹೊರಡಲಿವೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಆರಂಭವಾಗಿದ್ದ ರೈಲುಸೇವೆಗಳು ಮಂಗಳವಾರ ರಾತ್ರಿಗೆ ಕೊನೆಗೊಂಡಿದ್ದವು. ಅಂದು ಬುಧವಾರ ಬೆಂಗಳೂರಿನಿಂದ ಧಾನ್‌ಪುರ ಮತ್ತು ಬಿಹಾರಕ್ಕೆ ಹೊರಡಬೇಕಿದ್ದ ರೈಲುಗಳ ಸಂಚಾರವನ್ನು ರದ್ದುಗೊಳಿಸುವಂತೆ ಆದೇಶಿಸಿ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದರು.


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು


ಇದರಿಂದ ಕಂಗಾಲಾದ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. “ನಾವು ನಿರ್ಮಿಸಿದ ನಗರದಲ್ಲಿ ನಾವು ಕೈದಿಗಳು” ಎಂಬ ಪೋಸ್ಟರ್‌ ಹಿಡಿದು ಹಲವಾರು ವಲಸೆ ಕಾರ್ಮಿಕರು ತಮ್ಮ ನೋವು ತೋಡಿಕೊಂಡಿದ್ದರು.

ಅಲ್ಲದೇ ಬಹಳಷ್ಟು ವಲಸೆ ಕಾರ್ಮಿಕರು ಕಾಲ್ನಡಿಗೆ ತಮ್ಮ ರಾಜ್ಯಗಳಿಗೆ ನಡೆದುಕೊಂಡು ಹೊರಟುಬಿಟ್ಟಿದ್ದರು. ಆಂಧ್ರ ಗಡಿಯಲ್ಲಿ ಪೊಲೀಸರು ನಡೆದುಕೊಂಡು ಹೋಗಲು ಸಹ ಬಿಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.

“ಹೊರರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಹಿಂದಿರುಗಲು ವ್ಯವಸ್ಥೆ ಮಾಡಿದ್ದ ರೈಲುಗಳನ್ನು ಮುಖ್ಯಮಂತ್ರಿಗಳು ಹಠಾತ್ತನೆ ರದ್ದು ಮಾಡಿರುವುದು ಅಮಾನವೀಯ ನಿರ್ಧಾರ ಮಾತ್ರವಲ್ಲ, ಕಾರ್ಮಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಟೀಕಿಸಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ರೈಲು ರದ್ದತಿಯನ್ನು ಸಮರ್ಥಿಸಿಕೊಂಡು ಟ್ವೀಟ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮುಖ್ಯಮಂತ್ರಿ ಯಡಿಯೂರಪ್ಪನವರು ರೈಲು ಸೇವೆಗೆ ಮತ್ತೆ ಚಾಲನೆ ನೀಡಿ ಈ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಈ ಮೊದಲು ಸಹ ರಾಜ್ಯದೊಳಗಿನ ವಿವಿಧ ಜಿಲ್ಲೆಗಳಿಗೆ ತೆರಳುವ ಕಾರ್ಮಿಕರಿಗೆ ಮೂರು ಪಟ್ಟು ಬಸ್‌ ದರ ವಿಧಿಸಿ ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಪ್ರಗತಿಪರರು ಮತ್ತು ವಿರೋಧ ಪಕ್ಷಗಳ ವಿರೋಧಕ್ಕೆ ಮಣಿದು ಸಿಂಗಲ್‌ ದರ ನಿಗದಿ ಮಾಡಿ ನಂತರ ಪೂರ್ಣ ಉಚಿತ ಎಂದು ಘೋಷಿಸಿದ್ದನ್ನು ನಾವಿಲ್ಲಿ ಸ್ಮರಸಬಹುದಾಗಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...