Homeಕರ್ನಾಟಕಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ

ಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ

- Advertisement -
- Advertisement -

ಬಿಲ್ಡರ್‌ಗಳ ಹಿತಾಸಕ್ತಿ ಕಾಪಾಡಲು ಏಕಾಏಕಿ ಅಂತರಾಜ್ಯಗಳಿಗೆ ಹೊರಡಬೇಕಿದ್ದ ಕಾರ್ಮಿಕರ ರೈಲು ಸೇವೆಗಳನ್ನು ತಡೆಹಿಡಿದ್ದಿದ್ದ ಕರ್ನಾಟಕ ಸರ್ಕಾರ ಕಾರ್ಮಿಕರ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ನಾಳೆಯಿಂದ ಮತ್ತೆ ರೈಲು ಸೇವೆ ಆರಂಭಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಅಧಿಕಾರಗಳಿಗೆ ಈ ಸೂಚನೆ ನೀಡಿದ್ದು ಶುಕ್ರವಾರದಿಂದ ಮೇ 15ರವರೆಗೆ ಒಂದು ವಾರಗಳ ಕಾಲ ಪ್ರತಿದಿನ ರೈಲುಗಳು ಹೊರಡಲಿವೆ. ಜಾರ್ಖಂಡ್‌, ಉತ್ತರ ಪ್ರದೇಶ, ಮಣಿಪುರ, ತ್ರಿಪುರ, ಪಶ್ಚಿಮ  ಬಂಗಾಳ, ಒಡಿಸ್ಸಾ, ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ಪ್ರತಿದಿನ ಎರಡು ವಿಶೇಷ ರೈಲುಗಳು ಹೊರಡಲಿವೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಆರಂಭವಾಗಿದ್ದ ರೈಲುಸೇವೆಗಳು ಮಂಗಳವಾರ ರಾತ್ರಿಗೆ ಕೊನೆಗೊಂಡಿದ್ದವು. ಅಂದು ಬುಧವಾರ ಬೆಂಗಳೂರಿನಿಂದ ಧಾನ್‌ಪುರ ಮತ್ತು ಬಿಹಾರಕ್ಕೆ ಹೊರಡಬೇಕಿದ್ದ ರೈಲುಗಳ ಸಂಚಾರವನ್ನು ರದ್ದುಗೊಳಿಸುವಂತೆ ಆದೇಶಿಸಿ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದರು.


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು


ಇದರಿಂದ ಕಂಗಾಲಾದ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. “ನಾವು ನಿರ್ಮಿಸಿದ ನಗರದಲ್ಲಿ ನಾವು ಕೈದಿಗಳು” ಎಂಬ ಪೋಸ್ಟರ್‌ ಹಿಡಿದು ಹಲವಾರು ವಲಸೆ ಕಾರ್ಮಿಕರು ತಮ್ಮ ನೋವು ತೋಡಿಕೊಂಡಿದ್ದರು.

ಅಲ್ಲದೇ ಬಹಳಷ್ಟು ವಲಸೆ ಕಾರ್ಮಿಕರು ಕಾಲ್ನಡಿಗೆ ತಮ್ಮ ರಾಜ್ಯಗಳಿಗೆ ನಡೆದುಕೊಂಡು ಹೊರಟುಬಿಟ್ಟಿದ್ದರು. ಆಂಧ್ರ ಗಡಿಯಲ್ಲಿ ಪೊಲೀಸರು ನಡೆದುಕೊಂಡು ಹೋಗಲು ಸಹ ಬಿಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.

“ಹೊರರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಹಿಂದಿರುಗಲು ವ್ಯವಸ್ಥೆ ಮಾಡಿದ್ದ ರೈಲುಗಳನ್ನು ಮುಖ್ಯಮಂತ್ರಿಗಳು ಹಠಾತ್ತನೆ ರದ್ದು ಮಾಡಿರುವುದು ಅಮಾನವೀಯ ನಿರ್ಧಾರ ಮಾತ್ರವಲ್ಲ, ಕಾರ್ಮಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಟೀಕಿಸಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ರೈಲು ರದ್ದತಿಯನ್ನು ಸಮರ್ಥಿಸಿಕೊಂಡು ಟ್ವೀಟ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮುಖ್ಯಮಂತ್ರಿ ಯಡಿಯೂರಪ್ಪನವರು ರೈಲು ಸೇವೆಗೆ ಮತ್ತೆ ಚಾಲನೆ ನೀಡಿ ಈ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಈ ಮೊದಲು ಸಹ ರಾಜ್ಯದೊಳಗಿನ ವಿವಿಧ ಜಿಲ್ಲೆಗಳಿಗೆ ತೆರಳುವ ಕಾರ್ಮಿಕರಿಗೆ ಮೂರು ಪಟ್ಟು ಬಸ್‌ ದರ ವಿಧಿಸಿ ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಪ್ರಗತಿಪರರು ಮತ್ತು ವಿರೋಧ ಪಕ್ಷಗಳ ವಿರೋಧಕ್ಕೆ ಮಣಿದು ಸಿಂಗಲ್‌ ದರ ನಿಗದಿ ಮಾಡಿ ನಂತರ ಪೂರ್ಣ ಉಚಿತ ಎಂದು ಘೋಷಿಸಿದ್ದನ್ನು ನಾವಿಲ್ಲಿ ಸ್ಮರಸಬಹುದಾಗಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...