Homeಕರ್ನಾಟಕಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ

ಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ

- Advertisement -
- Advertisement -

ಬಿಲ್ಡರ್‌ಗಳ ಹಿತಾಸಕ್ತಿ ಕಾಪಾಡಲು ಏಕಾಏಕಿ ಅಂತರಾಜ್ಯಗಳಿಗೆ ಹೊರಡಬೇಕಿದ್ದ ಕಾರ್ಮಿಕರ ರೈಲು ಸೇವೆಗಳನ್ನು ತಡೆಹಿಡಿದ್ದಿದ್ದ ಕರ್ನಾಟಕ ಸರ್ಕಾರ ಕಾರ್ಮಿಕರ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ನಾಳೆಯಿಂದ ಮತ್ತೆ ರೈಲು ಸೇವೆ ಆರಂಭಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಅಧಿಕಾರಗಳಿಗೆ ಈ ಸೂಚನೆ ನೀಡಿದ್ದು ಶುಕ್ರವಾರದಿಂದ ಮೇ 15ರವರೆಗೆ ಒಂದು ವಾರಗಳ ಕಾಲ ಪ್ರತಿದಿನ ರೈಲುಗಳು ಹೊರಡಲಿವೆ. ಜಾರ್ಖಂಡ್‌, ಉತ್ತರ ಪ್ರದೇಶ, ಮಣಿಪುರ, ತ್ರಿಪುರ, ಪಶ್ಚಿಮ  ಬಂಗಾಳ, ಒಡಿಸ್ಸಾ, ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ಪ್ರತಿದಿನ ಎರಡು ವಿಶೇಷ ರೈಲುಗಳು ಹೊರಡಲಿವೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಆರಂಭವಾಗಿದ್ದ ರೈಲುಸೇವೆಗಳು ಮಂಗಳವಾರ ರಾತ್ರಿಗೆ ಕೊನೆಗೊಂಡಿದ್ದವು. ಅಂದು ಬುಧವಾರ ಬೆಂಗಳೂರಿನಿಂದ ಧಾನ್‌ಪುರ ಮತ್ತು ಬಿಹಾರಕ್ಕೆ ಹೊರಡಬೇಕಿದ್ದ ರೈಲುಗಳ ಸಂಚಾರವನ್ನು ರದ್ದುಗೊಳಿಸುವಂತೆ ಆದೇಶಿಸಿ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದರು.


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು


ಇದರಿಂದ ಕಂಗಾಲಾದ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. “ನಾವು ನಿರ್ಮಿಸಿದ ನಗರದಲ್ಲಿ ನಾವು ಕೈದಿಗಳು” ಎಂಬ ಪೋಸ್ಟರ್‌ ಹಿಡಿದು ಹಲವಾರು ವಲಸೆ ಕಾರ್ಮಿಕರು ತಮ್ಮ ನೋವು ತೋಡಿಕೊಂಡಿದ್ದರು.

ಅಲ್ಲದೇ ಬಹಳಷ್ಟು ವಲಸೆ ಕಾರ್ಮಿಕರು ಕಾಲ್ನಡಿಗೆ ತಮ್ಮ ರಾಜ್ಯಗಳಿಗೆ ನಡೆದುಕೊಂಡು ಹೊರಟುಬಿಟ್ಟಿದ್ದರು. ಆಂಧ್ರ ಗಡಿಯಲ್ಲಿ ಪೊಲೀಸರು ನಡೆದುಕೊಂಡು ಹೋಗಲು ಸಹ ಬಿಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.

“ಹೊರರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಹಿಂದಿರುಗಲು ವ್ಯವಸ್ಥೆ ಮಾಡಿದ್ದ ರೈಲುಗಳನ್ನು ಮುಖ್ಯಮಂತ್ರಿಗಳು ಹಠಾತ್ತನೆ ರದ್ದು ಮಾಡಿರುವುದು ಅಮಾನವೀಯ ನಿರ್ಧಾರ ಮಾತ್ರವಲ್ಲ, ಕಾರ್ಮಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಟೀಕಿಸಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ರೈಲು ರದ್ದತಿಯನ್ನು ಸಮರ್ಥಿಸಿಕೊಂಡು ಟ್ವೀಟ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮುಖ್ಯಮಂತ್ರಿ ಯಡಿಯೂರಪ್ಪನವರು ರೈಲು ಸೇವೆಗೆ ಮತ್ತೆ ಚಾಲನೆ ನೀಡಿ ಈ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಈ ಮೊದಲು ಸಹ ರಾಜ್ಯದೊಳಗಿನ ವಿವಿಧ ಜಿಲ್ಲೆಗಳಿಗೆ ತೆರಳುವ ಕಾರ್ಮಿಕರಿಗೆ ಮೂರು ಪಟ್ಟು ಬಸ್‌ ದರ ವಿಧಿಸಿ ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಪ್ರಗತಿಪರರು ಮತ್ತು ವಿರೋಧ ಪಕ್ಷಗಳ ವಿರೋಧಕ್ಕೆ ಮಣಿದು ಸಿಂಗಲ್‌ ದರ ನಿಗದಿ ಮಾಡಿ ನಂತರ ಪೂರ್ಣ ಉಚಿತ ಎಂದು ಘೋಷಿಸಿದ್ದನ್ನು ನಾವಿಲ್ಲಿ ಸ್ಮರಸಬಹುದಾಗಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...