Homeಮುಖಪುಟಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

- Advertisement -
- Advertisement -

ಚಿತ್ರೋದ್ಯಮದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯ ದ್ವೇಷ ಹೆಚ್ಚಾಗಿದೆ ಎಂದು ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಹೇಳಿದ್ದಾರೆ. ನಟ ಸಿದ್ದಿಕಿ, ಸುಧೀರ್ ಮಿಶ್ರಾ ಅವರ ಸೀರಿಯಸ್ ಮೆನ್ (Serious Men) ಚಿತ್ರದಲ್ಲಿನ ನಟನೆಗಾಗಿ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಸೀರಿಯಸ್ ಮೆನ್ (Serious Men) ಚಿತ್ರದ ಮತ್ತೊಂದು ಪ್ರಮುಖ ಪಾತ್ರಧಾರಿ ಇಂದಿರಾ ತಿವಾರಿ ಬಗ್ಗೆ ನವಾಜುದ್ದೀನ್ ಮಾತನಾಡುತ್ತಿದ್ದರು. ಆಕೆಗೆ ಮತ್ತೊಂದು ಚಿತ್ರದಲ್ಲಿ ಪ್ರಮುಖ ಪಾತ್ರ ದೊರೆತರೆ ಅದು ಚಿತ್ರದ ನಿಜವಾದ ಗೆಲುವು ಎಂದು ಹೇಳಿದ್ದಾರೆ.

“ಸುಧೀರ್ ಮಿಶ್ರಾ ಅವರಿಗೆ ಸಿನಿಮಾ ಬಗ್ಗೆ ಅಪಾರ ಜ್ಞಾನವಿದೆ. ಅವರ ಚಿಂತನೆಯ ಪ್ರಕ್ರಿಯೆಯು ತುಂಬಾ ಪ್ರಾಯೋಗಿಕವಾಗಿದೆ. ಹೀಗಾಗಿ ಅವರು ಆಕೆಯನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ನಮ್ಮ ಉದ್ಯಮದಲ್ಲಿ ಜನಾಂಗೀಯ ದ್ವೇಷ (racism) ಹೆಚ್ಚಾಗಿದೆ ಎಂದು ನಿಮಗೆ ಖಾತರಿ ನೀಡಬಲ್ಲೆ” ಎಂದಿದ್ದಾರೆ.

ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

“ಆಕೆ ಅವಳು ಮತ್ತೊಮ್ಮೆ ನಾಯಕಿಯಾಗಿ ನಟಿಸಿದರೆ ನನಗೆ ತುಂಬಾ ಸಂತೋಷವಾಗುತ್ತದೆ. ಸುಧೀರ್ ಮಿಶ್ರಾ ಅದನ್ನು ಮಾಡಿದ್ದಾರೆ. ಆದರೆ, ಬೇರೆ ದೊಡ್ಡ ದೊಡ್ಡ ಚಿತ್ರ ನಿರ್ಮಾಪಕರು, ನಿರ್ದೇಶಕರು, ಜವಾಬ್ದಾರಿ ಸ್ಥಾನದಲ್ಲಿರುವವರ ವಿಷಯಗಳು ಏನು? ನಮ್ಮಲ್ಲಿ ಸ್ವಜನ ಪಕ್ಷಪಾತಕ್ಕಿಂತ ಹೆಚ್ಚಾಗಿ, ಜನಾಂಗೀಯತೆಯ ಸಮಸ್ಯೆ ಇದೆ” ಎಂದಿದ್ದಾರೆ.

Serious Men
ಸೀರಿಯಸ್ ಮೆನ್ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಇಂದಿರಾ ತಿವಾರಿ

ಮುಂದುವರೆದು, “ನಾನು ಜನಾಂಗೀಯತೆ ವಿರುದ್ಧ ಹಲವು ವರ್ಷಗಳ ಕಾಲ ಹೋರಾಡಿದ್ದೇನೆ. ಕಪ್ಪು ಚರ್ಮದ ನಟಿಯರನ್ನು ನಾಯಕಿಯರನ್ನಾಗಿ ಮಾಡಬೇಕೆಂದು ನಾನು ಆಶಿಸುತ್ತೇನೆ. ಏಕೆಂದರೆ ಇದು ಚಿತ್ರರಂಗದಲ್ಲಿ ಬಹಳ ಮುಖ್ಯವಾಗಿದೆ. ನಾನು ಕೇವಲ ಚರ್ಮದ ಬಣ್ಣದ ಬಗ್ಗೆ ಮಾತನಾಡುತ್ತಿಲ್ಲ. ಉದ್ಯಮದಲ್ಲಿ ಒಂದು ಪಕ್ಷಪಾತವಿದೆ. ಉತ್ತಮ ಚಲನಚಿತ್ರಗಳನ್ನು ಮಾಡಲು ಅದು ಕೊನೆಗೊಳ್ಳಬೇಕು” ಎಂದಿದ್ದಾರೆ.

’ನಾನು ಕುಳ್ಳಗಿರುವುದು ಮತ್ತು ನೋಡಲು ಬೇರೆ ರೀತಿಯಲ್ಲಿ ಕಾಣುತ್ತೇನೆ ಎಂದು ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ತಿರಸ್ಕರಿಸಲ್ಪಟ್ಟಿದ್ದೇನೆ. ಆದರೂ ನಾನು ಈಗ ದೂರು ನೀಡಲು ಸಾಧ್ಯವಿಲ್ಲ. ಆದರೆ, ಈ ರೀತಿಯ ಪಕ್ಷಪಾತಕ್ಕೆ ಬಲಿಯಾಗುವ ಇತರ ಅನೇಕ ದೊಡ್ಡ ದೊಡ್ಡ ನಟರಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅನುರಾಗ್ ಕಶ್ಯಪ್ ಅವರ ಗ್ಯಾಂಗ್ಸ್ ಆಫ್ ವಾಸೇಪುರ್ ಪಾರ್ಟ್ -2 ನಲ್ಲಿ ತಮ್ಮ ಪಾತ್ರದಿಂದ ಹೆಚ್ಚು ಪ್ರಸಿದ್ಧಿ ಪಡೆದ ನವಾಜುದ್ದೀನ್ ಸಿದ್ದಿಕಿ, ನಂತರ ಸೇಕ್ರೆಡ್ ಗೇಮ್ಸ್, ರಾತ್ ಅಕೇಲಿ ಹೈ, ಸೀರಿಯಸ್ ಮೆನ್ ನಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಸೇಕ್ರೆಡ್ ಗೇಮ್ಸ್ ಕೂಡ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.


ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...