Homeಮುಖಪುಟಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

- Advertisement -
- Advertisement -

ಚಿತ್ರೋದ್ಯಮದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯ ದ್ವೇಷ ಹೆಚ್ಚಾಗಿದೆ ಎಂದು ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಹೇಳಿದ್ದಾರೆ. ನಟ ಸಿದ್ದಿಕಿ, ಸುಧೀರ್ ಮಿಶ್ರಾ ಅವರ ಸೀರಿಯಸ್ ಮೆನ್ (Serious Men) ಚಿತ್ರದಲ್ಲಿನ ನಟನೆಗಾಗಿ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಸೀರಿಯಸ್ ಮೆನ್ (Serious Men) ಚಿತ್ರದ ಮತ್ತೊಂದು ಪ್ರಮುಖ ಪಾತ್ರಧಾರಿ ಇಂದಿರಾ ತಿವಾರಿ ಬಗ್ಗೆ ನವಾಜುದ್ದೀನ್ ಮಾತನಾಡುತ್ತಿದ್ದರು. ಆಕೆಗೆ ಮತ್ತೊಂದು ಚಿತ್ರದಲ್ಲಿ ಪ್ರಮುಖ ಪಾತ್ರ ದೊರೆತರೆ ಅದು ಚಿತ್ರದ ನಿಜವಾದ ಗೆಲುವು ಎಂದು ಹೇಳಿದ್ದಾರೆ.

“ಸುಧೀರ್ ಮಿಶ್ರಾ ಅವರಿಗೆ ಸಿನಿಮಾ ಬಗ್ಗೆ ಅಪಾರ ಜ್ಞಾನವಿದೆ. ಅವರ ಚಿಂತನೆಯ ಪ್ರಕ್ರಿಯೆಯು ತುಂಬಾ ಪ್ರಾಯೋಗಿಕವಾಗಿದೆ. ಹೀಗಾಗಿ ಅವರು ಆಕೆಯನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ನಮ್ಮ ಉದ್ಯಮದಲ್ಲಿ ಜನಾಂಗೀಯ ದ್ವೇಷ (racism) ಹೆಚ್ಚಾಗಿದೆ ಎಂದು ನಿಮಗೆ ಖಾತರಿ ನೀಡಬಲ್ಲೆ” ಎಂದಿದ್ದಾರೆ.

ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

“ಆಕೆ ಅವಳು ಮತ್ತೊಮ್ಮೆ ನಾಯಕಿಯಾಗಿ ನಟಿಸಿದರೆ ನನಗೆ ತುಂಬಾ ಸಂತೋಷವಾಗುತ್ತದೆ. ಸುಧೀರ್ ಮಿಶ್ರಾ ಅದನ್ನು ಮಾಡಿದ್ದಾರೆ. ಆದರೆ, ಬೇರೆ ದೊಡ್ಡ ದೊಡ್ಡ ಚಿತ್ರ ನಿರ್ಮಾಪಕರು, ನಿರ್ದೇಶಕರು, ಜವಾಬ್ದಾರಿ ಸ್ಥಾನದಲ್ಲಿರುವವರ ವಿಷಯಗಳು ಏನು? ನಮ್ಮಲ್ಲಿ ಸ್ವಜನ ಪಕ್ಷಪಾತಕ್ಕಿಂತ ಹೆಚ್ಚಾಗಿ, ಜನಾಂಗೀಯತೆಯ ಸಮಸ್ಯೆ ಇದೆ” ಎಂದಿದ್ದಾರೆ.

Serious Men
ಸೀರಿಯಸ್ ಮೆನ್ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಇಂದಿರಾ ತಿವಾರಿ

ಮುಂದುವರೆದು, “ನಾನು ಜನಾಂಗೀಯತೆ ವಿರುದ್ಧ ಹಲವು ವರ್ಷಗಳ ಕಾಲ ಹೋರಾಡಿದ್ದೇನೆ. ಕಪ್ಪು ಚರ್ಮದ ನಟಿಯರನ್ನು ನಾಯಕಿಯರನ್ನಾಗಿ ಮಾಡಬೇಕೆಂದು ನಾನು ಆಶಿಸುತ್ತೇನೆ. ಏಕೆಂದರೆ ಇದು ಚಿತ್ರರಂಗದಲ್ಲಿ ಬಹಳ ಮುಖ್ಯವಾಗಿದೆ. ನಾನು ಕೇವಲ ಚರ್ಮದ ಬಣ್ಣದ ಬಗ್ಗೆ ಮಾತನಾಡುತ್ತಿಲ್ಲ. ಉದ್ಯಮದಲ್ಲಿ ಒಂದು ಪಕ್ಷಪಾತವಿದೆ. ಉತ್ತಮ ಚಲನಚಿತ್ರಗಳನ್ನು ಮಾಡಲು ಅದು ಕೊನೆಗೊಳ್ಳಬೇಕು” ಎಂದಿದ್ದಾರೆ.

’ನಾನು ಕುಳ್ಳಗಿರುವುದು ಮತ್ತು ನೋಡಲು ಬೇರೆ ರೀತಿಯಲ್ಲಿ ಕಾಣುತ್ತೇನೆ ಎಂದು ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ತಿರಸ್ಕರಿಸಲ್ಪಟ್ಟಿದ್ದೇನೆ. ಆದರೂ ನಾನು ಈಗ ದೂರು ನೀಡಲು ಸಾಧ್ಯವಿಲ್ಲ. ಆದರೆ, ಈ ರೀತಿಯ ಪಕ್ಷಪಾತಕ್ಕೆ ಬಲಿಯಾಗುವ ಇತರ ಅನೇಕ ದೊಡ್ಡ ದೊಡ್ಡ ನಟರಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅನುರಾಗ್ ಕಶ್ಯಪ್ ಅವರ ಗ್ಯಾಂಗ್ಸ್ ಆಫ್ ವಾಸೇಪುರ್ ಪಾರ್ಟ್ -2 ನಲ್ಲಿ ತಮ್ಮ ಪಾತ್ರದಿಂದ ಹೆಚ್ಚು ಪ್ರಸಿದ್ಧಿ ಪಡೆದ ನವಾಜುದ್ದೀನ್ ಸಿದ್ದಿಕಿ, ನಂತರ ಸೇಕ್ರೆಡ್ ಗೇಮ್ಸ್, ರಾತ್ ಅಕೇಲಿ ಹೈ, ಸೀರಿಯಸ್ ಮೆನ್ ನಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಸೇಕ್ರೆಡ್ ಗೇಮ್ಸ್ ಕೂಡ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.


ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...