Homeಮುಖಪುಟಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

- Advertisement -
- Advertisement -

ಚಿತ್ರೋದ್ಯಮದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯ ದ್ವೇಷ ಹೆಚ್ಚಾಗಿದೆ ಎಂದು ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಹೇಳಿದ್ದಾರೆ. ನಟ ಸಿದ್ದಿಕಿ, ಸುಧೀರ್ ಮಿಶ್ರಾ ಅವರ ಸೀರಿಯಸ್ ಮೆನ್ (Serious Men) ಚಿತ್ರದಲ್ಲಿನ ನಟನೆಗಾಗಿ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಸೀರಿಯಸ್ ಮೆನ್ (Serious Men) ಚಿತ್ರದ ಮತ್ತೊಂದು ಪ್ರಮುಖ ಪಾತ್ರಧಾರಿ ಇಂದಿರಾ ತಿವಾರಿ ಬಗ್ಗೆ ನವಾಜುದ್ದೀನ್ ಮಾತನಾಡುತ್ತಿದ್ದರು. ಆಕೆಗೆ ಮತ್ತೊಂದು ಚಿತ್ರದಲ್ಲಿ ಪ್ರಮುಖ ಪಾತ್ರ ದೊರೆತರೆ ಅದು ಚಿತ್ರದ ನಿಜವಾದ ಗೆಲುವು ಎಂದು ಹೇಳಿದ್ದಾರೆ.

“ಸುಧೀರ್ ಮಿಶ್ರಾ ಅವರಿಗೆ ಸಿನಿಮಾ ಬಗ್ಗೆ ಅಪಾರ ಜ್ಞಾನವಿದೆ. ಅವರ ಚಿಂತನೆಯ ಪ್ರಕ್ರಿಯೆಯು ತುಂಬಾ ಪ್ರಾಯೋಗಿಕವಾಗಿದೆ. ಹೀಗಾಗಿ ಅವರು ಆಕೆಯನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ನಮ್ಮ ಉದ್ಯಮದಲ್ಲಿ ಜನಾಂಗೀಯ ದ್ವೇಷ (racism) ಹೆಚ್ಚಾಗಿದೆ ಎಂದು ನಿಮಗೆ ಖಾತರಿ ನೀಡಬಲ್ಲೆ” ಎಂದಿದ್ದಾರೆ.

ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

“ಆಕೆ ಅವಳು ಮತ್ತೊಮ್ಮೆ ನಾಯಕಿಯಾಗಿ ನಟಿಸಿದರೆ ನನಗೆ ತುಂಬಾ ಸಂತೋಷವಾಗುತ್ತದೆ. ಸುಧೀರ್ ಮಿಶ್ರಾ ಅದನ್ನು ಮಾಡಿದ್ದಾರೆ. ಆದರೆ, ಬೇರೆ ದೊಡ್ಡ ದೊಡ್ಡ ಚಿತ್ರ ನಿರ್ಮಾಪಕರು, ನಿರ್ದೇಶಕರು, ಜವಾಬ್ದಾರಿ ಸ್ಥಾನದಲ್ಲಿರುವವರ ವಿಷಯಗಳು ಏನು? ನಮ್ಮಲ್ಲಿ ಸ್ವಜನ ಪಕ್ಷಪಾತಕ್ಕಿಂತ ಹೆಚ್ಚಾಗಿ, ಜನಾಂಗೀಯತೆಯ ಸಮಸ್ಯೆ ಇದೆ” ಎಂದಿದ್ದಾರೆ.

Serious Men
ಸೀರಿಯಸ್ ಮೆನ್ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಇಂದಿರಾ ತಿವಾರಿ

ಮುಂದುವರೆದು, “ನಾನು ಜನಾಂಗೀಯತೆ ವಿರುದ್ಧ ಹಲವು ವರ್ಷಗಳ ಕಾಲ ಹೋರಾಡಿದ್ದೇನೆ. ಕಪ್ಪು ಚರ್ಮದ ನಟಿಯರನ್ನು ನಾಯಕಿಯರನ್ನಾಗಿ ಮಾಡಬೇಕೆಂದು ನಾನು ಆಶಿಸುತ್ತೇನೆ. ಏಕೆಂದರೆ ಇದು ಚಿತ್ರರಂಗದಲ್ಲಿ ಬಹಳ ಮುಖ್ಯವಾಗಿದೆ. ನಾನು ಕೇವಲ ಚರ್ಮದ ಬಣ್ಣದ ಬಗ್ಗೆ ಮಾತನಾಡುತ್ತಿಲ್ಲ. ಉದ್ಯಮದಲ್ಲಿ ಒಂದು ಪಕ್ಷಪಾತವಿದೆ. ಉತ್ತಮ ಚಲನಚಿತ್ರಗಳನ್ನು ಮಾಡಲು ಅದು ಕೊನೆಗೊಳ್ಳಬೇಕು” ಎಂದಿದ್ದಾರೆ.

’ನಾನು ಕುಳ್ಳಗಿರುವುದು ಮತ್ತು ನೋಡಲು ಬೇರೆ ರೀತಿಯಲ್ಲಿ ಕಾಣುತ್ತೇನೆ ಎಂದು ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ತಿರಸ್ಕರಿಸಲ್ಪಟ್ಟಿದ್ದೇನೆ. ಆದರೂ ನಾನು ಈಗ ದೂರು ನೀಡಲು ಸಾಧ್ಯವಿಲ್ಲ. ಆದರೆ, ಈ ರೀತಿಯ ಪಕ್ಷಪಾತಕ್ಕೆ ಬಲಿಯಾಗುವ ಇತರ ಅನೇಕ ದೊಡ್ಡ ದೊಡ್ಡ ನಟರಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅನುರಾಗ್ ಕಶ್ಯಪ್ ಅವರ ಗ್ಯಾಂಗ್ಸ್ ಆಫ್ ವಾಸೇಪುರ್ ಪಾರ್ಟ್ -2 ನಲ್ಲಿ ತಮ್ಮ ಪಾತ್ರದಿಂದ ಹೆಚ್ಚು ಪ್ರಸಿದ್ಧಿ ಪಡೆದ ನವಾಜುದ್ದೀನ್ ಸಿದ್ದಿಕಿ, ನಂತರ ಸೇಕ್ರೆಡ್ ಗೇಮ್ಸ್, ರಾತ್ ಅಕೇಲಿ ಹೈ, ಸೀರಿಯಸ್ ಮೆನ್ ನಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಸೇಕ್ರೆಡ್ ಗೇಮ್ಸ್ ಕೂಡ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.


ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...