Homeಮುಖಪುಟಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

- Advertisement -
- Advertisement -

ಚಿತ್ರೋದ್ಯಮದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯ ದ್ವೇಷ ಹೆಚ್ಚಾಗಿದೆ ಎಂದು ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಹೇಳಿದ್ದಾರೆ. ನಟ ಸಿದ್ದಿಕಿ, ಸುಧೀರ್ ಮಿಶ್ರಾ ಅವರ ಸೀರಿಯಸ್ ಮೆನ್ (Serious Men) ಚಿತ್ರದಲ್ಲಿನ ನಟನೆಗಾಗಿ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಸೀರಿಯಸ್ ಮೆನ್ (Serious Men) ಚಿತ್ರದ ಮತ್ತೊಂದು ಪ್ರಮುಖ ಪಾತ್ರಧಾರಿ ಇಂದಿರಾ ತಿವಾರಿ ಬಗ್ಗೆ ನವಾಜುದ್ದೀನ್ ಮಾತನಾಡುತ್ತಿದ್ದರು. ಆಕೆಗೆ ಮತ್ತೊಂದು ಚಿತ್ರದಲ್ಲಿ ಪ್ರಮುಖ ಪಾತ್ರ ದೊರೆತರೆ ಅದು ಚಿತ್ರದ ನಿಜವಾದ ಗೆಲುವು ಎಂದು ಹೇಳಿದ್ದಾರೆ.

“ಸುಧೀರ್ ಮಿಶ್ರಾ ಅವರಿಗೆ ಸಿನಿಮಾ ಬಗ್ಗೆ ಅಪಾರ ಜ್ಞಾನವಿದೆ. ಅವರ ಚಿಂತನೆಯ ಪ್ರಕ್ರಿಯೆಯು ತುಂಬಾ ಪ್ರಾಯೋಗಿಕವಾಗಿದೆ. ಹೀಗಾಗಿ ಅವರು ಆಕೆಯನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ನಮ್ಮ ಉದ್ಯಮದಲ್ಲಿ ಜನಾಂಗೀಯ ದ್ವೇಷ (racism) ಹೆಚ್ಚಾಗಿದೆ ಎಂದು ನಿಮಗೆ ಖಾತರಿ ನೀಡಬಲ್ಲೆ” ಎಂದಿದ್ದಾರೆ.

ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

“ಆಕೆ ಅವಳು ಮತ್ತೊಮ್ಮೆ ನಾಯಕಿಯಾಗಿ ನಟಿಸಿದರೆ ನನಗೆ ತುಂಬಾ ಸಂತೋಷವಾಗುತ್ತದೆ. ಸುಧೀರ್ ಮಿಶ್ರಾ ಅದನ್ನು ಮಾಡಿದ್ದಾರೆ. ಆದರೆ, ಬೇರೆ ದೊಡ್ಡ ದೊಡ್ಡ ಚಿತ್ರ ನಿರ್ಮಾಪಕರು, ನಿರ್ದೇಶಕರು, ಜವಾಬ್ದಾರಿ ಸ್ಥಾನದಲ್ಲಿರುವವರ ವಿಷಯಗಳು ಏನು? ನಮ್ಮಲ್ಲಿ ಸ್ವಜನ ಪಕ್ಷಪಾತಕ್ಕಿಂತ ಹೆಚ್ಚಾಗಿ, ಜನಾಂಗೀಯತೆಯ ಸಮಸ್ಯೆ ಇದೆ” ಎಂದಿದ್ದಾರೆ.

Serious Men
ಸೀರಿಯಸ್ ಮೆನ್ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಇಂದಿರಾ ತಿವಾರಿ

ಮುಂದುವರೆದು, “ನಾನು ಜನಾಂಗೀಯತೆ ವಿರುದ್ಧ ಹಲವು ವರ್ಷಗಳ ಕಾಲ ಹೋರಾಡಿದ್ದೇನೆ. ಕಪ್ಪು ಚರ್ಮದ ನಟಿಯರನ್ನು ನಾಯಕಿಯರನ್ನಾಗಿ ಮಾಡಬೇಕೆಂದು ನಾನು ಆಶಿಸುತ್ತೇನೆ. ಏಕೆಂದರೆ ಇದು ಚಿತ್ರರಂಗದಲ್ಲಿ ಬಹಳ ಮುಖ್ಯವಾಗಿದೆ. ನಾನು ಕೇವಲ ಚರ್ಮದ ಬಣ್ಣದ ಬಗ್ಗೆ ಮಾತನಾಡುತ್ತಿಲ್ಲ. ಉದ್ಯಮದಲ್ಲಿ ಒಂದು ಪಕ್ಷಪಾತವಿದೆ. ಉತ್ತಮ ಚಲನಚಿತ್ರಗಳನ್ನು ಮಾಡಲು ಅದು ಕೊನೆಗೊಳ್ಳಬೇಕು” ಎಂದಿದ್ದಾರೆ.

’ನಾನು ಕುಳ್ಳಗಿರುವುದು ಮತ್ತು ನೋಡಲು ಬೇರೆ ರೀತಿಯಲ್ಲಿ ಕಾಣುತ್ತೇನೆ ಎಂದು ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ತಿರಸ್ಕರಿಸಲ್ಪಟ್ಟಿದ್ದೇನೆ. ಆದರೂ ನಾನು ಈಗ ದೂರು ನೀಡಲು ಸಾಧ್ಯವಿಲ್ಲ. ಆದರೆ, ಈ ರೀತಿಯ ಪಕ್ಷಪಾತಕ್ಕೆ ಬಲಿಯಾಗುವ ಇತರ ಅನೇಕ ದೊಡ್ಡ ದೊಡ್ಡ ನಟರಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅನುರಾಗ್ ಕಶ್ಯಪ್ ಅವರ ಗ್ಯಾಂಗ್ಸ್ ಆಫ್ ವಾಸೇಪುರ್ ಪಾರ್ಟ್ -2 ನಲ್ಲಿ ತಮ್ಮ ಪಾತ್ರದಿಂದ ಹೆಚ್ಚು ಪ್ರಸಿದ್ಧಿ ಪಡೆದ ನವಾಜುದ್ದೀನ್ ಸಿದ್ದಿಕಿ, ನಂತರ ಸೇಕ್ರೆಡ್ ಗೇಮ್ಸ್, ರಾತ್ ಅಕೇಲಿ ಹೈ, ಸೀರಿಯಸ್ ಮೆನ್ ನಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಸೇಕ್ರೆಡ್ ಗೇಮ್ಸ್ ಕೂಡ ಅಂತಾರಾಷ್ಟ್ರೀಯ EMMY ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.


ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...