Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...