Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...