Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...