Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...