Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...