Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...