Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...