Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...