Homeಕರ್ನಾಟಕಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

- Advertisement -
- Advertisement -

ಇಂದು ಹಲವು ಶಾಸಕರು ರಾಜಿನಾಮೇ ನೀಡಲು ಸ್ಪೀಕರ್ ಕಚೇರಿ ತಲುಪಿರುವುದು ನಿಮಗೆಲ್ಲಾ ಗೊತ್ತಿದೆ. ಅದರಲ್ಲಿ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲರೂ ಒಬ್ಬರು. ಇವರು ರಾಜಿನಾಮೆ ನೀಡುವ ಮುನ್ನ ಬಿಜೆಪಿಯ ಶ್ರೀರಾಮುಲು ಮತ್ತು ಯಡಿಯೂರಪ್ಪನವರಿಗೆ ಒಂದು ದೊಡ್ಡ ಕಂಡಿಷನ್ ಹಾಕಿದ್ದಾರೆ. ಅದೇನೆಂದು ಕೇಳಿದರೆ ನೀವು ನಗುತ್ತೀರಿ ಅಷ್ಟೇ.

ಸರಿ ನೇರವಾಗಿ ವಿಷಯಕ್ಕೆ ಬಂದರೆ ಅವರು ಮುಂದಿನ ಸಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ. ಆದರೂ ಅವರನ್ನು ಮಂತ್ರಿ ಮಾಡಬೇಕೆಂತೆ. ಹೇಗೆಂದರೆ ಎಂಎಲ್‍ಸಿ ಮಾಡಿ, ಮಂತ್ರಿ ಮಾಡಬೇಕು. ಚುನಾವಣೆಯ ಖರ್ಚನ್ನೆಲ್ಲಾ ಪಕ್ಷವೇ ವಹಿಸಿಕೊಳ್ಳಬೇಕು. ಹಾಗಾದರೆ ಮಾತ್ರ ನಾನು ರಾಜಿನಾಮೇ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರ ಸಮಕ್ಷಮದಲ್ಲಿ ಈ ಶಾಸಕ ಮಹಾಶಯ ಹೇಳಿದ್ದಾರಂತ ವದಂತಿ ಹಬ್ಬಿದೆ.

ಸರಿ ವಿಧಾನ ಸಭಾ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂದರೆ ಹಿಂಜರಿಕೆಯಿಂದಲೇ ಮುಂದಿನ ಸಾರಿ ಖಂಡಿತಾ ನಾನು ಗೆಲ್ಲುವ ಸಾಧ್ಯತೆಯಿಲ್ಲ. ಈ ಸಾರಿ ಬಹಳ ಪ್ರಯಾಸಪಟ್ಟು ಕೇವಲ 213 ಓಟುಗಳಿಂದ ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಜನರು ನನ್ನ ವಿರುದ್ಧವಿದ್ದಾರೆ. ಹಾಗಾಗಿ ನನ್ನ ಬದಲು ನನ್ನ ಮಕ್ಕಳನ್ನು ಬೇಕಾದರೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಆಪರೇಷನ್ ಮಾಡಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ಈ ಪ್ರತಾಪಗೌಡ ಪಾಟೀಲನನ್ನು ಕಾಂಗ್ರೆಸ್ ನಾಯಕರು ಸಮಾಧಾನಿಸಿದ್ದರು. ರಾಜ್ಯ ಉಗ್ರಾಣ ನಿಮಗ ಮಂಡಳಿಯ ಅಧ್ಯಕ್ಷಗಿರಿಯ ಜೊತೆಗೆ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಹಣವನ್ನು ನೀಡಿದ್ದರು. ತಂದ ಹಣದಲ್ಲಿಯೂ ಸಹ ತನ್ನ ಮೂರು ಮಕ್ಕಳಿಗೆ ಕಾಂಟ್ರಾಕ್ಟ್ ನೀಡಿ ಸಾಕಷ್ಟು ಗುಳುಂ ಮಾಡಿದ್ದರು. ಈಗ ಇನ್ನು ಹಣದಾಹ ತೀರದ ಕಾರಣಕ್ಕೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಜನ ಮಸ್ಕಿಯಲ್ಲಿ ಮಾತಾಡುತ್ತಿದ್ದಾರೆ.

ಈ ಪ್ರತಾಪ್ ಗೌಡ ಪಾಟಿಲರು ಆರಂಭದಿಂದಲೂ ಒಂದು ಕಾಲನ್ನು ಬಿಜಿಪಿಯಲ್ಲಿಟ್ಟಿದ್ದರು. ಈ ಮೈತ್ರಿ ಸರ್ಕಾರ ಬಹುಮತ ಸಾಬೀತು ಮಾಡುವ ವೇಳೆ ಡಿ.ಕೆ ಶಿವಕುಮಾರ್ ರವರು ಇವರ ಜೇಬಿಗೆ ವಿಪ್ ಇಟ್ಟಿದ್ದರು. ಅದ ಕೂಡ ತನ್ನ ಅಸಮಾಮಧಾನಕ್ಕೆ ಕಾರಣ ಎಂದು ಹೇಳುತ್ತಿದ್ದಾರೆ.

ಸರ್ಕಾರ ಉರುಳಿಸಲು ಒಕ್ಕಗಲಿಗರ ಜೊತೆ ‘ವಾಲ್ಮೀಕಿ ನಾಯಕ’ರು ಸಾಥ್
ಒಕ್ಕಲಿಗ ಶಾಸಕರನ್ನು ಟಾರ್ಗೆಟ್ ಮಾಡಿಕೊಂಡು ಆಪರೇಷನ್‍ಗೆ ಮುಂದಾಗಿದ್ದ ಬಿಜೆಪಿಗೆ 50-50% ಫಲಿತಾಂಶ ಸಿಕ್ಕಿತ್ತು. ಅದರ ಜೊತೆಗೆ ರಮೇಶ್ ಜಾರಕಿಹೊಳಿ ಹೆಸರಿನಲ್ಲಿ ವಾಲ್ಮೀಕಿ ಶಾಸಕರನ್ನು ಒಳಗೊಳ್ಳಲು ಹಾಕಿದ ಬಿಜೆಪಿ ಸ್ಕೆಚ್ ಯಶಸ್ವಿಯಾದಂತೆ ಕಾಣುತ್ತಿದೆ.

ಬಿ.ಶ್ರೀರಾಮುಲುರವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎನ್ನುವ ಆಮಿಷಕ್ಕೆ ಕೆಲವರು ಕೈ ಸೇರಿಸಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು  ವಿಶ್ಲೇಷಿಸಲಾಗುತ್ತಿದೆ.

ಉತ್ತರ ಕರ್ನಾಟಕದ ಬಹುತೇಕ ಶಾಸಕರಿಗೆ ತಮ್ಮ ಭವಿಷ್ಯದ ಬಗ್ಗೆ ಸಮರ್ಪಕ ಜ್ಞಾನವಿಲ್ಲ. ಇಲ್ಲಿನ ಎಸ್ಟಿ ಸಮುದಾಯದ ಶಾಸಕರು ಲಿಂಗಾಯಿತ ನಾಯಕರನ್ನೇ ತಮ್ಮ ಗಾಢ್ ಫಾಧರ್‍ಗಳಾಗಿ ಮಾಡಿಕೊಂಡಿದ್ದಾರೆ. ಅವರು ಹೇಳಿದ ಹಾಗೆ ಕೇಳುತ್ತಾರೆ. ಅದರ ಭಾಗವಾಗಿಯೇ ಈಗ ರಾಜಿನಾಮೆ ನೀಡುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ವಿವರಿಸಿದ್ದಾರೆ.

ಇದು ಎಲ್ಲಿಗೆ ಹೋಗಿ ತಲುಪುತ್ತೇ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...