Homeಮುಖಪುಟಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ...

ಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ ಹೇಳಕೆಗೆ ಭಾರೀ ವಿರೋಧ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ 100 ಕ್ಕೂ ಹೆಚ್ಚು ಮಕ್ಕಳ ಸಾವಿನ ಬಗ್ಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. “ಪ್ರತಿ ವರ್ಷ ಸಾವುಗಳು ಸಂಭವಿಸುತ್ತವೆ, ಜೈಪುರದಲ್ಲಿಯೂ ಸಂಭವಿಸುತ್ತವೆ ಇದರಲ್ಲಿ ಹೊಸತೇನೂ ಇಲ್ಲ” ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯೊಂದರಲ್ಲಿಯೇ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಕಳೆದ ತಿಂಗಳು ಸಾವನ್ನಪ್ಪಿದ್ದರು. ಈ ಕುರಿತು ರಾಜಸ್ಥಾನದ ಕಾಂಗ್ರೆಸ್ ಇನ್‌ಚಾರ್ಜ್ ಆಗಿರುವ ಅವಿನಾಶ್ ಪಾಂಡೆಯವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವರದಿ ನೀಡಿದ್ದರು. ಸೋನಿಯಾ ಗಾಂಧಿ ಕೂಡ ಈ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಆದರೆ ಇದರ ಕುರಿತು ಕ್ರಮ ತೆಗೆದುಕೊಳ್ಳಬೇಕಾದ ಮುಖ್ಯಮಂತ್ರಿಗಳು ಉಡಾಫೆಯ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಆರೋಗ್ಯ ಸಚಿವ ಡಾ.ರಘು ಶರ್ಮಾ ಸೇರಿದಂತೆ ಹಲವರು ಕೋಟಾದಲ್ಲಿ ಮಕ್ಕಳ ಸಾವಿಗೆ ರಾಜ್ಯದ ಆಸ್ಪತ್ರೆಗಳಲ್ಲಿನ ಯಂತ್ರೋಪಕರಣಗಳ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯವನ್ನು ನಿರಾಕರಿಸಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಡಾ.ರಘು ಶರ್ಮಾ ಅವರು ಟ್ವೀಟ್‌ ಮಾಡಿ “ರಾಜ್ಯದಲ್ಲಿ ಮಕ್ಕಳಿಗಾಗಿ ಮೊದಲ ಐಸಿಯು ಅನ್ನು 2003 ರಲ್ಲಿ ನಮ್ಮ ಸರ್ಕಾರವು ಸ್ಥಾಪಿಸಿತು. ಕೋಟಾದಲ್ಲಿಯೂ ಸಹ, ನಾವು 2011 ರಲ್ಲಿ ಐಸಿಯು ಸ್ಥಾಪಿಸಿದ್ದೇವೆ. ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿದೆ. ಜೆ.ಕೆ.ಲೋನ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಶಿಶುಗಳ ಸಾವಿನ ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ತಿಳಿಸಿದ್ದಾರೆ.

2014 ರಿಂದ 2019ರ ಅವಧಿಯಲ್ಲಿನ ಸಾವುಗಳನ್ನು ಪರಿಶೀಲಿಸಿದರೆ 2019 ರಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ತೀರಾ ಕಡಿಮೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. (ಗೆಹ್ಲೋಟ್ ಸರ್ಕಾರವನ್ನು ಡಿಸೆಂಬರ್ 2018 ರಲ್ಲಿ ರಚಿಸಲಾಯಿತು).

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, “ಕೆಲವರು ಕೋಟಾದ ಪರಿಸ್ಥಿತಿಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಅಥವಾ ತಿಳಿಯದೆ ಕಿಡಿಗೇಡಿತನದಲ್ಲಿ ತೊಡಗಿದ್ದಾರೆ. ನಾನು ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಮತ್ತು 5 ರಿಂದ 6 ವರ್ಷಗಳಲ್ಲಿನ ಸಾವಿನ ಸಂಖ್ಯೆ ನೋಡಿದರೆ 2019 ರಲ್ಲಿ ಕಡಿಮೆ ಸಂಖ್ಯೆಯನ್ನು ಕಂಡಿದ್ದೇನೆ ಎಂದಿದ್ದಾರೆ”

ಮತ್ತೊಂದೆಡೆ, ಕೋಟಾದಲ್ಲಿ ಮಕ್ಕಳ ಸಾವಿನ ಬಗ್ಗೆ ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಮಂಗಳವಾರ, ಬಿಜೆಪಿ ತನ್ನ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದ ಮೇರೆಗೆ ತನ್ನ ಸಂಸದರ ಮೂರು ಸದಸ್ಯರ ಸಮಿತಿಯನ್ನು ಕೋಟಾದ ಜೆ.ಕೆ.ಲೋನ್ ಆಸ್ಪತ್ರೆಗೆ ಕಳುಹಿಸಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿತ್ತು. ರಾಜ್ಯಸಭಾ ಸಂಸದ ಕಾಂತಾ ಕರ್ದಂ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ವೈದ್ಯರ ವರ್ತನೆ ಅತ್ಯಂತ ಕೆಟ್ಟದಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರು ಅಶೋಕ್ ಗೆಹ್ಲೋಟ್ ಸರ್ಕಾರ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದ್ದಾರೆ.

ಅಲ್ಲಿನ ಮಕ್ಕಳ ಪೋಷಕರು ತೀವ್ರತರವಾದ ಸಿಬ್ಬಂದಿ ಕೊರತೆ, ವೈದ್ಯಕೀಯ ಸಲಕರಣೆಗಳ ಕೊರತೆ ಮತ್ತು ವೈದ್ಯರು ಸಮಯೋಚಿತವಾಗಿ ಸ್ಪಂದಿಸದಿರುವುದು, ಸರ್ಕಾರಿ ಆಸ್ಪತ್ರೆಯಲ್ಲಿನ ಕಳಪೆ ಸ್ಥಿತಿಯ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೊಪಿಸಿದ್ದಾರೆ. ಇಲ್ಲಿ ಶುಚಿತ್ವದ ವಾತವಾರಣವಿಲ್ಲ ಹಾಗಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಹಲವರು ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಧೃವ್‌ ರಾಠೀ “ನೂರಕ್ಕೂ ಹೆಚ್ಚು ಮಕ್ಕಳು ಸಾವನಪ್ಪಿರುವ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ. ಮುಂದಿನ ಸಲ ಕಾಂಗ್ರೆಸ್‌ ಸರ್ಕಾರವನ್ನು ಜನರು ಕಿತ್ತೊಗೆಯಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...