Homeಮುಖಪುಟಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ...

ಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ ಹೇಳಕೆಗೆ ಭಾರೀ ವಿರೋಧ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ 100 ಕ್ಕೂ ಹೆಚ್ಚು ಮಕ್ಕಳ ಸಾವಿನ ಬಗ್ಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. “ಪ್ರತಿ ವರ್ಷ ಸಾವುಗಳು ಸಂಭವಿಸುತ್ತವೆ, ಜೈಪುರದಲ್ಲಿಯೂ ಸಂಭವಿಸುತ್ತವೆ ಇದರಲ್ಲಿ ಹೊಸತೇನೂ ಇಲ್ಲ” ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯೊಂದರಲ್ಲಿಯೇ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಕಳೆದ ತಿಂಗಳು ಸಾವನ್ನಪ್ಪಿದ್ದರು. ಈ ಕುರಿತು ರಾಜಸ್ಥಾನದ ಕಾಂಗ್ರೆಸ್ ಇನ್‌ಚಾರ್ಜ್ ಆಗಿರುವ ಅವಿನಾಶ್ ಪಾಂಡೆಯವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವರದಿ ನೀಡಿದ್ದರು. ಸೋನಿಯಾ ಗಾಂಧಿ ಕೂಡ ಈ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಆದರೆ ಇದರ ಕುರಿತು ಕ್ರಮ ತೆಗೆದುಕೊಳ್ಳಬೇಕಾದ ಮುಖ್ಯಮಂತ್ರಿಗಳು ಉಡಾಫೆಯ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಆರೋಗ್ಯ ಸಚಿವ ಡಾ.ರಘು ಶರ್ಮಾ ಸೇರಿದಂತೆ ಹಲವರು ಕೋಟಾದಲ್ಲಿ ಮಕ್ಕಳ ಸಾವಿಗೆ ರಾಜ್ಯದ ಆಸ್ಪತ್ರೆಗಳಲ್ಲಿನ ಯಂತ್ರೋಪಕರಣಗಳ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯವನ್ನು ನಿರಾಕರಿಸಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಡಾ.ರಘು ಶರ್ಮಾ ಅವರು ಟ್ವೀಟ್‌ ಮಾಡಿ “ರಾಜ್ಯದಲ್ಲಿ ಮಕ್ಕಳಿಗಾಗಿ ಮೊದಲ ಐಸಿಯು ಅನ್ನು 2003 ರಲ್ಲಿ ನಮ್ಮ ಸರ್ಕಾರವು ಸ್ಥಾಪಿಸಿತು. ಕೋಟಾದಲ್ಲಿಯೂ ಸಹ, ನಾವು 2011 ರಲ್ಲಿ ಐಸಿಯು ಸ್ಥಾಪಿಸಿದ್ದೇವೆ. ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿದೆ. ಜೆ.ಕೆ.ಲೋನ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಶಿಶುಗಳ ಸಾವಿನ ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ತಿಳಿಸಿದ್ದಾರೆ.

2014 ರಿಂದ 2019ರ ಅವಧಿಯಲ್ಲಿನ ಸಾವುಗಳನ್ನು ಪರಿಶೀಲಿಸಿದರೆ 2019 ರಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ತೀರಾ ಕಡಿಮೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. (ಗೆಹ್ಲೋಟ್ ಸರ್ಕಾರವನ್ನು ಡಿಸೆಂಬರ್ 2018 ರಲ್ಲಿ ರಚಿಸಲಾಯಿತು).

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, “ಕೆಲವರು ಕೋಟಾದ ಪರಿಸ್ಥಿತಿಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಅಥವಾ ತಿಳಿಯದೆ ಕಿಡಿಗೇಡಿತನದಲ್ಲಿ ತೊಡಗಿದ್ದಾರೆ. ನಾನು ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಮತ್ತು 5 ರಿಂದ 6 ವರ್ಷಗಳಲ್ಲಿನ ಸಾವಿನ ಸಂಖ್ಯೆ ನೋಡಿದರೆ 2019 ರಲ್ಲಿ ಕಡಿಮೆ ಸಂಖ್ಯೆಯನ್ನು ಕಂಡಿದ್ದೇನೆ ಎಂದಿದ್ದಾರೆ”

ಮತ್ತೊಂದೆಡೆ, ಕೋಟಾದಲ್ಲಿ ಮಕ್ಕಳ ಸಾವಿನ ಬಗ್ಗೆ ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಮಂಗಳವಾರ, ಬಿಜೆಪಿ ತನ್ನ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದ ಮೇರೆಗೆ ತನ್ನ ಸಂಸದರ ಮೂರು ಸದಸ್ಯರ ಸಮಿತಿಯನ್ನು ಕೋಟಾದ ಜೆ.ಕೆ.ಲೋನ್ ಆಸ್ಪತ್ರೆಗೆ ಕಳುಹಿಸಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿತ್ತು. ರಾಜ್ಯಸಭಾ ಸಂಸದ ಕಾಂತಾ ಕರ್ದಂ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ವೈದ್ಯರ ವರ್ತನೆ ಅತ್ಯಂತ ಕೆಟ್ಟದಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರು ಅಶೋಕ್ ಗೆಹ್ಲೋಟ್ ಸರ್ಕಾರ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದ್ದಾರೆ.

ಅಲ್ಲಿನ ಮಕ್ಕಳ ಪೋಷಕರು ತೀವ್ರತರವಾದ ಸಿಬ್ಬಂದಿ ಕೊರತೆ, ವೈದ್ಯಕೀಯ ಸಲಕರಣೆಗಳ ಕೊರತೆ ಮತ್ತು ವೈದ್ಯರು ಸಮಯೋಚಿತವಾಗಿ ಸ್ಪಂದಿಸದಿರುವುದು, ಸರ್ಕಾರಿ ಆಸ್ಪತ್ರೆಯಲ್ಲಿನ ಕಳಪೆ ಸ್ಥಿತಿಯ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೊಪಿಸಿದ್ದಾರೆ. ಇಲ್ಲಿ ಶುಚಿತ್ವದ ವಾತವಾರಣವಿಲ್ಲ ಹಾಗಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಹಲವರು ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಧೃವ್‌ ರಾಠೀ “ನೂರಕ್ಕೂ ಹೆಚ್ಚು ಮಕ್ಕಳು ಸಾವನಪ್ಪಿರುವ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ. ಮುಂದಿನ ಸಲ ಕಾಂಗ್ರೆಸ್‌ ಸರ್ಕಾರವನ್ನು ಜನರು ಕಿತ್ತೊಗೆಯಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...