Homeಮುಖಪುಟಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ...

ಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ ಹೇಳಕೆಗೆ ಭಾರೀ ವಿರೋಧ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ 100 ಕ್ಕೂ ಹೆಚ್ಚು ಮಕ್ಕಳ ಸಾವಿನ ಬಗ್ಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. “ಪ್ರತಿ ವರ್ಷ ಸಾವುಗಳು ಸಂಭವಿಸುತ್ತವೆ, ಜೈಪುರದಲ್ಲಿಯೂ ಸಂಭವಿಸುತ್ತವೆ ಇದರಲ್ಲಿ ಹೊಸತೇನೂ ಇಲ್ಲ” ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯೊಂದರಲ್ಲಿಯೇ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಕಳೆದ ತಿಂಗಳು ಸಾವನ್ನಪ್ಪಿದ್ದರು. ಈ ಕುರಿತು ರಾಜಸ್ಥಾನದ ಕಾಂಗ್ರೆಸ್ ಇನ್‌ಚಾರ್ಜ್ ಆಗಿರುವ ಅವಿನಾಶ್ ಪಾಂಡೆಯವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವರದಿ ನೀಡಿದ್ದರು. ಸೋನಿಯಾ ಗಾಂಧಿ ಕೂಡ ಈ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಆದರೆ ಇದರ ಕುರಿತು ಕ್ರಮ ತೆಗೆದುಕೊಳ್ಳಬೇಕಾದ ಮುಖ್ಯಮಂತ್ರಿಗಳು ಉಡಾಫೆಯ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಆರೋಗ್ಯ ಸಚಿವ ಡಾ.ರಘು ಶರ್ಮಾ ಸೇರಿದಂತೆ ಹಲವರು ಕೋಟಾದಲ್ಲಿ ಮಕ್ಕಳ ಸಾವಿಗೆ ರಾಜ್ಯದ ಆಸ್ಪತ್ರೆಗಳಲ್ಲಿನ ಯಂತ್ರೋಪಕರಣಗಳ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯವನ್ನು ನಿರಾಕರಿಸಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಡಾ.ರಘು ಶರ್ಮಾ ಅವರು ಟ್ವೀಟ್‌ ಮಾಡಿ “ರಾಜ್ಯದಲ್ಲಿ ಮಕ್ಕಳಿಗಾಗಿ ಮೊದಲ ಐಸಿಯು ಅನ್ನು 2003 ರಲ್ಲಿ ನಮ್ಮ ಸರ್ಕಾರವು ಸ್ಥಾಪಿಸಿತು. ಕೋಟಾದಲ್ಲಿಯೂ ಸಹ, ನಾವು 2011 ರಲ್ಲಿ ಐಸಿಯು ಸ್ಥಾಪಿಸಿದ್ದೇವೆ. ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿದೆ. ಜೆ.ಕೆ.ಲೋನ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಶಿಶುಗಳ ಸಾವಿನ ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ತಿಳಿಸಿದ್ದಾರೆ.

2014 ರಿಂದ 2019ರ ಅವಧಿಯಲ್ಲಿನ ಸಾವುಗಳನ್ನು ಪರಿಶೀಲಿಸಿದರೆ 2019 ರಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ತೀರಾ ಕಡಿಮೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. (ಗೆಹ್ಲೋಟ್ ಸರ್ಕಾರವನ್ನು ಡಿಸೆಂಬರ್ 2018 ರಲ್ಲಿ ರಚಿಸಲಾಯಿತು).

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, “ಕೆಲವರು ಕೋಟಾದ ಪರಿಸ್ಥಿತಿಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಅಥವಾ ತಿಳಿಯದೆ ಕಿಡಿಗೇಡಿತನದಲ್ಲಿ ತೊಡಗಿದ್ದಾರೆ. ನಾನು ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಮತ್ತು 5 ರಿಂದ 6 ವರ್ಷಗಳಲ್ಲಿನ ಸಾವಿನ ಸಂಖ್ಯೆ ನೋಡಿದರೆ 2019 ರಲ್ಲಿ ಕಡಿಮೆ ಸಂಖ್ಯೆಯನ್ನು ಕಂಡಿದ್ದೇನೆ ಎಂದಿದ್ದಾರೆ”

ಮತ್ತೊಂದೆಡೆ, ಕೋಟಾದಲ್ಲಿ ಮಕ್ಕಳ ಸಾವಿನ ಬಗ್ಗೆ ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಮಂಗಳವಾರ, ಬಿಜೆಪಿ ತನ್ನ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದ ಮೇರೆಗೆ ತನ್ನ ಸಂಸದರ ಮೂರು ಸದಸ್ಯರ ಸಮಿತಿಯನ್ನು ಕೋಟಾದ ಜೆ.ಕೆ.ಲೋನ್ ಆಸ್ಪತ್ರೆಗೆ ಕಳುಹಿಸಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿತ್ತು. ರಾಜ್ಯಸಭಾ ಸಂಸದ ಕಾಂತಾ ಕರ್ದಂ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ವೈದ್ಯರ ವರ್ತನೆ ಅತ್ಯಂತ ಕೆಟ್ಟದಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರು ಅಶೋಕ್ ಗೆಹ್ಲೋಟ್ ಸರ್ಕಾರ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದ್ದಾರೆ.

ಅಲ್ಲಿನ ಮಕ್ಕಳ ಪೋಷಕರು ತೀವ್ರತರವಾದ ಸಿಬ್ಬಂದಿ ಕೊರತೆ, ವೈದ್ಯಕೀಯ ಸಲಕರಣೆಗಳ ಕೊರತೆ ಮತ್ತು ವೈದ್ಯರು ಸಮಯೋಚಿತವಾಗಿ ಸ್ಪಂದಿಸದಿರುವುದು, ಸರ್ಕಾರಿ ಆಸ್ಪತ್ರೆಯಲ್ಲಿನ ಕಳಪೆ ಸ್ಥಿತಿಯ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೊಪಿಸಿದ್ದಾರೆ. ಇಲ್ಲಿ ಶುಚಿತ್ವದ ವಾತವಾರಣವಿಲ್ಲ ಹಾಗಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಹಲವರು ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಧೃವ್‌ ರಾಠೀ “ನೂರಕ್ಕೂ ಹೆಚ್ಚು ಮಕ್ಕಳು ಸಾವನಪ್ಪಿರುವ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ. ಮುಂದಿನ ಸಲ ಕಾಂಗ್ರೆಸ್‌ ಸರ್ಕಾರವನ್ನು ಜನರು ಕಿತ್ತೊಗೆಯಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...