Homeಮುಖಪುಟಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ...

ಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ ಹೇಳಕೆಗೆ ಭಾರೀ ವಿರೋಧ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ 100 ಕ್ಕೂ ಹೆಚ್ಚು ಮಕ್ಕಳ ಸಾವಿನ ಬಗ್ಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. “ಪ್ರತಿ ವರ್ಷ ಸಾವುಗಳು ಸಂಭವಿಸುತ್ತವೆ, ಜೈಪುರದಲ್ಲಿಯೂ ಸಂಭವಿಸುತ್ತವೆ ಇದರಲ್ಲಿ ಹೊಸತೇನೂ ಇಲ್ಲ” ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯೊಂದರಲ್ಲಿಯೇ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಕಳೆದ ತಿಂಗಳು ಸಾವನ್ನಪ್ಪಿದ್ದರು. ಈ ಕುರಿತು ರಾಜಸ್ಥಾನದ ಕಾಂಗ್ರೆಸ್ ಇನ್‌ಚಾರ್ಜ್ ಆಗಿರುವ ಅವಿನಾಶ್ ಪಾಂಡೆಯವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವರದಿ ನೀಡಿದ್ದರು. ಸೋನಿಯಾ ಗಾಂಧಿ ಕೂಡ ಈ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಆದರೆ ಇದರ ಕುರಿತು ಕ್ರಮ ತೆಗೆದುಕೊಳ್ಳಬೇಕಾದ ಮುಖ್ಯಮಂತ್ರಿಗಳು ಉಡಾಫೆಯ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಆರೋಗ್ಯ ಸಚಿವ ಡಾ.ರಘು ಶರ್ಮಾ ಸೇರಿದಂತೆ ಹಲವರು ಕೋಟಾದಲ್ಲಿ ಮಕ್ಕಳ ಸಾವಿಗೆ ರಾಜ್ಯದ ಆಸ್ಪತ್ರೆಗಳಲ್ಲಿನ ಯಂತ್ರೋಪಕರಣಗಳ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯವನ್ನು ನಿರಾಕರಿಸಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಡಾ.ರಘು ಶರ್ಮಾ ಅವರು ಟ್ವೀಟ್‌ ಮಾಡಿ “ರಾಜ್ಯದಲ್ಲಿ ಮಕ್ಕಳಿಗಾಗಿ ಮೊದಲ ಐಸಿಯು ಅನ್ನು 2003 ರಲ್ಲಿ ನಮ್ಮ ಸರ್ಕಾರವು ಸ್ಥಾಪಿಸಿತು. ಕೋಟಾದಲ್ಲಿಯೂ ಸಹ, ನಾವು 2011 ರಲ್ಲಿ ಐಸಿಯು ಸ್ಥಾಪಿಸಿದ್ದೇವೆ. ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿದೆ. ಜೆ.ಕೆ.ಲೋನ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಶಿಶುಗಳ ಸಾವಿನ ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ತಿಳಿಸಿದ್ದಾರೆ.

2014 ರಿಂದ 2019ರ ಅವಧಿಯಲ್ಲಿನ ಸಾವುಗಳನ್ನು ಪರಿಶೀಲಿಸಿದರೆ 2019 ರಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ತೀರಾ ಕಡಿಮೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. (ಗೆಹ್ಲೋಟ್ ಸರ್ಕಾರವನ್ನು ಡಿಸೆಂಬರ್ 2018 ರಲ್ಲಿ ರಚಿಸಲಾಯಿತು).

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, “ಕೆಲವರು ಕೋಟಾದ ಪರಿಸ್ಥಿತಿಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಅಥವಾ ತಿಳಿಯದೆ ಕಿಡಿಗೇಡಿತನದಲ್ಲಿ ತೊಡಗಿದ್ದಾರೆ. ನಾನು ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಮತ್ತು 5 ರಿಂದ 6 ವರ್ಷಗಳಲ್ಲಿನ ಸಾವಿನ ಸಂಖ್ಯೆ ನೋಡಿದರೆ 2019 ರಲ್ಲಿ ಕಡಿಮೆ ಸಂಖ್ಯೆಯನ್ನು ಕಂಡಿದ್ದೇನೆ ಎಂದಿದ್ದಾರೆ”

ಮತ್ತೊಂದೆಡೆ, ಕೋಟಾದಲ್ಲಿ ಮಕ್ಕಳ ಸಾವಿನ ಬಗ್ಗೆ ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಮಂಗಳವಾರ, ಬಿಜೆಪಿ ತನ್ನ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದ ಮೇರೆಗೆ ತನ್ನ ಸಂಸದರ ಮೂರು ಸದಸ್ಯರ ಸಮಿತಿಯನ್ನು ಕೋಟಾದ ಜೆ.ಕೆ.ಲೋನ್ ಆಸ್ಪತ್ರೆಗೆ ಕಳುಹಿಸಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿತ್ತು. ರಾಜ್ಯಸಭಾ ಸಂಸದ ಕಾಂತಾ ಕರ್ದಂ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ವೈದ್ಯರ ವರ್ತನೆ ಅತ್ಯಂತ ಕೆಟ್ಟದಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರು ಅಶೋಕ್ ಗೆಹ್ಲೋಟ್ ಸರ್ಕಾರ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದ್ದಾರೆ.

ಅಲ್ಲಿನ ಮಕ್ಕಳ ಪೋಷಕರು ತೀವ್ರತರವಾದ ಸಿಬ್ಬಂದಿ ಕೊರತೆ, ವೈದ್ಯಕೀಯ ಸಲಕರಣೆಗಳ ಕೊರತೆ ಮತ್ತು ವೈದ್ಯರು ಸಮಯೋಚಿತವಾಗಿ ಸ್ಪಂದಿಸದಿರುವುದು, ಸರ್ಕಾರಿ ಆಸ್ಪತ್ರೆಯಲ್ಲಿನ ಕಳಪೆ ಸ್ಥಿತಿಯ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೊಪಿಸಿದ್ದಾರೆ. ಇಲ್ಲಿ ಶುಚಿತ್ವದ ವಾತವಾರಣವಿಲ್ಲ ಹಾಗಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಹಲವರು ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಧೃವ್‌ ರಾಠೀ “ನೂರಕ್ಕೂ ಹೆಚ್ಚು ಮಕ್ಕಳು ಸಾವನಪ್ಪಿರುವ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ. ಮುಂದಿನ ಸಲ ಕಾಂಗ್ರೆಸ್‌ ಸರ್ಕಾರವನ್ನು ಜನರು ಕಿತ್ತೊಗೆಯಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...