Homeಮುಖಪುಟಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ...

ಪ್ರತಿ ವರ್ಷ ಮಕ್ಕಳು ಸಾಯುತ್ತಾರೆ, ಹೊಸತೇನೂ ಇಲ್ಲ: ಕೋಟಾ ಮಕ್ಕಳ ಸಾವಿನ ಕುರಿತು ರಾಜಸ್ಥಾನದ ಸಿಎಂ ಹೇಳಕೆಗೆ ಭಾರೀ ವಿರೋಧ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ 100 ಕ್ಕೂ ಹೆಚ್ಚು ಮಕ್ಕಳ ಸಾವಿನ ಬಗ್ಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. “ಪ್ರತಿ ವರ್ಷ ಸಾವುಗಳು ಸಂಭವಿಸುತ್ತವೆ, ಜೈಪುರದಲ್ಲಿಯೂ ಸಂಭವಿಸುತ್ತವೆ ಇದರಲ್ಲಿ ಹೊಸತೇನೂ ಇಲ್ಲ” ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯೊಂದರಲ್ಲಿಯೇ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಕಳೆದ ತಿಂಗಳು ಸಾವನ್ನಪ್ಪಿದ್ದರು. ಈ ಕುರಿತು ರಾಜಸ್ಥಾನದ ಕಾಂಗ್ರೆಸ್ ಇನ್‌ಚಾರ್ಜ್ ಆಗಿರುವ ಅವಿನಾಶ್ ಪಾಂಡೆಯವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವರದಿ ನೀಡಿದ್ದರು. ಸೋನಿಯಾ ಗಾಂಧಿ ಕೂಡ ಈ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಆದರೆ ಇದರ ಕುರಿತು ಕ್ರಮ ತೆಗೆದುಕೊಳ್ಳಬೇಕಾದ ಮುಖ್ಯಮಂತ್ರಿಗಳು ಉಡಾಫೆಯ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಆರೋಗ್ಯ ಸಚಿವ ಡಾ.ರಘು ಶರ್ಮಾ ಸೇರಿದಂತೆ ಹಲವರು ಕೋಟಾದಲ್ಲಿ ಮಕ್ಕಳ ಸಾವಿಗೆ ರಾಜ್ಯದ ಆಸ್ಪತ್ರೆಗಳಲ್ಲಿನ ಯಂತ್ರೋಪಕರಣಗಳ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯವನ್ನು ನಿರಾಕರಿಸಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಡಾ.ರಘು ಶರ್ಮಾ ಅವರು ಟ್ವೀಟ್‌ ಮಾಡಿ “ರಾಜ್ಯದಲ್ಲಿ ಮಕ್ಕಳಿಗಾಗಿ ಮೊದಲ ಐಸಿಯು ಅನ್ನು 2003 ರಲ್ಲಿ ನಮ್ಮ ಸರ್ಕಾರವು ಸ್ಥಾಪಿಸಿತು. ಕೋಟಾದಲ್ಲಿಯೂ ಸಹ, ನಾವು 2011 ರಲ್ಲಿ ಐಸಿಯು ಸ್ಥಾಪಿಸಿದ್ದೇವೆ. ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿದೆ. ಜೆ.ಕೆ.ಲೋನ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಶಿಶುಗಳ ಸಾವಿನ ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ತಿಳಿಸಿದ್ದಾರೆ.

2014 ರಿಂದ 2019ರ ಅವಧಿಯಲ್ಲಿನ ಸಾವುಗಳನ್ನು ಪರಿಶೀಲಿಸಿದರೆ 2019 ರಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ತೀರಾ ಕಡಿಮೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. (ಗೆಹ್ಲೋಟ್ ಸರ್ಕಾರವನ್ನು ಡಿಸೆಂಬರ್ 2018 ರಲ್ಲಿ ರಚಿಸಲಾಯಿತು).

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, “ಕೆಲವರು ಕೋಟಾದ ಪರಿಸ್ಥಿತಿಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಅಥವಾ ತಿಳಿಯದೆ ಕಿಡಿಗೇಡಿತನದಲ್ಲಿ ತೊಡಗಿದ್ದಾರೆ. ನಾನು ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಮತ್ತು 5 ರಿಂದ 6 ವರ್ಷಗಳಲ್ಲಿನ ಸಾವಿನ ಸಂಖ್ಯೆ ನೋಡಿದರೆ 2019 ರಲ್ಲಿ ಕಡಿಮೆ ಸಂಖ್ಯೆಯನ್ನು ಕಂಡಿದ್ದೇನೆ ಎಂದಿದ್ದಾರೆ”

ಮತ್ತೊಂದೆಡೆ, ಕೋಟಾದಲ್ಲಿ ಮಕ್ಕಳ ಸಾವಿನ ಬಗ್ಗೆ ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಮಂಗಳವಾರ, ಬಿಜೆಪಿ ತನ್ನ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದ ಮೇರೆಗೆ ತನ್ನ ಸಂಸದರ ಮೂರು ಸದಸ್ಯರ ಸಮಿತಿಯನ್ನು ಕೋಟಾದ ಜೆ.ಕೆ.ಲೋನ್ ಆಸ್ಪತ್ರೆಗೆ ಕಳುಹಿಸಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿತ್ತು. ರಾಜ್ಯಸಭಾ ಸಂಸದ ಕಾಂತಾ ಕರ್ದಂ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ವೈದ್ಯರ ವರ್ತನೆ ಅತ್ಯಂತ ಕೆಟ್ಟದಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರು ಅಶೋಕ್ ಗೆಹ್ಲೋಟ್ ಸರ್ಕಾರ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದ್ದಾರೆ.

ಅಲ್ಲಿನ ಮಕ್ಕಳ ಪೋಷಕರು ತೀವ್ರತರವಾದ ಸಿಬ್ಬಂದಿ ಕೊರತೆ, ವೈದ್ಯಕೀಯ ಸಲಕರಣೆಗಳ ಕೊರತೆ ಮತ್ತು ವೈದ್ಯರು ಸಮಯೋಚಿತವಾಗಿ ಸ್ಪಂದಿಸದಿರುವುದು, ಸರ್ಕಾರಿ ಆಸ್ಪತ್ರೆಯಲ್ಲಿನ ಕಳಪೆ ಸ್ಥಿತಿಯ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೊಪಿಸಿದ್ದಾರೆ. ಇಲ್ಲಿ ಶುಚಿತ್ವದ ವಾತವಾರಣವಿಲ್ಲ ಹಾಗಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಹಲವರು ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಧೃವ್‌ ರಾಠೀ “ನೂರಕ್ಕೂ ಹೆಚ್ಚು ಮಕ್ಕಳು ಸಾವನಪ್ಪಿರುವ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ. ಮುಂದಿನ ಸಲ ಕಾಂಗ್ರೆಸ್‌ ಸರ್ಕಾರವನ್ನು ಜನರು ಕಿತ್ತೊಗೆಯಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...