Homeಮುಖಪುಟಗಾಜಾದಲ್ಲಿ ಮುಂದುವರಿದ ಇಸ್ರೇಲ್ ಮಾರಣಹೋಮ; ವಸತಿ ಕಟ್ಟಡದ ಮೇಲೆ ದಾಳಿಗೆ 100 ಕ್ಕೂ ಹೆಚ್ಚು ಮಂದಿ...

ಗಾಜಾದಲ್ಲಿ ಮುಂದುವರಿದ ಇಸ್ರೇಲ್ ಮಾರಣಹೋಮ; ವಸತಿ ಕಟ್ಟಡದ ಮೇಲೆ ದಾಳಿಗೆ 100 ಕ್ಕೂ ಹೆಚ್ಚು ಮಂದಿ ಬಲಿ, ಸತ್ತವರಲ್ಲಿ ಮಕ್ಕಳೆ ಹೆಚ್ಚು

- Advertisement -
- Advertisement -

ಮಂಗಳವಾರ ರಾತ್ರಿಯ ನಡೆದ ಇಸ್ರೇಲಿ ವೈಮಾನಿಕ ದಾಳಿಯಿಂದ ಉತ್ತರ ಜಿಲ್ಲೆಯ ಬೀಟ್ ಲಾಹಿಯಾದಲ್ಲಿನ ವಸತಿ ಕಟ್ಟಡದಲ್ಲಿ ಕನಿಷ್ಠ 100 ಜನರ ಬಲಿಯಾಗಿದ್ದು, ಸತ್ತವರಲ್ಲಿ ಮಕ್ಕಳೆ ಹೆಚ್ಚು ಎಂದು ಗಾಜಾದ ಸಿವಿಲ್ ಡಿಫೆನ್ಸ್ ಏಜೆನ್ಸಿ ಹೇಳಿದೆ.

ಇಸ್ರೇಲ್‌ನ ಪ್ರಮುಖ ಮಿತ್ರ ಮತ್ತು ಬೆಂಬಲಿಗ ಯುನೈಟೆಡ್ ಸ್ಟೇಟ್ಸ್ ವಾಯುದಾಳಿ ಕುರಿತು ಪ್ರತಿಕ್ರಿಯಿಸಿದ್ದು, “ಇದು ಭಯಾನಕ, ಇದು ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೊಂದಿತು” ಎಂದು ಹೇಳಿದೆ.

“ಇದು ಭಯಾನಕ ಫಲಿತಾಂಶದೊಂದಿಗೆ ಭಯಾನಕ ಘಟನೆಯಾಗಿದೆ” ಎಂದು ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸುದ್ದಿಗಾರರಿಗೆ ತಿಳಿಸಿದರು.

ಪ್ಯಾಲೇಸ್ತೀನಿಯನ್ ರಕ್ಷಕರು ಮತ್ತು ಹತಾಶ ಕುಟುಂಬ ಸದಸ್ಯರು ಉತ್ತರ ಗಾಜಾದ ಬೀಟ್ ಲಾಹಿಯಾದಲ್ಲಿ ಐದು ಅಂತಸ್ತಿನ ಕಟ್ಟಡದಲ್ಲಿ ಹುಡುಕಾಟ ನಡೆಸಿದ್ದಾರೆ. ದಿಗ್ಭ್ರಮೆಗೊಂಡ ಸಂಬಂಧಿಕರು ಪ್ರೀತಿಪಾತ್ರರನ್ನು ಗುರುತಿಸಲು ಪ್ರಯತ್ನಿಸುತ್ತಿರುವಾಗ, ಮೇಲಿನ ಅಂತಸ್ತಿನ ಕಿಟಕಿಯಲ್ಲಿ ಕೆಲ ದೇಹ ನೇತಾಡುತ್ತಿದ್ದರೆ, ಸುಟ್ಟ ದೇಹಗಳು ಕಂಬಳಿಗಳಲ್ಲಿ ಸುತ್ತಿ ಬೀದಿಯಲ್ಲಿ ಸಾಲಾಗಿ ಇಡಲಾಗಿತ್ತು.

“ಬೀಟ್ ಲಾಹಿಯಾದಲ್ಲಿನ ಅಬು ನಸ್ರ್ ಕುಟುಂಬದ ಮನೆಯ ಹತ್ಯಾಕಾಂಡದಲ್ಲಿ ಹುತಾತ್ಮರ ಸಂಖ್ಯೆ 93 ಕ್ಕೆ ಏರಿದೆ. ಸುಮಾರು 40 ಜನರು ಅವಶೇಷಗಳಡಿಯಲ್ಲಿ ಇನ್ನೂ ಕಾಣೆಯಾಗಿದ್ದಾರೆ” ಎಂದು ಏಜೆನ್ಸಿ ವಕ್ತಾರ ಮಹ್ಮದ್ ಬಾಸ್ಸಲ್ ತಿಳಿಸಿದ್ದಾರೆ.

“ಸ್ಫೋಟವು ರಾತ್ರಿಯಲ್ಲಿ ಸಂಭವಿಸಿದೆ ಮತ್ತು ನಾನು ಮೊದಲು ಶೆಲ್ ದಾಳಿ ಎಂದು ಭಾವಿಸಿದೆ. ಆದರೆ, ನಾನು ಸೂರ್ಯೋದಯದ ನಂತರ ಹೊರಗೆ ಹೋದಾಗ ಜನರ ದೇಹಗಳು, ಕೈಕಾಲುಗಳು ಮತ್ತು ಗಾಯಾಳುಗಳನ್ನು ಅವಶೇಷಗಳಡಿಯಿಂದ ಎಳೆಯುವುದನ್ನು ನೋಡಿದೆ” ಎಂದು ಬೀಟ್ ಲಾಹಿಯಾದಲ್ಲಿ ಹತ್ತಿರದ ಶಾಲೆಯಲ್ಲಿ ಆಶ್ರಯ ಪಡೆದಿರುವ 30 ವರ್ಷದ ರಾಬಿ ಅಲ್-ಶಾಂಡಗ್ಲಿ ಹೇಳಿದರು.

“ಬಹುಪಾಲು ಬಲಿಪಶುಗಳು ಮಹಿಳೆಯರು ಮತ್ತು ಮಕ್ಕಳು, ಜನರು ಗಾಯಗೊಂಡವರನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾವುದೇ ಆಸ್ಪತ್ರೆಗಳು ಅಥವಾ ಸರಿಯಾದ ವೈದ್ಯಕೀಯ ಆರೈಕೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ, ಪ್ಯಾಲೇಸ್ತೀನಿಯನ್ನರು ಕಟ್ಟಡದ ಅವಶೇಷಗಳ ಮೂಲಕ ಹುಡುಕಿದರು, ಸತ್ತವರನ್ನು ಹೊರತೆಗೆದರು. ಇತರರು ಸಂಬಂಧಿಕರ ತಮ್ಮವರ ದೇಹಗಳ ಕಣ್ಣೀರಿಟ್ಟ ದೃಶ್ಯಗಳು ಮನಕಲಕುತ್ತಿವೆ.

ಇಸ್ರೇಲ್ ಗಡಿಯ ಸಮೀಪವಿರುವ ಉತ್ತರ ಪಟ್ಟಣವಾದ ಬೀಟ್ ಲಾಹಿಯಾದಲ್ಲಿ ನಡೆದ ದಾಳಿಯಲ್ಲಿ ಇನ್ನೂ 20 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ತುರ್ತು ಸೇವೆ ತಿಳಿಸಿದೆ.

ಗಾಜಾ ಪಟ್ಟಿಯ ಮೇಲೆ ಇಸ್ರೇಲಿ ನಡೆಸಿದ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ತಮ್ಮ ಸಂಬಂಧಿಕರಿಗೆ ಪ್ಯಾಲೆಸ್ತೀನಿಯಾದವರು ಮಂಗಳವಾರ ದೇರ್ ಅಲ್-ಬಾಲಾಹ್‌ನಲ್ಲಿರುವ ಆಸ್ಪತ್ರೆಯ ಶವಾಗಾರದಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.

ದಾಳಿಯಲ್ಲಿ ಸಾವನ್ನಪ್ಪಿದ 15 ಜನರ ಶವಗಳನ್ನು ಕಮಲ್ ಅಡ್ವಾನ್ ಆಸ್ಪತ್ರೆಗೆ ತರಲಾಗಿದೆ ಎಂದು ಅದರ ನಿರ್ದೇಶಕ ಹುಸ್ಸಾಮ್ ಅಬು ಸಫಿಯಾ ಎಎಫ್‌ಪಿಗೆ ತಿಳಿಸಿದ್ದಾರೆ.

“ನಾವು ಇನ್ನೂ ಹಲವಾರು ಹುತಾತ್ಮರು ಮತ್ತು ಗಾಯಾಳುಗಳನ್ನು ನಿರೀಕ್ಷೆಯಲ್ಲಿದ್ದೇವೆ” ಎಂದು ಸಫಿಯಾ ಹೇಳಿದರು. ಸಿಬ್ಬಂದಿ ಮತ್ತು ಔಷಧಿಗಳ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ ಎಂದು ಹೇಳಿದರು.

“ಜಬಾಲಿಯಾದಲ್ಲಿ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಕಮಲ್ ಅಡ್ವಾನ್ ಆಸ್ಪತ್ರೆಯಲ್ಲಿ ನಮ್ಮ ವೈದ್ಯಕೀಯ ತಂಡ ಮತ್ತು ಕಾರ್ಮಿಕರನ್ನು ಆಕ್ರಮಣ ಮಾಡಿದಾಗ ಸೇನೆಯು ಬಂಧಿಸಿದ ನಂತರ ಪ್ರಥಮ ಚಿಕಿತ್ಸಾ ಸಾಮಗ್ರಿಗಳನ್ನು ಹೊರತುಪಡಿಸಿ ಏನೂ ಉಳಿದಿಲ್ಲ” ಎಂದು ಸಫಿಯಾ ಹೇಳಿದರು.

ದಾಳಿಯ ಸಮಯದಲ್ಲಿ ಆಸ್ಪತ್ರೆಯಿಂದ ಹೊರಬರಲು ನಿರಾಕರಿಸಿದ್ದರಿಂದ ಹುಸ್ಸಾಮ್ ಅಬು ಸಫಿಯಾ ಅವರ ಎಂಟು ವರ್ಷದ ಮಗನನ್ನು ಅಕ್ಟೋಬರ್ 18 ರಂದು ಇಸ್ರೇಲಿ ಸೇನೆಯು ಕೊಂದಿತು.

ಸೈನ್ಯವು ಆಸ್ಪತ್ರೆಗೆ ನುಗ್ಗಿತು ಮತ್ತು ಸೌಲಭ್ಯದಲ್ಲಿ ಆಶ್ರಯ ಪಡೆದ ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಇತರರು ಸೇರಿದಂತೆ ನೂರಾರು ಪ್ಯಾಲೆಸ್ತೀನಿಯನ್ನರನ್ನು ಬಂಧಿಸಿತು.

ಇತ್ತೀಚಿನ ತಿಂಗಳುಗಳಲ್ಲಿ ಇಸ್ರೇಲಿ ಮಿಲಿಟರಿ ಪದೇಪದೆ ನಿರಾಶ್ರಿತ ಜನರಿಗೆ ಆಶ್ರಯವನ್ನು ಹೊಡೆದಿದೆ. ಇದು ಪ್ಯಾಲೇಸ್ಟಿನಿಯನ್ ಉಗ್ರಗಾಮಿಗಳನ್ನು ಗುರಿಯಾಗಿಸಿಕೊಂಡು ನಿಖರವಾದ ದಾಳಿ ಎಂದು ಹೇಳಿಕೊಂಡಿದೆ.

ಪ್ಯಾಲೇಸ್ತೀನಿಯನ್ ಅಧಿಕಾರಿಗಳ ಪ್ರಕಾರ, ಉತ್ತರ ಗಾಜಾದಲ್ಲಿ ಕೇವಲ 19 ದಿನಗಳಲ್ಲಿ 770 ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಕೊಂದಿದೆ. ಜಬಾಲಿಯಾ ಉತ್ತರ ಗಾಜಾದ ನಗರ ನಿರಾಶ್ರಿತರ ಶಿಬಿರವಾಗಿದೆ.

ಗಾಜಾದ ಮೇಲಿನ ಇತ್ತೀಚಿನ ಯುದ್ಧದ ಆರಂಭದಿಂದ ಇಸ್ರೇಲ್ 43,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಕೊಂದಿದೆ ಎಂದು ಗಾಜಾದ ಅಧಿಕಾರಿಗಳು ಸೋಮವಾರ ವರದಿ ಮಾಡಿದ್ದಾರೆ. ಇದರಲ್ಲಿ ಕನಿಷ್ಠ 17,000  ಮಕ್ಕಳು ಮತ್ತು 11,400 ಕ್ಕೂ ಹೆಚ್ಚು ಮಹಿಳೆಯರು ಸೇರಿದ್ದಾರೆ. ಇಸ್ರೇಲ್ ಗಾಜಾದಲ್ಲಿ 174 ಕ್ಕೂ ಹೆಚ್ಚು ಪತ್ರಕರ್ತರು ಮತ್ತು 1000 ಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರನ್ನು ಕೊಂದಿದೆ.

ಇದನ್ನೂ ಓದಿ; ಗಾಜಾದ ವಸತಿ ಕಟ್ಟಡದ ಮೇಲೆ ಇಸ್ರೇಲ್‌ ದಾಳಿಗೆ 55 ಜನ ಬಲಿ; ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....