Homeಕರ್ನಾಟಕಬೆಂಗಳೂರಿನಲ್ಲೂ ಶತಕ ಬಾರಿಸಿದ ಡೀಸೆಲ್ ಬೆಲೆ: ಜನಸಾಮಾನ್ಯರು ಕಂಗಾಲು

ಬೆಂಗಳೂರಿನಲ್ಲೂ ಶತಕ ಬಾರಿಸಿದ ಡೀಸೆಲ್ ಬೆಲೆ: ಜನಸಾಮಾನ್ಯರು ಕಂಗಾಲು

- Advertisement -
- Advertisement -

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿನ ನಿರಂತರ ಏರಿಕೆ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಮೇಲೆ 37 ಪೈಸೆ ಹೆಚ್ಚಳದೊಂದಿಗೆ ಡೀಸೆಲ್ ಬೆಲೆ 100.37 ಪೈಸೆಗೆ ತಲುಪುವ ಮೂಲಕ ಶತಕ ಬಾರಿಸಿದೆ. ಇದೇ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 109.53 ರೂಗೆ ತಲುಪಿದೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆಗಳು ದಿನನಿತ್ಯ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಮತ್ತು ರುಪಾಯಿ ಡಾಲರ್ ವಿನಿಮಯ ದರದ ಆಧಾರದಲ್ಲಿ ಬೆಲೆ ನಿಗಧಿಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ತರಲಾಗುತ್ತದೆ.


ಇದನ್ನೂ ಓದಿ: ಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?


ಇಂಧನ ದರ ಏರಿಕೆಯಿಂದ ಎಲ್ಲಾ ವರ್ಗದ ಜನರ ಮೇಲೆಯೂ ಹೊರೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,314ರೂ ತಗುಲುತ್ತಿದೆ (109.53ರೂ-12ಲೀ). ಅಂದರೆ 432ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 864ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ಇಂಧನಗಳ ಮೇಲೆ ಅತಿ ಹೆಚ್ಚು ತೆರಿಗೆ ಭಾರ

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 37 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 35.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 28 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 109ರೂ ದಾಟುತ್ತದೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...