Homeಕರ್ನಾಟಕ2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ರದ್ದು: ಸಚಿವ ಉಮೇಶ್ ಕತ್ತಿ

2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ರದ್ದು: ಸಚಿವ ಉಮೇಶ್ ಕತ್ತಿ

- Advertisement -
- Advertisement -

ಟಿವಿ, ಫ್ರಿಡ್ಜ್‌ ಹೊಂದಿರುವವರಿಗೆ ಪಡಿತರ ಚೀಟಿಯ ಸೌಲಭ್ಯ ಇರುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಉಮೇಶ್ ಕತ್ತಿ, ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹಗೊಳಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.

ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪಿ.ಆರ್‌. ರಮೇಶ್‌ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು “ರಾಜ್ಯದಲ್ಲಿ 2,28,188 ಅನರ್ಹ ಬಿಪಿಎಲ್‌ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ. ಅರ್ಹತೆ ಇಲ್ಲದೆ ಬಿಪಿಎಲ್‌ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಗಳಿಂದ ₹ 3.07 ಕೋಟಿ ದಂಡ ವಸೂಲಿ ಮಾಡಲಾಗಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳು ಮತ್ತು 1.16 ಕೋಟಿ ಬಿಪಿಎಲ್‌ ಪಡಿತರ ಚೀಟಿಗಳಿವೆ. ಅನರ್ಹ ಪಡಿತರ ಚೀಟಿಗಳನ್ನು ಪತ್ತೆಹಚ್ಚಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಅದರ ಪ್ರಕಾರ ಪತ್ತೆಕಾರ್ಯ ನಡೆಯುತ್ತಿದೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಉಮೇಶ್ ಕತ್ತಿ, “2018–19ರಿಂದ 2020–21ರ ಅವಧಿಯಲ್ಲಿ ಪಡಿತರ ಸಾಮಗ್ರಿಯ ಅಕ್ರಮ ಸಾಗಣೆ ಮತ್ತು ದಾಸ್ತಾನು ಮಾಡಿ ಆರೋಪದಲ್ಲಿ 786 ಪ್ರಕರಣ ದಾಖಲಿಸಲಾಗಿದೆ. 63,637 ಕ್ವಿಂಟಲ್‌ ಅಕ್ಕಿ, 783 ಕ್ವಿಂಟಲ್‌ ಗೋಧಿ ಮತ್ತು 630 ಕ್ವಿಂಟಲ್‌ ರಾಗಿ ವಶಪಡಿಸಿಕೊಳ್ಳಲಾಗಿದೆ” ಎಂದು ವಿವರಣೆ ನೀಡಿದರು.

ಈ ಹಿಂದೆ ಟಿವಿ, ಫ್ರಿಡ್ಜ್, ಬೈಕ್ ಹೊಂದಿರುವವರಿಗೆ ಪಡಿತರ ಸೌಲಭ್ಯ ಇರುವುದಿಲ್ಲ ಎಂದು ಸಚಿವರು ಹೇಳಿದ್ದರು. ಇದಕ್ಕೆ ರಾಜ್ಯದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಈ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.


ಇದನ್ನೂ ಓದಿ: ಇಂದು ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸಲಿರುವ ಮಮತಾ ಬ್ಯಾನರ್ಜಿ; ಅವರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...