Homeಕರ್ನಾಟಕಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

- Advertisement -
- Advertisement -

ಬೆಂಗಳೂರಿನಾದ್ಯಂತ 1.8 ಲಕ್ಷಕ್ಕೂ ಹೆಚ್ಚು ಕಟ್ಟಡಗಳು ಅನಧೀಕೃತ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಿದೆ ಎಂದು ನ್ಯೂಸ್ ಮಿನಿಟ್‌ ಶನಿವಾರ ವರದಿ ಮಾಡಿದೆ. ನಗರದಲ್ಲಿನ ಅಕ್ರಮ ಮತ್ತು ಅನಧಿಕೃತ ಕಟ್ಟಡಗಳ ಕುರಿತು ಬಿಬಿಎಂಪಿ ಸಮೀಕ್ಷೆ ನಡೆಸುತ್ತಿದೆ.

‘‘ಬಿಬಿಎಂಪಿಯಿಂದ ಅನುಮತಿ ಪಡೆಯದೆ ಅಥವಾ ಬಿಬಿಎಂಪಿ ಅನುಮತಿ ನೀಡದೆ ಕಟ್ಟುವ ಕಟ್ಟಡಗಳು ಅನಧಿಕೃತವಾಗಿದ್ದು, ಇದನ್ನು ಬಿ-ಖಾತಾ ಆಸ್ತಿಗಳು ಎಂದು ಗುರುತಿಸಲಾಗುತ್ತದೆ” ಎಂದು ಬಿಬಿಎಂಪಿ ಯೋಜನೆಗಳ ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1.8 ಲಕ್ಷ ಅನಧಿಕೃತ ಕಟ್ಟಡಗಳು ಮಾತ್ರವಲ್ಲದೆ, ಮಂಜೂರಾದ ಯೋಜನೆಗಳನ್ನು ಬಿಟ್ಟು ಬೇರೆಯೆ ಯೋಜನೆ ರೂಪಿಸಿ ಕಟ್ಟಲಾಗಿರುವ ಸುಮಾರು 36,759 ಕಟ್ಟಡಗಳನ್ನು ಸಹ ಬಿಬಿಎಂಪಿ ಪತ್ತೆ ಮಾಡಿದೆ. ಯಾವುದೇ ಕಟ್ಟಡವನ್ನು ಕಟ್ಟುವಾಗ ಅದರ ಸುತ್ತ ಇರಬೇಕಾದ ಕನಿಷ್ಠ ಸ್ಥಳಾವಕಾಶ ನಿಯಮದ ಉಲ್ಲಂಘನೆ, ಹೆಚ್ಚುವರಿ ಮಹಡಿಗಳು ಹೊಂದಿರುವ ಕಟ್ಟಡಗಳು ಸೇರಿದಂತೆ ಹಲವು ನಿಯಮ ಪಾಲಿಸದೆ ಕಟ್ಟಿದ ಕಟ್ಟಡಗಳು ಅನಧೀಕೃತ ಕಟ್ಟಡಗಳಾಗಿವೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ಸಮೀಕ್ಷೆಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಬಿಬಿಎಂಪಿ ಹಲವು ಗಡುವುಗಳನ್ನು ಮೀರಿದೆ. ಆದರೂ ನಡೆಯುತ್ತಿರುವ ಸಮೀಕ್ಷೆ ಮುಗಿಯಲು ಕನಿಷ್ಠ ಎರಡು ತಿಂಗಳು ಬೇಕಾಗಬಹುದು ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

“ವಿಳಂಬಕ್ಕೆ ಮಳೆಗಾಲ ಸೇರಿದಂತೆ ಹಲವು ಕಾರಣಗಳಿವೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು ಬೇಕು. ನಮ್ಮ ಬಳಿ ಈಗ ಕೇವಲ ಒಂದು ಏಕೀಕೃತ ಅಂಕಿ ಅಂಶ ಇದೆ. ಆದ್ದರಿಂದ ಯಾವ ಪ್ರದೇಶಗಳಲ್ಲಿ ಅತಿ ಹೆಚ್ಚು ಅನಧೀಕೃತ ಕಟ್ಟಡಗಳಿವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದ್ದಾರೆ.

2022 ಮಾರ್ಚ್‌ ತಿಂಗಳಲ್ಲಿ ಅನಧಿಕೃತ ಆಸ್ತಿ ಮಾಲೀಕರಿಗೆ 10,000 ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಈ ನೋಟಿಸ್‌ಗೆ ಕಟ್ಟಡ ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ನಾವು ಹೊಸ ನೋಟಿಸ್ ಕಳುಹಿಸುತ್ತೇವೆ. ಮಂಜೂರಾದ ಯೋಜನೆಗೂ, ಕಟ್ಟಡಗಳಿಗೂ ಶೇಕಡಾವಾರು ವ್ಯತ್ಯಾಸಗಳಿರುವುದರಿಂದ ನೋಟೀಸ್‌ಗಳನ್ನು ನೀಡುವುದರ ಬಗ್ಗೆ ವಿವಿಧ ಹಂತಗಳಿವೆ. ಕೆಲವು ಕಟ್ಟಡಗಳು 10%, 12%, 15%, ಮತ್ತು ಕೆಲವು 25% ಅಸಂಗತತೆಯನ್ನು ಹೊಂದಿವೆ. ನೋಟಿಸ್ ಕಳುಹಿಸಲು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ” ಎಂದು ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಅಕ್ರಮ ಕಟ್ಟಡಗಳನ್ನು ಕೆಡವಲು ಮತ್ತು ಅನುಪಾಲನಾ ವರದಿಯನ್ನು ಸಲ್ಲಿಸಲು ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸರ್ವೆ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ನಂತರ ಏಕಕಾಲದಲ್ಲಿ ಕಟ್ಟಡ ಮಾಲೀಕರಿಗೆ ನೋಟಿಸ್ ಕಳುಹಿಸುತ್ತೇವೆ. ನಿರ್ದಿಷ್ಟ ಸಂದರ್ಭಗಳಲ್ಲಿ ನಾನು ಖಂಡಿತವಾಗಿಯೂ ಕೆಡವಲು ನಿರ್ದೇಶನಗಳನ್ನು ನೀಡುತ್ತೇನೆ. ನಾವು ಸಂಪೂರ್ಣ ಅನಧಿಕೃತ ಕಟ್ಟಡಗಳನ್ನು ಗುರುತಿಸಿದ್ದೇವೆ, ಅವುಗಳನ್ನು ಖಂಡಿತವಾಗಿಯೂ ಕೆಡವುತ್ತೇವೆ. ಇದನ್ನು ಸಂಬಂಧಪಟ್ಟ ಅಧಿಕಾರಿ ನಿರ್ಧರಿಸುತ್ತಾರೆ. ಅನುಸರಣೆ ವರದಿಯನ್ನು ನಾನು ಹೈಕೋರ್ಟ್‌ಗೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ತಪ್ಪು ಯೋಜನೆಗಳಿಗೆ ಮಂಜೂರಾತಿ ನೀಡುವುದಿಲ್ಲ. ಬಿಲ್ಡರ್‌ಗಳೇ ನಿಯಮಗಳನ್ನು ಉಲ್ಲಂಘಿಸುತ್ತಾರೆ ಎಂದು ಹೇಳಿದ ಅವರು, “ಯಾವ ಯೋಜನೆಗೆ ಅನುಮೋದನೆ ನೀಡಲಾಗುತ್ತದೆಯೋ ಅವುಗಳಷ್ಟೆ ಸರಿಯಾದದು ಮತ್ತು ಕಾನೂನುಬದ್ಧವಾಗಿರುತ್ತದೆ. ಕಟ್ಟಡ ನಿರ್ಮಾಣದಲ್ಲಿ ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಬಿಲ್ಡರ್ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ್ದಾರೆಯೇ ಎಂದು ಪರಿಶೀಲಿಸುವ ಜವಾಬ್ದಾರಿ ಆಸ್ತಿಯನ್ನು ಖರೀದಿಸುವವರ ಮೇಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...