Homeಕರ್ನಾಟಕಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

- Advertisement -
- Advertisement -

ಬೆಂಗಳೂರಿನಾದ್ಯಂತ 1.8 ಲಕ್ಷಕ್ಕೂ ಹೆಚ್ಚು ಕಟ್ಟಡಗಳು ಅನಧೀಕೃತ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಿದೆ ಎಂದು ನ್ಯೂಸ್ ಮಿನಿಟ್‌ ಶನಿವಾರ ವರದಿ ಮಾಡಿದೆ. ನಗರದಲ್ಲಿನ ಅಕ್ರಮ ಮತ್ತು ಅನಧಿಕೃತ ಕಟ್ಟಡಗಳ ಕುರಿತು ಬಿಬಿಎಂಪಿ ಸಮೀಕ್ಷೆ ನಡೆಸುತ್ತಿದೆ.

‘‘ಬಿಬಿಎಂಪಿಯಿಂದ ಅನುಮತಿ ಪಡೆಯದೆ ಅಥವಾ ಬಿಬಿಎಂಪಿ ಅನುಮತಿ ನೀಡದೆ ಕಟ್ಟುವ ಕಟ್ಟಡಗಳು ಅನಧಿಕೃತವಾಗಿದ್ದು, ಇದನ್ನು ಬಿ-ಖಾತಾ ಆಸ್ತಿಗಳು ಎಂದು ಗುರುತಿಸಲಾಗುತ್ತದೆ” ಎಂದು ಬಿಬಿಎಂಪಿ ಯೋಜನೆಗಳ ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1.8 ಲಕ್ಷ ಅನಧಿಕೃತ ಕಟ್ಟಡಗಳು ಮಾತ್ರವಲ್ಲದೆ, ಮಂಜೂರಾದ ಯೋಜನೆಗಳನ್ನು ಬಿಟ್ಟು ಬೇರೆಯೆ ಯೋಜನೆ ರೂಪಿಸಿ ಕಟ್ಟಲಾಗಿರುವ ಸುಮಾರು 36,759 ಕಟ್ಟಡಗಳನ್ನು ಸಹ ಬಿಬಿಎಂಪಿ ಪತ್ತೆ ಮಾಡಿದೆ. ಯಾವುದೇ ಕಟ್ಟಡವನ್ನು ಕಟ್ಟುವಾಗ ಅದರ ಸುತ್ತ ಇರಬೇಕಾದ ಕನಿಷ್ಠ ಸ್ಥಳಾವಕಾಶ ನಿಯಮದ ಉಲ್ಲಂಘನೆ, ಹೆಚ್ಚುವರಿ ಮಹಡಿಗಳು ಹೊಂದಿರುವ ಕಟ್ಟಡಗಳು ಸೇರಿದಂತೆ ಹಲವು ನಿಯಮ ಪಾಲಿಸದೆ ಕಟ್ಟಿದ ಕಟ್ಟಡಗಳು ಅನಧೀಕೃತ ಕಟ್ಟಡಗಳಾಗಿವೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ಸಮೀಕ್ಷೆಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಬಿಬಿಎಂಪಿ ಹಲವು ಗಡುವುಗಳನ್ನು ಮೀರಿದೆ. ಆದರೂ ನಡೆಯುತ್ತಿರುವ ಸಮೀಕ್ಷೆ ಮುಗಿಯಲು ಕನಿಷ್ಠ ಎರಡು ತಿಂಗಳು ಬೇಕಾಗಬಹುದು ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

“ವಿಳಂಬಕ್ಕೆ ಮಳೆಗಾಲ ಸೇರಿದಂತೆ ಹಲವು ಕಾರಣಗಳಿವೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು ಬೇಕು. ನಮ್ಮ ಬಳಿ ಈಗ ಕೇವಲ ಒಂದು ಏಕೀಕೃತ ಅಂಕಿ ಅಂಶ ಇದೆ. ಆದ್ದರಿಂದ ಯಾವ ಪ್ರದೇಶಗಳಲ್ಲಿ ಅತಿ ಹೆಚ್ಚು ಅನಧೀಕೃತ ಕಟ್ಟಡಗಳಿವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದ್ದಾರೆ.

2022 ಮಾರ್ಚ್‌ ತಿಂಗಳಲ್ಲಿ ಅನಧಿಕೃತ ಆಸ್ತಿ ಮಾಲೀಕರಿಗೆ 10,000 ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಈ ನೋಟಿಸ್‌ಗೆ ಕಟ್ಟಡ ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ನಾವು ಹೊಸ ನೋಟಿಸ್ ಕಳುಹಿಸುತ್ತೇವೆ. ಮಂಜೂರಾದ ಯೋಜನೆಗೂ, ಕಟ್ಟಡಗಳಿಗೂ ಶೇಕಡಾವಾರು ವ್ಯತ್ಯಾಸಗಳಿರುವುದರಿಂದ ನೋಟೀಸ್‌ಗಳನ್ನು ನೀಡುವುದರ ಬಗ್ಗೆ ವಿವಿಧ ಹಂತಗಳಿವೆ. ಕೆಲವು ಕಟ್ಟಡಗಳು 10%, 12%, 15%, ಮತ್ತು ಕೆಲವು 25% ಅಸಂಗತತೆಯನ್ನು ಹೊಂದಿವೆ. ನೋಟಿಸ್ ಕಳುಹಿಸಲು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ” ಎಂದು ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಅಕ್ರಮ ಕಟ್ಟಡಗಳನ್ನು ಕೆಡವಲು ಮತ್ತು ಅನುಪಾಲನಾ ವರದಿಯನ್ನು ಸಲ್ಲಿಸಲು ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸರ್ವೆ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ನಂತರ ಏಕಕಾಲದಲ್ಲಿ ಕಟ್ಟಡ ಮಾಲೀಕರಿಗೆ ನೋಟಿಸ್ ಕಳುಹಿಸುತ್ತೇವೆ. ನಿರ್ದಿಷ್ಟ ಸಂದರ್ಭಗಳಲ್ಲಿ ನಾನು ಖಂಡಿತವಾಗಿಯೂ ಕೆಡವಲು ನಿರ್ದೇಶನಗಳನ್ನು ನೀಡುತ್ತೇನೆ. ನಾವು ಸಂಪೂರ್ಣ ಅನಧಿಕೃತ ಕಟ್ಟಡಗಳನ್ನು ಗುರುತಿಸಿದ್ದೇವೆ, ಅವುಗಳನ್ನು ಖಂಡಿತವಾಗಿಯೂ ಕೆಡವುತ್ತೇವೆ. ಇದನ್ನು ಸಂಬಂಧಪಟ್ಟ ಅಧಿಕಾರಿ ನಿರ್ಧರಿಸುತ್ತಾರೆ. ಅನುಸರಣೆ ವರದಿಯನ್ನು ನಾನು ಹೈಕೋರ್ಟ್‌ಗೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ತಪ್ಪು ಯೋಜನೆಗಳಿಗೆ ಮಂಜೂರಾತಿ ನೀಡುವುದಿಲ್ಲ. ಬಿಲ್ಡರ್‌ಗಳೇ ನಿಯಮಗಳನ್ನು ಉಲ್ಲಂಘಿಸುತ್ತಾರೆ ಎಂದು ಹೇಳಿದ ಅವರು, “ಯಾವ ಯೋಜನೆಗೆ ಅನುಮೋದನೆ ನೀಡಲಾಗುತ್ತದೆಯೋ ಅವುಗಳಷ್ಟೆ ಸರಿಯಾದದು ಮತ್ತು ಕಾನೂನುಬದ್ಧವಾಗಿರುತ್ತದೆ. ಕಟ್ಟಡ ನಿರ್ಮಾಣದಲ್ಲಿ ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಬಿಲ್ಡರ್ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ್ದಾರೆಯೇ ಎಂದು ಪರಿಶೀಲಿಸುವ ಜವಾಬ್ದಾರಿ ಆಸ್ತಿಯನ್ನು ಖರೀದಿಸುವವರ ಮೇಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...