Homeಕರ್ನಾಟಕಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

- Advertisement -
- Advertisement -

ಬೆಂಗಳೂರಿನಾದ್ಯಂತ 1.8 ಲಕ್ಷಕ್ಕೂ ಹೆಚ್ಚು ಕಟ್ಟಡಗಳು ಅನಧೀಕೃತ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಿದೆ ಎಂದು ನ್ಯೂಸ್ ಮಿನಿಟ್‌ ಶನಿವಾರ ವರದಿ ಮಾಡಿದೆ. ನಗರದಲ್ಲಿನ ಅಕ್ರಮ ಮತ್ತು ಅನಧಿಕೃತ ಕಟ್ಟಡಗಳ ಕುರಿತು ಬಿಬಿಎಂಪಿ ಸಮೀಕ್ಷೆ ನಡೆಸುತ್ತಿದೆ.

‘‘ಬಿಬಿಎಂಪಿಯಿಂದ ಅನುಮತಿ ಪಡೆಯದೆ ಅಥವಾ ಬಿಬಿಎಂಪಿ ಅನುಮತಿ ನೀಡದೆ ಕಟ್ಟುವ ಕಟ್ಟಡಗಳು ಅನಧಿಕೃತವಾಗಿದ್ದು, ಇದನ್ನು ಬಿ-ಖಾತಾ ಆಸ್ತಿಗಳು ಎಂದು ಗುರುತಿಸಲಾಗುತ್ತದೆ” ಎಂದು ಬಿಬಿಎಂಪಿ ಯೋಜನೆಗಳ ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1.8 ಲಕ್ಷ ಅನಧಿಕೃತ ಕಟ್ಟಡಗಳು ಮಾತ್ರವಲ್ಲದೆ, ಮಂಜೂರಾದ ಯೋಜನೆಗಳನ್ನು ಬಿಟ್ಟು ಬೇರೆಯೆ ಯೋಜನೆ ರೂಪಿಸಿ ಕಟ್ಟಲಾಗಿರುವ ಸುಮಾರು 36,759 ಕಟ್ಟಡಗಳನ್ನು ಸಹ ಬಿಬಿಎಂಪಿ ಪತ್ತೆ ಮಾಡಿದೆ. ಯಾವುದೇ ಕಟ್ಟಡವನ್ನು ಕಟ್ಟುವಾಗ ಅದರ ಸುತ್ತ ಇರಬೇಕಾದ ಕನಿಷ್ಠ ಸ್ಥಳಾವಕಾಶ ನಿಯಮದ ಉಲ್ಲಂಘನೆ, ಹೆಚ್ಚುವರಿ ಮಹಡಿಗಳು ಹೊಂದಿರುವ ಕಟ್ಟಡಗಳು ಸೇರಿದಂತೆ ಹಲವು ನಿಯಮ ಪಾಲಿಸದೆ ಕಟ್ಟಿದ ಕಟ್ಟಡಗಳು ಅನಧೀಕೃತ ಕಟ್ಟಡಗಳಾಗಿವೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ಸಮೀಕ್ಷೆಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಬಿಬಿಎಂಪಿ ಹಲವು ಗಡುವುಗಳನ್ನು ಮೀರಿದೆ. ಆದರೂ ನಡೆಯುತ್ತಿರುವ ಸಮೀಕ್ಷೆ ಮುಗಿಯಲು ಕನಿಷ್ಠ ಎರಡು ತಿಂಗಳು ಬೇಕಾಗಬಹುದು ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

“ವಿಳಂಬಕ್ಕೆ ಮಳೆಗಾಲ ಸೇರಿದಂತೆ ಹಲವು ಕಾರಣಗಳಿವೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು ಬೇಕು. ನಮ್ಮ ಬಳಿ ಈಗ ಕೇವಲ ಒಂದು ಏಕೀಕೃತ ಅಂಕಿ ಅಂಶ ಇದೆ. ಆದ್ದರಿಂದ ಯಾವ ಪ್ರದೇಶಗಳಲ್ಲಿ ಅತಿ ಹೆಚ್ಚು ಅನಧೀಕೃತ ಕಟ್ಟಡಗಳಿವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದ್ದಾರೆ.

2022 ಮಾರ್ಚ್‌ ತಿಂಗಳಲ್ಲಿ ಅನಧಿಕೃತ ಆಸ್ತಿ ಮಾಲೀಕರಿಗೆ 10,000 ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಈ ನೋಟಿಸ್‌ಗೆ ಕಟ್ಟಡ ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ನಾವು ಹೊಸ ನೋಟಿಸ್ ಕಳುಹಿಸುತ್ತೇವೆ. ಮಂಜೂರಾದ ಯೋಜನೆಗೂ, ಕಟ್ಟಡಗಳಿಗೂ ಶೇಕಡಾವಾರು ವ್ಯತ್ಯಾಸಗಳಿರುವುದರಿಂದ ನೋಟೀಸ್‌ಗಳನ್ನು ನೀಡುವುದರ ಬಗ್ಗೆ ವಿವಿಧ ಹಂತಗಳಿವೆ. ಕೆಲವು ಕಟ್ಟಡಗಳು 10%, 12%, 15%, ಮತ್ತು ಕೆಲವು 25% ಅಸಂಗತತೆಯನ್ನು ಹೊಂದಿವೆ. ನೋಟಿಸ್ ಕಳುಹಿಸಲು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ” ಎಂದು ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಅಕ್ರಮ ಕಟ್ಟಡಗಳನ್ನು ಕೆಡವಲು ಮತ್ತು ಅನುಪಾಲನಾ ವರದಿಯನ್ನು ಸಲ್ಲಿಸಲು ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸರ್ವೆ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ನಂತರ ಏಕಕಾಲದಲ್ಲಿ ಕಟ್ಟಡ ಮಾಲೀಕರಿಗೆ ನೋಟಿಸ್ ಕಳುಹಿಸುತ್ತೇವೆ. ನಿರ್ದಿಷ್ಟ ಸಂದರ್ಭಗಳಲ್ಲಿ ನಾನು ಖಂಡಿತವಾಗಿಯೂ ಕೆಡವಲು ನಿರ್ದೇಶನಗಳನ್ನು ನೀಡುತ್ತೇನೆ. ನಾವು ಸಂಪೂರ್ಣ ಅನಧಿಕೃತ ಕಟ್ಟಡಗಳನ್ನು ಗುರುತಿಸಿದ್ದೇವೆ, ಅವುಗಳನ್ನು ಖಂಡಿತವಾಗಿಯೂ ಕೆಡವುತ್ತೇವೆ. ಇದನ್ನು ಸಂಬಂಧಪಟ್ಟ ಅಧಿಕಾರಿ ನಿರ್ಧರಿಸುತ್ತಾರೆ. ಅನುಸರಣೆ ವರದಿಯನ್ನು ನಾನು ಹೈಕೋರ್ಟ್‌ಗೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ತಪ್ಪು ಯೋಜನೆಗಳಿಗೆ ಮಂಜೂರಾತಿ ನೀಡುವುದಿಲ್ಲ. ಬಿಲ್ಡರ್‌ಗಳೇ ನಿಯಮಗಳನ್ನು ಉಲ್ಲಂಘಿಸುತ್ತಾರೆ ಎಂದು ಹೇಳಿದ ಅವರು, “ಯಾವ ಯೋಜನೆಗೆ ಅನುಮೋದನೆ ನೀಡಲಾಗುತ್ತದೆಯೋ ಅವುಗಳಷ್ಟೆ ಸರಿಯಾದದು ಮತ್ತು ಕಾನೂನುಬದ್ಧವಾಗಿರುತ್ತದೆ. ಕಟ್ಟಡ ನಿರ್ಮಾಣದಲ್ಲಿ ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಬಿಲ್ಡರ್ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ್ದಾರೆಯೇ ಎಂದು ಪರಿಶೀಲಿಸುವ ಜವಾಬ್ದಾರಿ ಆಸ್ತಿಯನ್ನು ಖರೀದಿಸುವವರ ಮೇಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...