Homeಕರ್ನಾಟಕಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

- Advertisement -
- Advertisement -

ಬೆಂಗಳೂರಿನಾದ್ಯಂತ 1.8 ಲಕ್ಷಕ್ಕೂ ಹೆಚ್ಚು ಕಟ್ಟಡಗಳು ಅನಧೀಕೃತ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಿದೆ ಎಂದು ನ್ಯೂಸ್ ಮಿನಿಟ್‌ ಶನಿವಾರ ವರದಿ ಮಾಡಿದೆ. ನಗರದಲ್ಲಿನ ಅಕ್ರಮ ಮತ್ತು ಅನಧಿಕೃತ ಕಟ್ಟಡಗಳ ಕುರಿತು ಬಿಬಿಎಂಪಿ ಸಮೀಕ್ಷೆ ನಡೆಸುತ್ತಿದೆ.

‘‘ಬಿಬಿಎಂಪಿಯಿಂದ ಅನುಮತಿ ಪಡೆಯದೆ ಅಥವಾ ಬಿಬಿಎಂಪಿ ಅನುಮತಿ ನೀಡದೆ ಕಟ್ಟುವ ಕಟ್ಟಡಗಳು ಅನಧಿಕೃತವಾಗಿದ್ದು, ಇದನ್ನು ಬಿ-ಖಾತಾ ಆಸ್ತಿಗಳು ಎಂದು ಗುರುತಿಸಲಾಗುತ್ತದೆ” ಎಂದು ಬಿಬಿಎಂಪಿ ಯೋಜನೆಗಳ ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1.8 ಲಕ್ಷ ಅನಧಿಕೃತ ಕಟ್ಟಡಗಳು ಮಾತ್ರವಲ್ಲದೆ, ಮಂಜೂರಾದ ಯೋಜನೆಗಳನ್ನು ಬಿಟ್ಟು ಬೇರೆಯೆ ಯೋಜನೆ ರೂಪಿಸಿ ಕಟ್ಟಲಾಗಿರುವ ಸುಮಾರು 36,759 ಕಟ್ಟಡಗಳನ್ನು ಸಹ ಬಿಬಿಎಂಪಿ ಪತ್ತೆ ಮಾಡಿದೆ. ಯಾವುದೇ ಕಟ್ಟಡವನ್ನು ಕಟ್ಟುವಾಗ ಅದರ ಸುತ್ತ ಇರಬೇಕಾದ ಕನಿಷ್ಠ ಸ್ಥಳಾವಕಾಶ ನಿಯಮದ ಉಲ್ಲಂಘನೆ, ಹೆಚ್ಚುವರಿ ಮಹಡಿಗಳು ಹೊಂದಿರುವ ಕಟ್ಟಡಗಳು ಸೇರಿದಂತೆ ಹಲವು ನಿಯಮ ಪಾಲಿಸದೆ ಕಟ್ಟಿದ ಕಟ್ಟಡಗಳು ಅನಧೀಕೃತ ಕಟ್ಟಡಗಳಾಗಿವೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ಸಮೀಕ್ಷೆಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಬಿಬಿಎಂಪಿ ಹಲವು ಗಡುವುಗಳನ್ನು ಮೀರಿದೆ. ಆದರೂ ನಡೆಯುತ್ತಿರುವ ಸಮೀಕ್ಷೆ ಮುಗಿಯಲು ಕನಿಷ್ಠ ಎರಡು ತಿಂಗಳು ಬೇಕಾಗಬಹುದು ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

“ವಿಳಂಬಕ್ಕೆ ಮಳೆಗಾಲ ಸೇರಿದಂತೆ ಹಲವು ಕಾರಣಗಳಿವೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು ಬೇಕು. ನಮ್ಮ ಬಳಿ ಈಗ ಕೇವಲ ಒಂದು ಏಕೀಕೃತ ಅಂಕಿ ಅಂಶ ಇದೆ. ಆದ್ದರಿಂದ ಯಾವ ಪ್ರದೇಶಗಳಲ್ಲಿ ಅತಿ ಹೆಚ್ಚು ಅನಧೀಕೃತ ಕಟ್ಟಡಗಳಿವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದ್ದಾರೆ.

2022 ಮಾರ್ಚ್‌ ತಿಂಗಳಲ್ಲಿ ಅನಧಿಕೃತ ಆಸ್ತಿ ಮಾಲೀಕರಿಗೆ 10,000 ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಈ ನೋಟಿಸ್‌ಗೆ ಕಟ್ಟಡ ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ನಾವು ಹೊಸ ನೋಟಿಸ್ ಕಳುಹಿಸುತ್ತೇವೆ. ಮಂಜೂರಾದ ಯೋಜನೆಗೂ, ಕಟ್ಟಡಗಳಿಗೂ ಶೇಕಡಾವಾರು ವ್ಯತ್ಯಾಸಗಳಿರುವುದರಿಂದ ನೋಟೀಸ್‌ಗಳನ್ನು ನೀಡುವುದರ ಬಗ್ಗೆ ವಿವಿಧ ಹಂತಗಳಿವೆ. ಕೆಲವು ಕಟ್ಟಡಗಳು 10%, 12%, 15%, ಮತ್ತು ಕೆಲವು 25% ಅಸಂಗತತೆಯನ್ನು ಹೊಂದಿವೆ. ನೋಟಿಸ್ ಕಳುಹಿಸಲು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ” ಎಂದು ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಅಕ್ರಮ ಕಟ್ಟಡಗಳನ್ನು ಕೆಡವಲು ಮತ್ತು ಅನುಪಾಲನಾ ವರದಿಯನ್ನು ಸಲ್ಲಿಸಲು ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸರ್ವೆ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ನಂತರ ಏಕಕಾಲದಲ್ಲಿ ಕಟ್ಟಡ ಮಾಲೀಕರಿಗೆ ನೋಟಿಸ್ ಕಳುಹಿಸುತ್ತೇವೆ. ನಿರ್ದಿಷ್ಟ ಸಂದರ್ಭಗಳಲ್ಲಿ ನಾನು ಖಂಡಿತವಾಗಿಯೂ ಕೆಡವಲು ನಿರ್ದೇಶನಗಳನ್ನು ನೀಡುತ್ತೇನೆ. ನಾವು ಸಂಪೂರ್ಣ ಅನಧಿಕೃತ ಕಟ್ಟಡಗಳನ್ನು ಗುರುತಿಸಿದ್ದೇವೆ, ಅವುಗಳನ್ನು ಖಂಡಿತವಾಗಿಯೂ ಕೆಡವುತ್ತೇವೆ. ಇದನ್ನು ಸಂಬಂಧಪಟ್ಟ ಅಧಿಕಾರಿ ನಿರ್ಧರಿಸುತ್ತಾರೆ. ಅನುಸರಣೆ ವರದಿಯನ್ನು ನಾನು ಹೈಕೋರ್ಟ್‌ಗೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ತಪ್ಪು ಯೋಜನೆಗಳಿಗೆ ಮಂಜೂರಾತಿ ನೀಡುವುದಿಲ್ಲ. ಬಿಲ್ಡರ್‌ಗಳೇ ನಿಯಮಗಳನ್ನು ಉಲ್ಲಂಘಿಸುತ್ತಾರೆ ಎಂದು ಹೇಳಿದ ಅವರು, “ಯಾವ ಯೋಜನೆಗೆ ಅನುಮೋದನೆ ನೀಡಲಾಗುತ್ತದೆಯೋ ಅವುಗಳಷ್ಟೆ ಸರಿಯಾದದು ಮತ್ತು ಕಾನೂನುಬದ್ಧವಾಗಿರುತ್ತದೆ. ಕಟ್ಟಡ ನಿರ್ಮಾಣದಲ್ಲಿ ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಬಿಲ್ಡರ್ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ್ದಾರೆಯೇ ಎಂದು ಪರಿಶೀಲಿಸುವ ಜವಾಬ್ದಾರಿ ಆಸ್ತಿಯನ್ನು ಖರೀದಿಸುವವರ ಮೇಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....