Homeಕರ್ನಾಟಕಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಅಧಿಕ ಅನಧೀಕೃತ ಕಟ್ಟಡಗಳು: ಬಿಬಿಎಂಪಿ ಸಮೀಕ್ಷೆ

- Advertisement -
- Advertisement -

ಬೆಂಗಳೂರಿನಾದ್ಯಂತ 1.8 ಲಕ್ಷಕ್ಕೂ ಹೆಚ್ಚು ಕಟ್ಟಡಗಳು ಅನಧೀಕೃತ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಿದೆ ಎಂದು ನ್ಯೂಸ್ ಮಿನಿಟ್‌ ಶನಿವಾರ ವರದಿ ಮಾಡಿದೆ. ನಗರದಲ್ಲಿನ ಅಕ್ರಮ ಮತ್ತು ಅನಧಿಕೃತ ಕಟ್ಟಡಗಳ ಕುರಿತು ಬಿಬಿಎಂಪಿ ಸಮೀಕ್ಷೆ ನಡೆಸುತ್ತಿದೆ.

‘‘ಬಿಬಿಎಂಪಿಯಿಂದ ಅನುಮತಿ ಪಡೆಯದೆ ಅಥವಾ ಬಿಬಿಎಂಪಿ ಅನುಮತಿ ನೀಡದೆ ಕಟ್ಟುವ ಕಟ್ಟಡಗಳು ಅನಧಿಕೃತವಾಗಿದ್ದು, ಇದನ್ನು ಬಿ-ಖಾತಾ ಆಸ್ತಿಗಳು ಎಂದು ಗುರುತಿಸಲಾಗುತ್ತದೆ” ಎಂದು ಬಿಬಿಎಂಪಿ ಯೋಜನೆಗಳ ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1.8 ಲಕ್ಷ ಅನಧಿಕೃತ ಕಟ್ಟಡಗಳು ಮಾತ್ರವಲ್ಲದೆ, ಮಂಜೂರಾದ ಯೋಜನೆಗಳನ್ನು ಬಿಟ್ಟು ಬೇರೆಯೆ ಯೋಜನೆ ರೂಪಿಸಿ ಕಟ್ಟಲಾಗಿರುವ ಸುಮಾರು 36,759 ಕಟ್ಟಡಗಳನ್ನು ಸಹ ಬಿಬಿಎಂಪಿ ಪತ್ತೆ ಮಾಡಿದೆ. ಯಾವುದೇ ಕಟ್ಟಡವನ್ನು ಕಟ್ಟುವಾಗ ಅದರ ಸುತ್ತ ಇರಬೇಕಾದ ಕನಿಷ್ಠ ಸ್ಥಳಾವಕಾಶ ನಿಯಮದ ಉಲ್ಲಂಘನೆ, ಹೆಚ್ಚುವರಿ ಮಹಡಿಗಳು ಹೊಂದಿರುವ ಕಟ್ಟಡಗಳು ಸೇರಿದಂತೆ ಹಲವು ನಿಯಮ ಪಾಲಿಸದೆ ಕಟ್ಟಿದ ಕಟ್ಟಡಗಳು ಅನಧೀಕೃತ ಕಟ್ಟಡಗಳಾಗಿವೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ಸಮೀಕ್ಷೆಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಬಿಬಿಎಂಪಿ ಹಲವು ಗಡುವುಗಳನ್ನು ಮೀರಿದೆ. ಆದರೂ ನಡೆಯುತ್ತಿರುವ ಸಮೀಕ್ಷೆ ಮುಗಿಯಲು ಕನಿಷ್ಠ ಎರಡು ತಿಂಗಳು ಬೇಕಾಗಬಹುದು ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

“ವಿಳಂಬಕ್ಕೆ ಮಳೆಗಾಲ ಸೇರಿದಂತೆ ಹಲವು ಕಾರಣಗಳಿವೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು ಬೇಕು. ನಮ್ಮ ಬಳಿ ಈಗ ಕೇವಲ ಒಂದು ಏಕೀಕೃತ ಅಂಕಿ ಅಂಶ ಇದೆ. ಆದ್ದರಿಂದ ಯಾವ ಪ್ರದೇಶಗಳಲ್ಲಿ ಅತಿ ಹೆಚ್ಚು ಅನಧೀಕೃತ ಕಟ್ಟಡಗಳಿವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದ್ದಾರೆ.

2022 ಮಾರ್ಚ್‌ ತಿಂಗಳಲ್ಲಿ ಅನಧಿಕೃತ ಆಸ್ತಿ ಮಾಲೀಕರಿಗೆ 10,000 ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಈ ನೋಟಿಸ್‌ಗೆ ಕಟ್ಟಡ ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ನಾವು ಹೊಸ ನೋಟಿಸ್ ಕಳುಹಿಸುತ್ತೇವೆ. ಮಂಜೂರಾದ ಯೋಜನೆಗೂ, ಕಟ್ಟಡಗಳಿಗೂ ಶೇಕಡಾವಾರು ವ್ಯತ್ಯಾಸಗಳಿರುವುದರಿಂದ ನೋಟೀಸ್‌ಗಳನ್ನು ನೀಡುವುದರ ಬಗ್ಗೆ ವಿವಿಧ ಹಂತಗಳಿವೆ. ಕೆಲವು ಕಟ್ಟಡಗಳು 10%, 12%, 15%, ಮತ್ತು ಕೆಲವು 25% ಅಸಂಗತತೆಯನ್ನು ಹೊಂದಿವೆ. ನೋಟಿಸ್ ಕಳುಹಿಸಲು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ” ಎಂದು ವಿಶೇಷ ಆಯುಕ್ತ ರವೀಂದ್ರ ಪಿಎನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಅಕ್ರಮ ಕಟ್ಟಡಗಳನ್ನು ಕೆಡವಲು ಮತ್ತು ಅನುಪಾಲನಾ ವರದಿಯನ್ನು ಸಲ್ಲಿಸಲು ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸರ್ವೆ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ನಂತರ ಏಕಕಾಲದಲ್ಲಿ ಕಟ್ಟಡ ಮಾಲೀಕರಿಗೆ ನೋಟಿಸ್ ಕಳುಹಿಸುತ್ತೇವೆ. ನಿರ್ದಿಷ್ಟ ಸಂದರ್ಭಗಳಲ್ಲಿ ನಾನು ಖಂಡಿತವಾಗಿಯೂ ಕೆಡವಲು ನಿರ್ದೇಶನಗಳನ್ನು ನೀಡುತ್ತೇನೆ. ನಾವು ಸಂಪೂರ್ಣ ಅನಧಿಕೃತ ಕಟ್ಟಡಗಳನ್ನು ಗುರುತಿಸಿದ್ದೇವೆ, ಅವುಗಳನ್ನು ಖಂಡಿತವಾಗಿಯೂ ಕೆಡವುತ್ತೇವೆ. ಇದನ್ನು ಸಂಬಂಧಪಟ್ಟ ಅಧಿಕಾರಿ ನಿರ್ಧರಿಸುತ್ತಾರೆ. ಅನುಸರಣೆ ವರದಿಯನ್ನು ನಾನು ಹೈಕೋರ್ಟ್‌ಗೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ತಪ್ಪು ಯೋಜನೆಗಳಿಗೆ ಮಂಜೂರಾತಿ ನೀಡುವುದಿಲ್ಲ. ಬಿಲ್ಡರ್‌ಗಳೇ ನಿಯಮಗಳನ್ನು ಉಲ್ಲಂಘಿಸುತ್ತಾರೆ ಎಂದು ಹೇಳಿದ ಅವರು, “ಯಾವ ಯೋಜನೆಗೆ ಅನುಮೋದನೆ ನೀಡಲಾಗುತ್ತದೆಯೋ ಅವುಗಳಷ್ಟೆ ಸರಿಯಾದದು ಮತ್ತು ಕಾನೂನುಬದ್ಧವಾಗಿರುತ್ತದೆ. ಕಟ್ಟಡ ನಿರ್ಮಾಣದಲ್ಲಿ ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಬಿಲ್ಡರ್ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿದ್ದಾರೆಯೇ ಎಂದು ಪರಿಶೀಲಿಸುವ ಜವಾಬ್ದಾರಿ ಆಸ್ತಿಯನ್ನು ಖರೀದಿಸುವವರ ಮೇಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...