Homeರೈತ ಹೋರಾಟರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ಈ ಹಾಡು ವೈರಲ್ ಆದ ನಂತರ ಶ್ರೀ ಬ್ರಾರ್‌ರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 50 ದಿನಗಳನ್ನು ಪೂರೈಸಿದೆ. ಅದೇ ರೀತಿಯಾಗಿ ಈ ಹೋರಾಟ ಬೆಂಬಲಿಸಿ ತಯಾರಾದ ಕಿಸಾನ್ ಆಂಥೆಮ್ (ರೈತ ಗೀತೆ) ಅನ್ನು ಬರೋಬ್ಬರಿ 2 ಕೋಟಿ ಜನ ವೀಕ್ಷಿಸುವ ಮೂಲಕ ಬೆಂಬಲ ಸೂಚಿಸಿದ್ದಾರೆ. ದೆಹಲಿ ಹೋರಾಟದ ಅಧಿಕೃತ ಗೀತೆಯಾಗಿ ಹೊರಹೊಮ್ಮಿರುವ ಈ ಕಿಸಾನ್ ಆಂಥೆಮ್ ರಚಿಸಿದ ಪವನ್ ದೀಪ್‌ ಆಲಿಯಾಸ್ ಶ್ರೀ ಬ್ರಾರ್‌ರನ್ನು ಪಟಿಯಾಲ CIA ಪೊಲೀಸರು ಬಂಧಿಸಿದ್ದು ಒಂದು ವಾರಗಳ ನಂತರ ನಿನ್ನೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶ್ರೀ ಬ್ರಾರ್ ರಚಿಸಿರುವ “ಸ್ವರಾಜ ಪಿಚೆ ಬರಿಗೇಟ್ ಪಾಯೆ ಹೋಯಿ ನೆ” ಹಾಡು ಲಕ್ಷಾಂತರ ಜನರಿಗೆ ಈ ಆಂದೋಲನಕ್ಕೆ ಸೇರಲು ಪ್ರೇರಣೆ ನೀಡಿತು. ಆದರೆ ಇದು ಕೇಂದ್ರ ಮತ್ತು ಗೃಹ ಸಚಿವಾಲಯದ ಕಣ್ಣು ಕೆಂಪಾಗಿಸಿತು. ಇದಕ್ಕಾಗಿಯೇ ಶ್ರೀ ಬ್ರಾರ್ ಅವರು ಒಂದು ತಿಂಗಳ ಹಿಂದೆ ಬರೆದ ಮತ್ತೊಂದು ಹಾಡಿಗೆ ಸಂಬಂಧಿಸಿದಂತೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಅವರನ್ನು ಪಟಿಯಾಲ ಪೊಲೀಸರು ಬಂಧಿಸಿದ್ದಾರೆ ಎಂದು ಯುವ ಅಕಾಲಿ ದಳದ ಅಧ್ಯಕ್ಷ ಪರಂಬನ್ಸ್ ಸಿಂಗ್ ರೊಮಾನಾ ಆರೋಪಿಸಿದ್ದಾರೆ.

ಅವರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಹುನ್ನಾರವಿದೆ. ಪಟಿಯಾಲ ಪೊಲೀಸರು ಶ್ರೀ ಬ್ರಾರ್‌ರನ್ನು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡುತ್ತಿದೆ ಎಂದು ದೂರಿದ್ದಾರೆ.

ರಾಜಸ್ಥಾನದ ಹನುಮನ್‌ಗರ್‍ ಜಿಲ್ಲೆಯ ಸಿಲ್ವಾಲಾ ಖುರ್ದ್ ಗ್ರಾಮದವರಾದ ಶ್ರೀ ಬ್ರಾರ್ ರವರು ಒಂದು ತಿಂಗಳ ಹಿಂದೆ ಜಾನ್ ಎಂಬ ಗೀತೆಯನ್ನು ಬಿಡುಗಡೆ ಮಾಡಿದ್ದರು. ಆನಂತರ ಕಿಸಾನ್ ಆಂಥೆಮ್ ರಚಿಸಿದ್ದರು. ಇದು ಸಾಕಷ್ಟು ವೈರಲ್ ಆಯಿತು. ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ಪ್ರತಿಯೊಂದು ಟ್ರಾಕ್ಟರ್‌ಗಳಲ್ಲಿಯೂ ಪ್ರತಿದಿನ ಈ ಹಾಡು ಜೋರಾಗಿ ಕೇಳಿಬರುತ್ತದೆ. ಒಂದು ತಿಂಗಳ ಹಿಂದೆ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆದ ಈ ಹಾಡನ್ನು ಇದುವರೆಗೂ 2.1 ಕೋಟಿ ಜನ ವೀಕ್ಷಿಸಿದ್ದಾರೆ. ಅಲ್ಲದೆ 8 ಲಕ್ಷಕ್ಕೂ ಅಧಿಕ ಲೈಕ್ಸ್‌ಗಳು ದಾಖಲಾಗಿವೆ.

ವೈರಲ್ ಆದ ಕಿಸಾನ್ ಆಂಥೆಮ್ ನೋಡಿ.

ಈ ಹಾಡು ವೈರಲ್ ಆದ ನಂತರ ಅವರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪ್ರಚೋದನೆ ಮತ್ತು ಅಸಮಾಧಾನ ಕಾಯ್ದೆ 1922 ರ ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪಟಿಯಾಲದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಧವಾರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದು ಸ್ವೀಕರಾರ್ಹವಲ್ಲ ಎಂಬ ಟೀಕೆಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...