Homeರೈತ ಹೋರಾಟರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ಈ ಹಾಡು ವೈರಲ್ ಆದ ನಂತರ ಶ್ರೀ ಬ್ರಾರ್‌ರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 50 ದಿನಗಳನ್ನು ಪೂರೈಸಿದೆ. ಅದೇ ರೀತಿಯಾಗಿ ಈ ಹೋರಾಟ ಬೆಂಬಲಿಸಿ ತಯಾರಾದ ಕಿಸಾನ್ ಆಂಥೆಮ್ (ರೈತ ಗೀತೆ) ಅನ್ನು ಬರೋಬ್ಬರಿ 2 ಕೋಟಿ ಜನ ವೀಕ್ಷಿಸುವ ಮೂಲಕ ಬೆಂಬಲ ಸೂಚಿಸಿದ್ದಾರೆ. ದೆಹಲಿ ಹೋರಾಟದ ಅಧಿಕೃತ ಗೀತೆಯಾಗಿ ಹೊರಹೊಮ್ಮಿರುವ ಈ ಕಿಸಾನ್ ಆಂಥೆಮ್ ರಚಿಸಿದ ಪವನ್ ದೀಪ್‌ ಆಲಿಯಾಸ್ ಶ್ರೀ ಬ್ರಾರ್‌ರನ್ನು ಪಟಿಯಾಲ CIA ಪೊಲೀಸರು ಬಂಧಿಸಿದ್ದು ಒಂದು ವಾರಗಳ ನಂತರ ನಿನ್ನೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶ್ರೀ ಬ್ರಾರ್ ರಚಿಸಿರುವ “ಸ್ವರಾಜ ಪಿಚೆ ಬರಿಗೇಟ್ ಪಾಯೆ ಹೋಯಿ ನೆ” ಹಾಡು ಲಕ್ಷಾಂತರ ಜನರಿಗೆ ಈ ಆಂದೋಲನಕ್ಕೆ ಸೇರಲು ಪ್ರೇರಣೆ ನೀಡಿತು. ಆದರೆ ಇದು ಕೇಂದ್ರ ಮತ್ತು ಗೃಹ ಸಚಿವಾಲಯದ ಕಣ್ಣು ಕೆಂಪಾಗಿಸಿತು. ಇದಕ್ಕಾಗಿಯೇ ಶ್ರೀ ಬ್ರಾರ್ ಅವರು ಒಂದು ತಿಂಗಳ ಹಿಂದೆ ಬರೆದ ಮತ್ತೊಂದು ಹಾಡಿಗೆ ಸಂಬಂಧಿಸಿದಂತೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಅವರನ್ನು ಪಟಿಯಾಲ ಪೊಲೀಸರು ಬಂಧಿಸಿದ್ದಾರೆ ಎಂದು ಯುವ ಅಕಾಲಿ ದಳದ ಅಧ್ಯಕ್ಷ ಪರಂಬನ್ಸ್ ಸಿಂಗ್ ರೊಮಾನಾ ಆರೋಪಿಸಿದ್ದಾರೆ.

ಅವರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಹುನ್ನಾರವಿದೆ. ಪಟಿಯಾಲ ಪೊಲೀಸರು ಶ್ರೀ ಬ್ರಾರ್‌ರನ್ನು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡುತ್ತಿದೆ ಎಂದು ದೂರಿದ್ದಾರೆ.

ರಾಜಸ್ಥಾನದ ಹನುಮನ್‌ಗರ್‍ ಜಿಲ್ಲೆಯ ಸಿಲ್ವಾಲಾ ಖುರ್ದ್ ಗ್ರಾಮದವರಾದ ಶ್ರೀ ಬ್ರಾರ್ ರವರು ಒಂದು ತಿಂಗಳ ಹಿಂದೆ ಜಾನ್ ಎಂಬ ಗೀತೆಯನ್ನು ಬಿಡುಗಡೆ ಮಾಡಿದ್ದರು. ಆನಂತರ ಕಿಸಾನ್ ಆಂಥೆಮ್ ರಚಿಸಿದ್ದರು. ಇದು ಸಾಕಷ್ಟು ವೈರಲ್ ಆಯಿತು. ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ಪ್ರತಿಯೊಂದು ಟ್ರಾಕ್ಟರ್‌ಗಳಲ್ಲಿಯೂ ಪ್ರತಿದಿನ ಈ ಹಾಡು ಜೋರಾಗಿ ಕೇಳಿಬರುತ್ತದೆ. ಒಂದು ತಿಂಗಳ ಹಿಂದೆ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆದ ಈ ಹಾಡನ್ನು ಇದುವರೆಗೂ 2.1 ಕೋಟಿ ಜನ ವೀಕ್ಷಿಸಿದ್ದಾರೆ. ಅಲ್ಲದೆ 8 ಲಕ್ಷಕ್ಕೂ ಅಧಿಕ ಲೈಕ್ಸ್‌ಗಳು ದಾಖಲಾಗಿವೆ.

ವೈರಲ್ ಆದ ಕಿಸಾನ್ ಆಂಥೆಮ್ ನೋಡಿ.

ಈ ಹಾಡು ವೈರಲ್ ಆದ ನಂತರ ಅವರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪ್ರಚೋದನೆ ಮತ್ತು ಅಸಮಾಧಾನ ಕಾಯ್ದೆ 1922 ರ ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪಟಿಯಾಲದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಧವಾರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದು ಸ್ವೀಕರಾರ್ಹವಲ್ಲ ಎಂಬ ಟೀಕೆಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...