Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...