Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...